ಎದುರಿಗಿರುವ ವಸ್ತುಗಳನ್ನು ಸೆನ್ಸ್‌ ಮಾಡುತ್ತೆ, ಅಂಧರಿಗಾಗಿ ವಿಶೇಷ ಕನ್ನಡಕ ತಯಾರಿಸಿದ ವಿದ್ಯಾರ್ಥಿ

ಎದುರಿಗಿರುವ ವಸ್ತುಗಳನ್ನು ಸೆನ್ಸ್‌ ಮಾಡುತ್ತೆ, ಅಂಧರಿಗಾಗಿ ವಿಶೇಷ ಕನ್ನಡಕ ತಯಾರಿಸಿದ ವಿದ್ಯಾರ್ಥಿ

Suvarna News   | Asianet News
Published : Mar 11, 2022, 01:21 PM ISTUpdated : Mar 11, 2022, 01:59 PM IST

ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ 9 ನೇ ವ್ಯಾಸಂಗ ಮಾಡುತ್ತಿರುವ ದೀಕ್ಷಿತ್ ಕಳೆದ ಎರಡು ತಿಂಗಳಿಂದ ಈ ಕನ್ನಡಕ ತಯಾರಿಸಲು ಸಾಕಷ್ಟು ಶ್ರಮ ಪಟ್ಟಿದ್ದಾನೆ. ಅದರ ಫಲವಾಗಿ ಕೊನೆಗೂ ಕಣ್ಣಿಲ್ಲದವರಿಗೆ ಈ ವಿನೂತನವಾದ ಕನ್ನಡಕ ಕಂಡು ಹಿಡಿದಿದ್ದಾನೆ. 

ಮಡಿಕೇರಿ (ಮಾ. 11): ಸಾಮಾನ್ಯವಾಗಿ ಅಂದರು ಕಣ್ಣಿಗೆ ಕಪ್ಪು ಕನ್ನಡಕ ಹಾಕಿರುತ್ತಾರೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಲ್ಲ.ಆದರೆ ಇಲ್ಲಿ ವಿದ್ಯಾರ್ಥಿಯೊಬ್ಬ ಅಂದರಿಗಾಗಿ ಕನ್ನಡಕವೊಂದನ್ನು ಕಂಡು ಹಿಡಿದಿದ್ದಾನೆ.ಈ ಕನ್ನಡಕ ಹಾಕಿಕೊಂಡರೆ ಎದುರಿಗೆ ಏನೇ ಇದ್ದರು ಅಂದರಿಗೆ ಸೂಚನೆ ನೀಡುತ್ತದೆ. 

ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ 9 ನೇ ವ್ಯಾಸಂಗ ಮಾಡುತ್ತಿರುವ ದೀಕ್ಷಿತ್ ಕಳೆದ ಎರಡು ತಿಂಗಳಿಂದ ಈ ಕನ್ನಡಕ ತಯಾರಿಸಲು ಸಾಕಷ್ಟು ಶ್ರಮ ಪಟ್ಟಿದ್ದಾನೆ. ಅದರ ಫಲವಾಗಿ ಕೊನೆಗೂ ಕಣ್ಣಿಲ್ಲದವರಿಗೆ ಈ ವಿನೂತನವಾದ ಕನ್ನಡಕ ಕಂಡು ಹಿಡಿದಿದ್ದಾನೆ. ಈ ಕನ್ನಡಕದ ವಿಶೇಷತೆ ಏನು ಅಂತ ನೋಡೋದಾದರೆ, ಇದನ್ನು ಹಾಕಿ ನಡೆಯುತ್ತಿದ್ದರೆ ಮುಂದೆ ಏನೇ ಇದ್ದರೂ ಒಂದು ಮೀಟರ್ ದೂರದಲ್ಲಿಯೇ ವಿಶಲ್ ಹಾಕುತ್ತೆ ಅಂದರೆ ಬೀಪ್ ಶಬ್ದ ಬರುತ್ತದೆ. ಇದರಿಂದ ಮುಂದೆ ಏನೋ ಅಡೆತಡೆ ಇದೆ ಎಂದು ಅಂದರಿಗೆ ಅರಿವಾಗುತ್ತದೆ. ಈ ಕನ್ನಡಕಕ್ಕೆ ಚಾರ್ಜಿಂಗ್ ವ್ಯವಸ್ಥೆ ಇದೆ. ಜೊತೆಗೆ ಐದು ಗಂಟೆ ಬಿಸಿಲಿನಲ್ಲಿಟ್ಟರೆ ಸೂರ್ಯನ ಕಿರಣಗಳಿಂದಲೂ ಚಾರ್ಜ್ ಆಗುತ್ತದೆ. ಆದ್ದರಿಂದ ಅಂಧರು  ಈ ಕನ್ನಡಕ ಹಾಕಿಕೊಂಡರೆ ಯಾವುದೇ ಅಪಾಯವಿಲ್ಲದೆ ಮುಂದೆ ಸಾಗಬಹುದಾಗಿದೆ.

 ಇನ್ನೂ  ಈ ಕನ್ನಡಕ ತಯಾರಿಸಲು ಬೇಕಾದ ಪರಿಕರಗಳನ್ನು ಆನ್​ಲೈನ್ ಮೂಲಕ ತರಿಸಲಾಗಿದೆ. ಒಂದು ಕನ್ನಡಕ ತಯಾರಿಕೆಗೆ ಸುಮಾರು ಒಂದು ಸಾವಿರ ರೂ ಖರ್ಚಾಗುತ್ತದೆ. ಮಗನ ಈ ಸಾಧನೆಗೆ ಪೋಷಕರು ಹರ್ಷ ವ್ಯಕ್ತಪಡಿಸಿದರೆ ನಮ್ಮ ಶಾಲೆಯಲ್ಲಿ ಇಂತಹ ಪ್ರತಿಭೆ ಇರೋದು ಗೊತ್ತಿರಲಿಲ್ಲ.ಈಗ ತುಂಬಾ ಹೆಮ್ಮೆಯಾಗುತ್ತಿದೆ ಎನ್ನುತ್ತಿದ್ದಾರೆ ಶಿಕ್ಷಕ ವೃಂದದವರು. ಈ ಕನ್ನಡಕವನ್ನು ಮತ್ತಷ್ಟು ಅಭಿವೃದ್ದಿಪಡಿಸಲು ಈ ಯುವಕ ಮುಂದಾಗಿದ್ದಾನೆ. ಶಾಲೆ ಎಂದರೆ ಕೇವಲ ಓದು ಮಾತ್ರ ಅಲ್ಲ. ಅದರ ಜೊತೆಗೆ ಇಂತಹ ವಿಶೇಷ ಪ್ರತಿಭೆಗಳಿಗೆ ಶಾಲೆ ಒಂದು ಉತ್ತಮ ವೇದಿಕೆಯನ್ನು ನೀಡುತ್ತದೆ. ಅದಕ್ಕೆ  ಈ ವಿದ್ಯಾರ್ಥಿ ಸಾಕ್ಷಿಯಾಗಿದ್ದಾನೆ ಎನ್ನುತ್ತಾರೆ ಶಿಕ್ಷಕರು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more