ಈಡೇರದ ಬೃಹತ್ ಮಾರುಕಟ್ಟೆ ಭರವಸೆ, ಸಿಡಿದೆದ್ದ ರೈತರು: ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

ಈಡೇರದ ಬೃಹತ್ ಮಾರುಕಟ್ಟೆ ಭರವಸೆ, ಸಿಡಿದೆದ್ದ ರೈತರು: ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Published : Nov 25, 2023, 10:31 AM IST

ಅದು ಏಷ್ಯಾದಲ್ಲೇ 2ನೇ ಅತೀ ದೊಡ್ಡ ಟೊಮ್ಯಾಟೊ ಮಾರುಕಟ್ಟೆ. ರಾಜ್ಯ, ದೇಶ ಮಾತ್ರವಲ್ಲ ನೆರೆಯ ರಾಷ್ಟ್ರಗಳಿಗೂ ಇಲ್ಲಿಂದಲೇ ಟೊಮೊಟೊ ರಫ್ತು ಆಗ್ತಿದೆ. ಆದ್ರೇ ದೇಶ ವಿದೇಶಗಳಿಗೆ ಗೊತ್ತಿರುವ ಆ ಮಾರುಕಟ್ಟೆ ಮಹತ್ವ ರಾಜ್ಯ ಸರ್ಕಾರಕ್ಕೆ ಗೊತ್ತಾಗ್ತಿಲ್ಲ ಅಂತ ರೈತ ಸಂಘ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸ್ತಿದ್ದಾರೆ.
 

ಕೋಲಾರ ಎಪಿಎಂಸಿ ಮಾರುಕಟ್ಟೆ ತನ್ನದೇ ಇತಿಹಾಸ ಹೊಂದಿದೆ. ಏಷ್ಯಾದಲ್ಲೇ 2ನೇ ಅತಿದೊಡ್ಡ ಟೊಮ್ಯಾಟೊ ಮಾರುಕಟ್ಟೆ ಎಂಬ ಖ್ಯಾತಿಯೂ ಇದಕ್ಕಿದೆ. ಕೋಲಾರ(Kolar) ಜಿಲ್ಲೆಯೊಂದರಲ್ಲೇ ಸುಮಾರು 1,500 ಹೆಕ್ಟೇರ್ ಪ್ರದೇಶದಲ್ಲಿ ಟೊಮ್ಯಾಟೊ ಮತ್ತು ತರಕಾರಿ ಬೆಳೆಯಲಾಗುತ್ತೆ. ಹೀಗಾಗಿಯೇ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ದೇಶ ಮಾತ್ರವಲ್ಲದೆ ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಸೆರಿ ಹಲವು ಹಲವು ವಿದೇಶಗಳಿಗೂ ಟೊಮ್ಯಾಟೊ ರಫ್ತು ಮಾಡಲಾಗುತ್ತೆ. ಇಂಥ ಮಾರುಕಟ್ಟೆಗೆ ಜಾಗ ಸಾಕಾಗದೆ ರೈತರು(Farmers) ಪರದಾಡುವಂತಾಗಿದೆ. ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.ಹೀಗಾಗಿ ಜಾಗಕ್ಕಾಗಿ ಪ್ರತಿಭಟನೆ ಶುರುವಾಗಿದೆ. ಕೋಲಾರ ಎಪಿಎಂಸಿಗೆ(APMC) ಪ್ರತಿದಿನ 500ರಿಂದ 700 ಟನ್‌ಗಳಷ್ಟು ಟೊಮ್ಯಾಟೊ ವಿವಿಧ ಜಿಲ್ಲೆಗಳ ರೈತರು ತರ್ತಿದ್ದಾರೆ.. ಮಾರುಕಟ್ಟೆಯಲ್ಲಿ ಸದ್ಯ 18 ಎಕರೆ ಜಾಗವಿದ್ದರೂ ಇದ್ದರೂ ಸ್ಥಳಾವಕಾಶ ಸಮಸ್ಯೆ ಉದ್ಭವಿಸ್ತಿದೆ. ಮಾರುಕಟ್ಟೆಗೆ ಬರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಮಾರುಕಟ್ಟೆಗೆ ಕನಿಷ್ಠ 50ರಿಂದ 70 ಎಕರೆ ಜಮೀನು ಬೇಕಾಗಿದೆ. ಚುನಾವಣೆ ಸಂದರ್ಭದಲ್ಲಿ ಆಶ್ವಾಸನೆ ನೀಡಿದ್ದ ಜನಪ್ರತಿನಿಧಿಗಳು ಬೃಹತ್ ಮಾರುಕಟ್ಟೆ ನಿರ್ಮಾಣ ಕಾರ್ಯದತ್ತ ಕೈಹಾಕಿಲ್ಲ.ಹೀಗಾಗಿ ರೈತ ಸಂಘ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು. ವಿವಿಧ ತರಕಾರಿ, ಟೊಮ್ಯಾಟೊ, ಕೋಳಿ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಲಾಯ್ತು.. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆಗೆ ಮುಂದಾದಾಗ ಪ್ರತಿಭಟನಾಕಾರರನ್ನು ಪೊಲೀಸರು ತಡೆದ್ರು. ಕೆಲಕಾಲ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಕೋಲಾರ ಟೊಮ್ಯಾಟೊ ಮಾರುಕಟ್ಟೆ ಪ್ರತ್ಯೇಕಿಸಿ ಬೇರೆಡೆ ಮಾರುಕಟ್ಟೆ ನಿರ್ಮಿಸಲು ಮಂಗಸಂದ್ರ, ಚಲುವನಹಳ್ಳಿ, ಎಂಪೈಯರ್ ಹೋಟೆಲ್ ಹಿಂಭಾಗ ಸುಮಾರು 30 ಎಕರೆ ಗುರುತಿಸಲಾಗಿತ್ತು. ಆದ್ರೆ ವಿವಿಧ ಕಾರಣಾಂತರಗಳಿಂದ ಜಾಗ ಕೊಡಿಸಲು ಜಿಲ್ಲಾಡಳಿತಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ರೈತರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಕೊಂಡರಾಜನಹಳ್ಳಿ ಬಳಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ಕೊಟ್ಟ ಕೋಲಾರ ಜಿಲ್ಲಾಧಿಕಾರಿ ಅಕ್ರಂ ತಾಂತ್ರಿಕ ಸಮಸ್ಯೆಯಿಂದ ತಡವಾಗ್ತಿದೆ. ಜನವರಿ ತಿಂಗಳಲ್ಲಿ ಎಪಿಎಂಸಿಗೆ ಜಾಗ ಕೊಡಿಸುವ ಭರವಸೆ ನೀಡಿದ್ರು. ಇದರಿಂದ ಪ್ರತಿಭಟನೆ ಕೈಬಿಟ್ಟಿದ್ದಾರೆ. ಜಿಲ್ಲಾಧಿಕಾರಿಗಳ ಭರವಸೆಯಿಂದ ಸದ್ಯಕ್ಕೆ ಪ್ರತಿಭಟನೆ ಕೈಬಿಡಲಾಗಿದೆ. ಒಂದುವೇಳೆ ಜನವರಿಯಲ್ಲೂ ಬೃಹತ್ ಮಾರುಕಟ್ಟೆ ನಿರ್ಮಾಣ ಕಾರ್ಯ ಆರಂಭವಾಗದಿದ್ದರೆ ಮತ್ತೆ ಉಗ್ರ ಹೋರಾಟದ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more