ಎದುರಿಗಿರುವ ವಸ್ತುಗಳನ್ನು ಸೆನ್ಸ್‌ ಮಾಡುತ್ತೆ, ಅಂಧರಿಗಾಗಿ ವಿಶೇಷ ಕನ್ನಡಕ ತಯಾರಿಸಿದ ವಿದ್ಯಾರ್ಥಿ

ಎದುರಿಗಿರುವ ವಸ್ತುಗಳನ್ನು ಸೆನ್ಸ್‌ ಮಾಡುತ್ತೆ, ಅಂಧರಿಗಾಗಿ ವಿಶೇಷ ಕನ್ನಡಕ ತಯಾರಿಸಿದ ವಿದ್ಯಾರ್ಥಿ

Suvarna News   | Asianet News
Published : Mar 11, 2022, 01:21 PM ISTUpdated : Mar 11, 2022, 01:59 PM IST

ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ 9 ನೇ ವ್ಯಾಸಂಗ ಮಾಡುತ್ತಿರುವ ದೀಕ್ಷಿತ್ ಕಳೆದ ಎರಡು ತಿಂಗಳಿಂದ ಈ ಕನ್ನಡಕ ತಯಾರಿಸಲು ಸಾಕಷ್ಟು ಶ್ರಮ ಪಟ್ಟಿದ್ದಾನೆ. ಅದರ ಫಲವಾಗಿ ಕೊನೆಗೂ ಕಣ್ಣಿಲ್ಲದವರಿಗೆ ಈ ವಿನೂತನವಾದ ಕನ್ನಡಕ ಕಂಡು ಹಿಡಿದಿದ್ದಾನೆ. 

ಮಡಿಕೇರಿ (ಮಾ. 11): ಸಾಮಾನ್ಯವಾಗಿ ಅಂದರು ಕಣ್ಣಿಗೆ ಕಪ್ಪು ಕನ್ನಡಕ ಹಾಕಿರುತ್ತಾರೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಲ್ಲ.ಆದರೆ ಇಲ್ಲಿ ವಿದ್ಯಾರ್ಥಿಯೊಬ್ಬ ಅಂದರಿಗಾಗಿ ಕನ್ನಡಕವೊಂದನ್ನು ಕಂಡು ಹಿಡಿದಿದ್ದಾನೆ.ಈ ಕನ್ನಡಕ ಹಾಕಿಕೊಂಡರೆ ಎದುರಿಗೆ ಏನೇ ಇದ್ದರು ಅಂದರಿಗೆ ಸೂಚನೆ ನೀಡುತ್ತದೆ. 

ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ 9 ನೇ ವ್ಯಾಸಂಗ ಮಾಡುತ್ತಿರುವ ದೀಕ್ಷಿತ್ ಕಳೆದ ಎರಡು ತಿಂಗಳಿಂದ ಈ ಕನ್ನಡಕ ತಯಾರಿಸಲು ಸಾಕಷ್ಟು ಶ್ರಮ ಪಟ್ಟಿದ್ದಾನೆ. ಅದರ ಫಲವಾಗಿ ಕೊನೆಗೂ ಕಣ್ಣಿಲ್ಲದವರಿಗೆ ಈ ವಿನೂತನವಾದ ಕನ್ನಡಕ ಕಂಡು ಹಿಡಿದಿದ್ದಾನೆ. ಈ ಕನ್ನಡಕದ ವಿಶೇಷತೆ ಏನು ಅಂತ ನೋಡೋದಾದರೆ, ಇದನ್ನು ಹಾಕಿ ನಡೆಯುತ್ತಿದ್ದರೆ ಮುಂದೆ ಏನೇ ಇದ್ದರೂ ಒಂದು ಮೀಟರ್ ದೂರದಲ್ಲಿಯೇ ವಿಶಲ್ ಹಾಕುತ್ತೆ ಅಂದರೆ ಬೀಪ್ ಶಬ್ದ ಬರುತ್ತದೆ. ಇದರಿಂದ ಮುಂದೆ ಏನೋ ಅಡೆತಡೆ ಇದೆ ಎಂದು ಅಂದರಿಗೆ ಅರಿವಾಗುತ್ತದೆ. ಈ ಕನ್ನಡಕಕ್ಕೆ ಚಾರ್ಜಿಂಗ್ ವ್ಯವಸ್ಥೆ ಇದೆ. ಜೊತೆಗೆ ಐದು ಗಂಟೆ ಬಿಸಿಲಿನಲ್ಲಿಟ್ಟರೆ ಸೂರ್ಯನ ಕಿರಣಗಳಿಂದಲೂ ಚಾರ್ಜ್ ಆಗುತ್ತದೆ. ಆದ್ದರಿಂದ ಅಂಧರು  ಈ ಕನ್ನಡಕ ಹಾಕಿಕೊಂಡರೆ ಯಾವುದೇ ಅಪಾಯವಿಲ್ಲದೆ ಮುಂದೆ ಸಾಗಬಹುದಾಗಿದೆ.

 ಇನ್ನೂ  ಈ ಕನ್ನಡಕ ತಯಾರಿಸಲು ಬೇಕಾದ ಪರಿಕರಗಳನ್ನು ಆನ್​ಲೈನ್ ಮೂಲಕ ತರಿಸಲಾಗಿದೆ. ಒಂದು ಕನ್ನಡಕ ತಯಾರಿಕೆಗೆ ಸುಮಾರು ಒಂದು ಸಾವಿರ ರೂ ಖರ್ಚಾಗುತ್ತದೆ. ಮಗನ ಈ ಸಾಧನೆಗೆ ಪೋಷಕರು ಹರ್ಷ ವ್ಯಕ್ತಪಡಿಸಿದರೆ ನಮ್ಮ ಶಾಲೆಯಲ್ಲಿ ಇಂತಹ ಪ್ರತಿಭೆ ಇರೋದು ಗೊತ್ತಿರಲಿಲ್ಲ.ಈಗ ತುಂಬಾ ಹೆಮ್ಮೆಯಾಗುತ್ತಿದೆ ಎನ್ನುತ್ತಿದ್ದಾರೆ ಶಿಕ್ಷಕ ವೃಂದದವರು. ಈ ಕನ್ನಡಕವನ್ನು ಮತ್ತಷ್ಟು ಅಭಿವೃದ್ದಿಪಡಿಸಲು ಈ ಯುವಕ ಮುಂದಾಗಿದ್ದಾನೆ. ಶಾಲೆ ಎಂದರೆ ಕೇವಲ ಓದು ಮಾತ್ರ ಅಲ್ಲ. ಅದರ ಜೊತೆಗೆ ಇಂತಹ ವಿಶೇಷ ಪ್ರತಿಭೆಗಳಿಗೆ ಶಾಲೆ ಒಂದು ಉತ್ತಮ ವೇದಿಕೆಯನ್ನು ನೀಡುತ್ತದೆ. ಅದಕ್ಕೆ  ಈ ವಿದ್ಯಾರ್ಥಿ ಸಾಕ್ಷಿಯಾಗಿದ್ದಾನೆ ಎನ್ನುತ್ತಾರೆ ಶಿಕ್ಷಕರು.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more