Kolar: ಕೊರೋನಾ ವಾರಿಯರ್ಸ್‌ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!

Kolar: ಕೊರೋನಾ ವಾರಿಯರ್ಸ್‌ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!

Published : Feb 24, 2022, 03:25 PM ISTUpdated : Feb 24, 2022, 04:02 PM IST

*ಸಂಕಟ ಬಂದಾಗ ಇವರು ಬೇಕು,  ಸಂಬಳ ಕೊಡಲು ಸತಾಯಿಸ್ತಾರೆ!
*ಗುತ್ತಿಗೆ ಆಧಾರ ನೌಕರರ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!
*ಕೋವಿಡ್‌ ವೇಳೆ ಪುಗಸಟ್ಟೆ ಕೆಲಸ ಮಾಡಿಸಿದ ಅಧಿಕಾರಿಗಳು!
*6 ತಿಂಗಳಿನಿಂದ ಸಂಬಳ ಸಿಗದೇ ಸಂಕಷ್ಟದಲ್ಲಿರುವ ನೌಕರರು
*ಸಂಬಳಕ್ಕಾಗಿ ಗೋಗರೆಯುತ್ತಿರುವ ಗುತ್ತಿಗೆ ಆಧಾರ ನೌಕರರು 

ಕೋಲಾರ (ಫೆ. 24): ಒಂದು ಕಡೆ ಪಿಪಿಇ ಕಿಟ್ ಧರಿಸಿ ಕೆಲಸ ಮಾಡ್ತಿರುವ ನೌಕರರು. ಪ್ರಾಣವನ್ನು ಲೆಕ್ಕಿಸದೆ ಕೆಲಸ ಮಾಡಿದಕ್ಕೆ ಕೈಗೆ ಚಿಪ್ಪು ಕೊಟ್ಟಿರುವ ಅಧಿಕಾರಿಗಳು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ನೌಕರರು. ಅಂದಹಾಗೆ ಇವೆಲ್ಲಾ ದೃಶ್ಯಗಳು ನಮಗೆ ಕಂಡು ಬಂದಿದ್ದು ಕೋಲಾರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಓ ಕಚೇರಿಯ ಮುಂದೆ. ಈಗ ಸಂಬಳಕ್ಕಾಗಿ ಗೋಗರೆಯುತ್ತಿರುವ ಇವರೆಲ್ಲಾ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಿರುವ ನೌಕರರು. 

ರಾಜ್ಯದಲ್ಲಿ ಕೋವಿಡ್ ನ ತುರ್ತು ಪರಿಸ್ಥಿತಿ ಎದುರಾದಾಗ, ಖುದ್ದು ಸೋಂಕಿತರ ಕುಟುಂಬಸ್ಥರೇ ದೂರ ಉಳಿದ ವೇಳೆ ಇವರೆಲ್ಲಾ ಪ್ರಾಣದ ಹಂಗು ತೊರೆದು, ಅದೆಷ್ಟೋ ಬಾರಿ ಇವರಿಗೆ ಪಾಸಿಟಿವ್ ಬಂದರೂ ಸಹ ಕೆಲಸ ಮಾಡಿದ್ದಾರೆ. ಕೆಲವರು ದಿನದ 24  ಗಂಟೆಗೂ ಪಿಪಿಇ ಕಿಟ್ ಧರಿಸಿ ಕೆಲಸ ಮಾಡಿದ್ರೆ ,ಇನ್ನು ಕೆಲವರು ಸ್ವಚ್ಚತೆ ಕಾರ್ಯದಲ್ಲಿ ಕೆಲಸ ಮಾಡಿದ್ದಾರೆ. 

ಇದನ್ನೂ ಓದಿKolar: 5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೊರತೆ ಉಂಟಾದಾಗ ಗುತ್ತಿಗೆ ಆಧಾರದಲ್ಲಿ ನೇಮವಾಗಿರುವ ಇವರಿಗೆ ತಿಂಗಳಿಗೆ 20 ಸಾವಿರ ಸಂಬಳ ನಿಗದಿ ಸಹ ಮಾಡಿದ್ರು, ಆರಂಭದ 6 ತಿಂಗಳು ಸರಿಯಾಗಿ ಸಂಬಳ ಏನೋ ಬಂದಿದೆ.  ಆದ್ರೆ ಬಳಿಕ ಮನಸ್ಸಿಗೆ ಬಂದಾಗ ಸಂಬಳ ನೀಡಿದ್ದಾರೆ. ಹೇಗೋ ತಡವಾದ್ರೂ ಸಂಬಳ ಕೊಡ್ತಾರಲ್ಲ ಬಿಡು ಅಂತ ಇದ್ರೆ ಇದೀಗ ಕಳೆದ 6 ತಿಂಗಳಿನಿಂದ ಸಂಬಳ ಕೊಡೋದನ್ನೇ ನಿಲ್ಲಿಸಿದ್ದಾರೆ. ಈಗಾಗಿ ಇವರೆಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ತಿದ್ದಾರೆ. ಇಲ್ಲಿದೆ ಈ ಕುರಿತ ಒಂದು ವರದಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more