Kolar: ಕೊರೋನಾ ವಾರಿಯರ್ಸ್‌ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!

Kolar: ಕೊರೋನಾ ವಾರಿಯರ್ಸ್‌ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!

Published : Feb 24, 2022, 03:25 PM ISTUpdated : Feb 24, 2022, 04:02 PM IST

*ಸಂಕಟ ಬಂದಾಗ ಇವರು ಬೇಕು,  ಸಂಬಳ ಕೊಡಲು ಸತಾಯಿಸ್ತಾರೆ!
*ಗುತ್ತಿಗೆ ಆಧಾರ ನೌಕರರ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!
*ಕೋವಿಡ್‌ ವೇಳೆ ಪುಗಸಟ್ಟೆ ಕೆಲಸ ಮಾಡಿಸಿದ ಅಧಿಕಾರಿಗಳು!
*6 ತಿಂಗಳಿನಿಂದ ಸಂಬಳ ಸಿಗದೇ ಸಂಕಷ್ಟದಲ್ಲಿರುವ ನೌಕರರು
*ಸಂಬಳಕ್ಕಾಗಿ ಗೋಗರೆಯುತ್ತಿರುವ ಗುತ್ತಿಗೆ ಆಧಾರ ನೌಕರರು 

ಕೋಲಾರ (ಫೆ. 24): ಒಂದು ಕಡೆ ಪಿಪಿಇ ಕಿಟ್ ಧರಿಸಿ ಕೆಲಸ ಮಾಡ್ತಿರುವ ನೌಕರರು. ಪ್ರಾಣವನ್ನು ಲೆಕ್ಕಿಸದೆ ಕೆಲಸ ಮಾಡಿದಕ್ಕೆ ಕೈಗೆ ಚಿಪ್ಪು ಕೊಟ್ಟಿರುವ ಅಧಿಕಾರಿಗಳು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ನೌಕರರು. ಅಂದಹಾಗೆ ಇವೆಲ್ಲಾ ದೃಶ್ಯಗಳು ನಮಗೆ ಕಂಡು ಬಂದಿದ್ದು ಕೋಲಾರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಓ ಕಚೇರಿಯ ಮುಂದೆ. ಈಗ ಸಂಬಳಕ್ಕಾಗಿ ಗೋಗರೆಯುತ್ತಿರುವ ಇವರೆಲ್ಲಾ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಿರುವ ನೌಕರರು. 

ರಾಜ್ಯದಲ್ಲಿ ಕೋವಿಡ್ ನ ತುರ್ತು ಪರಿಸ್ಥಿತಿ ಎದುರಾದಾಗ, ಖುದ್ದು ಸೋಂಕಿತರ ಕುಟುಂಬಸ್ಥರೇ ದೂರ ಉಳಿದ ವೇಳೆ ಇವರೆಲ್ಲಾ ಪ್ರಾಣದ ಹಂಗು ತೊರೆದು, ಅದೆಷ್ಟೋ ಬಾರಿ ಇವರಿಗೆ ಪಾಸಿಟಿವ್ ಬಂದರೂ ಸಹ ಕೆಲಸ ಮಾಡಿದ್ದಾರೆ. ಕೆಲವರು ದಿನದ 24  ಗಂಟೆಗೂ ಪಿಪಿಇ ಕಿಟ್ ಧರಿಸಿ ಕೆಲಸ ಮಾಡಿದ್ರೆ ,ಇನ್ನು ಕೆಲವರು ಸ್ವಚ್ಚತೆ ಕಾರ್ಯದಲ್ಲಿ ಕೆಲಸ ಮಾಡಿದ್ದಾರೆ. 

ಇದನ್ನೂ ಓದಿKolar: 5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೊರತೆ ಉಂಟಾದಾಗ ಗುತ್ತಿಗೆ ಆಧಾರದಲ್ಲಿ ನೇಮವಾಗಿರುವ ಇವರಿಗೆ ತಿಂಗಳಿಗೆ 20 ಸಾವಿರ ಸಂಬಳ ನಿಗದಿ ಸಹ ಮಾಡಿದ್ರು, ಆರಂಭದ 6 ತಿಂಗಳು ಸರಿಯಾಗಿ ಸಂಬಳ ಏನೋ ಬಂದಿದೆ.  ಆದ್ರೆ ಬಳಿಕ ಮನಸ್ಸಿಗೆ ಬಂದಾಗ ಸಂಬಳ ನೀಡಿದ್ದಾರೆ. ಹೇಗೋ ತಡವಾದ್ರೂ ಸಂಬಳ ಕೊಡ್ತಾರಲ್ಲ ಬಿಡು ಅಂತ ಇದ್ರೆ ಇದೀಗ ಕಳೆದ 6 ತಿಂಗಳಿನಿಂದ ಸಂಬಳ ಕೊಡೋದನ್ನೇ ನಿಲ್ಲಿಸಿದ್ದಾರೆ. ಈಗಾಗಿ ಇವರೆಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ತಿದ್ದಾರೆ. ಇಲ್ಲಿದೆ ಈ ಕುರಿತ ಒಂದು ವರದಿ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more