ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

ವಿಶ್ವ ಪ್ರಸಿದ್ಧ ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಕೊರತೆ: ಗುಂಡಿ ಬಿದ್ದ ರಸ್ತೆ, ಧೂಳಿನಿಂದ ತುಂಬಿದ ಮಾರುಕಟ್ಟೆ!

Published : Nov 18, 2023, 10:32 AM IST

ಅದು ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೋಮೊಟೋ ಮಾರುಕಟ್ಟೆ, ಅಲ್ಲಿಂದ ದೇಶ-ವಿದೇಶಗಳಿಗೆ ಈ ಕೆಂಪು ಸೇಬು ರಫ್ತು ಮಾಡಲಾಗುತ್ತೆ. ಆದ್ರೆ ಅಲ್ಲಿರುವ ವ್ಯವಸ್ಥೆ ಮಾತ್ರ ಹೇಳ ತೀರದಾಗಿದೆ. 
 

ಕಣ್ಣು ಹಾಯಿಸಿದಷ್ಟು ಕಾಣುತ್ತಿರುವ ಟೊಮ್ಯಾಟೋ(Tomato) ಮಂಡಿಗಳು, ದೇಶದ ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಟೋಮೊಟೋ ಲಾರಿಗಳು, ಕಿತ್ತು ಹೋಗಿರುವ ರಸ್ತೆಗಳಲ್ಲಿ ಲಾರಿ ಚಾಲಕರು, ರೈತರು(Farmers) ಪರದಾಟ. ಈ  ದೃಶ್ಯ ಕಂಡುಬಂದಿದ್ದು ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ. ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೊಮ್ಯಾಟೋ ಮಾರುಕಟ್ಟೆ ಅಂತಾನೆ ಪ್ರಸಿದ್ಧಿ ಆಗಿರುವ ಕೋಲಾರ (Kolar) ಎಪಿಎಂಸಿ ಮಾರುಕಟ್ಟೆ(APMC market) ಇಡೀ ದೇಶ ಹಾಗೂ ವಿದೇಶದಲ್ಲಿ ಫೇಮಸ್. ಇಲ್ಲಿಂದ ದೇಶದ ಮೂಲೆ ಮೂಲೆಗಳಲ್ಲದೇ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಗೂ ಟೊಮ್ಯಾಟೋ ರಫ್ತು ಮಾಡಲಾಗುತ್ತೆ. ಇಂಥ ಪ್ರತಿಷ್ಠಿತ ಮಾರುಕಟ್ಟೆಗೆ ಮೂಲಭೂತ ಸೌಲಭ್ಯವೂ ಸರಿಯಾಗಿಲ್ಲ ಎಂದು ರೈತರ ಆಕ್ರೋಶ ಹೊರಹಾಕಿದ್ರು. ರಸ್ತೆಯಲ್ಲಿನ ಮಾರುದ್ದ ಗುಂಡಿಗಳನ್ನ ನೋಡ್ತಿದ್ರೆನೇ ಭಯವಾಗುತ್ತೆ.. ಇಂಥ ಗುಂಡಿಗಳಲ್ಲೇ ನಿತ್ಯವೂ ಟೊಮ್ಯಾಟೋ ಕ್ರೇಟ್ಗಳನ್ನು ತುಂಬಿದ ಲಾರಿಯನ್ನು ಚಲಾಯಿಸಬೇಕು.. ಲಾರಿ ಚಾಲರ ಪರದಾಟ ನೋಡೋಕೆ ಆಗ್ತಿಲ್ಲ. ಅಂತಿದ್ದಾರೆ ಮಂಡಿ ಮಾಲೀಕರು ಕೋಲಾರದ ಎಪಿಎಂಸಿ ಮಾರುಕಟ್ಟೆ ಹೇಳಿಕೊಳ್ಳೋಕೆ ಮಾತ್ರ ಏಷ್ಯಾದಲ್ಲೇ 2ನೇ ಅತೀ ದೊಡ್ಡ ಮಾರುಕಟ್ಟೆ.. ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಸರಿಯಾದ ರಸ್ತೆ ಇಲ್ಲದೆ ರೈತರು, ಲಾರಿ ಚಾಲಕರು ಪರದಾಡುವಂತಾಗಿದೆ. ಇನ್ನಾದ್ರೂ ಇಲ್ಲಿನ ಅವ್ಯವಸ್ಥೆ ಸರಿಪಡಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಪಿಜಿ‌ ಮಾಲೀಕರಿಗೆ ಬಿಬಿಎಂಪಿ‌ ಶಾ‌ಕ್..! ಅನಧಿಕೃತ, ನಿಯಮ ಬಾಹಿರ ಪಿಜಿಗಳ ವಿರುದ್ಧ ಸಮರ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more