ಎದುರಿಗಿರುವ ವಸ್ತುಗಳನ್ನು ಸೆನ್ಸ್‌ ಮಾಡುತ್ತೆ, ಅಂಧರಿಗಾಗಿ ವಿಶೇಷ ಕನ್ನಡಕ ತಯಾರಿಸಿದ ವಿದ್ಯಾರ್ಥಿ

ಎದುರಿಗಿರುವ ವಸ್ತುಗಳನ್ನು ಸೆನ್ಸ್‌ ಮಾಡುತ್ತೆ, ಅಂಧರಿಗಾಗಿ ವಿಶೇಷ ಕನ್ನಡಕ ತಯಾರಿಸಿದ ವಿದ್ಯಾರ್ಥಿ

Suvarna News   | Asianet News
Published : Mar 11, 2022, 01:21 PM ISTUpdated : Mar 11, 2022, 01:59 PM IST

ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ 9 ನೇ ವ್ಯಾಸಂಗ ಮಾಡುತ್ತಿರುವ ದೀಕ್ಷಿತ್ ಕಳೆದ ಎರಡು ತಿಂಗಳಿಂದ ಈ ಕನ್ನಡಕ ತಯಾರಿಸಲು ಸಾಕಷ್ಟು ಶ್ರಮ ಪಟ್ಟಿದ್ದಾನೆ. ಅದರ ಫಲವಾಗಿ ಕೊನೆಗೂ ಕಣ್ಣಿಲ್ಲದವರಿಗೆ ಈ ವಿನೂತನವಾದ ಕನ್ನಡಕ ಕಂಡು ಹಿಡಿದಿದ್ದಾನೆ. 

ಮಡಿಕೇರಿ (ಮಾ. 11): ಸಾಮಾನ್ಯವಾಗಿ ಅಂದರು ಕಣ್ಣಿಗೆ ಕಪ್ಪು ಕನ್ನಡಕ ಹಾಕಿರುತ್ತಾರೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಲ್ಲ.ಆದರೆ ಇಲ್ಲಿ ವಿದ್ಯಾರ್ಥಿಯೊಬ್ಬ ಅಂದರಿಗಾಗಿ ಕನ್ನಡಕವೊಂದನ್ನು ಕಂಡು ಹಿಡಿದಿದ್ದಾನೆ.ಈ ಕನ್ನಡಕ ಹಾಕಿಕೊಂಡರೆ ಎದುರಿಗೆ ಏನೇ ಇದ್ದರು ಅಂದರಿಗೆ ಸೂಚನೆ ನೀಡುತ್ತದೆ. 

ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ 9 ನೇ ವ್ಯಾಸಂಗ ಮಾಡುತ್ತಿರುವ ದೀಕ್ಷಿತ್ ಕಳೆದ ಎರಡು ತಿಂಗಳಿಂದ ಈ ಕನ್ನಡಕ ತಯಾರಿಸಲು ಸಾಕಷ್ಟು ಶ್ರಮ ಪಟ್ಟಿದ್ದಾನೆ. ಅದರ ಫಲವಾಗಿ ಕೊನೆಗೂ ಕಣ್ಣಿಲ್ಲದವರಿಗೆ ಈ ವಿನೂತನವಾದ ಕನ್ನಡಕ ಕಂಡು ಹಿಡಿದಿದ್ದಾನೆ. ಈ ಕನ್ನಡಕದ ವಿಶೇಷತೆ ಏನು ಅಂತ ನೋಡೋದಾದರೆ, ಇದನ್ನು ಹಾಕಿ ನಡೆಯುತ್ತಿದ್ದರೆ ಮುಂದೆ ಏನೇ ಇದ್ದರೂ ಒಂದು ಮೀಟರ್ ದೂರದಲ್ಲಿಯೇ ವಿಶಲ್ ಹಾಕುತ್ತೆ ಅಂದರೆ ಬೀಪ್ ಶಬ್ದ ಬರುತ್ತದೆ. ಇದರಿಂದ ಮುಂದೆ ಏನೋ ಅಡೆತಡೆ ಇದೆ ಎಂದು ಅಂದರಿಗೆ ಅರಿವಾಗುತ್ತದೆ. ಈ ಕನ್ನಡಕಕ್ಕೆ ಚಾರ್ಜಿಂಗ್ ವ್ಯವಸ್ಥೆ ಇದೆ. ಜೊತೆಗೆ ಐದು ಗಂಟೆ ಬಿಸಿಲಿನಲ್ಲಿಟ್ಟರೆ ಸೂರ್ಯನ ಕಿರಣಗಳಿಂದಲೂ ಚಾರ್ಜ್ ಆಗುತ್ತದೆ. ಆದ್ದರಿಂದ ಅಂಧರು  ಈ ಕನ್ನಡಕ ಹಾಕಿಕೊಂಡರೆ ಯಾವುದೇ ಅಪಾಯವಿಲ್ಲದೆ ಮುಂದೆ ಸಾಗಬಹುದಾಗಿದೆ.

 ಇನ್ನೂ  ಈ ಕನ್ನಡಕ ತಯಾರಿಸಲು ಬೇಕಾದ ಪರಿಕರಗಳನ್ನು ಆನ್​ಲೈನ್ ಮೂಲಕ ತರಿಸಲಾಗಿದೆ. ಒಂದು ಕನ್ನಡಕ ತಯಾರಿಕೆಗೆ ಸುಮಾರು ಒಂದು ಸಾವಿರ ರೂ ಖರ್ಚಾಗುತ್ತದೆ. ಮಗನ ಈ ಸಾಧನೆಗೆ ಪೋಷಕರು ಹರ್ಷ ವ್ಯಕ್ತಪಡಿಸಿದರೆ ನಮ್ಮ ಶಾಲೆಯಲ್ಲಿ ಇಂತಹ ಪ್ರತಿಭೆ ಇರೋದು ಗೊತ್ತಿರಲಿಲ್ಲ.ಈಗ ತುಂಬಾ ಹೆಮ್ಮೆಯಾಗುತ್ತಿದೆ ಎನ್ನುತ್ತಿದ್ದಾರೆ ಶಿಕ್ಷಕ ವೃಂದದವರು. ಈ ಕನ್ನಡಕವನ್ನು ಮತ್ತಷ್ಟು ಅಭಿವೃದ್ದಿಪಡಿಸಲು ಈ ಯುವಕ ಮುಂದಾಗಿದ್ದಾನೆ. ಶಾಲೆ ಎಂದರೆ ಕೇವಲ ಓದು ಮಾತ್ರ ಅಲ್ಲ. ಅದರ ಜೊತೆಗೆ ಇಂತಹ ವಿಶೇಷ ಪ್ರತಿಭೆಗಳಿಗೆ ಶಾಲೆ ಒಂದು ಉತ್ತಮ ವೇದಿಕೆಯನ್ನು ನೀಡುತ್ತದೆ. ಅದಕ್ಕೆ  ಈ ವಿದ್ಯಾರ್ಥಿ ಸಾಕ್ಷಿಯಾಗಿದ್ದಾನೆ ಎನ್ನುತ್ತಾರೆ ಶಿಕ್ಷಕರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more