Kolar: ಕೊರೋನಾ ವಾರಿಯರ್ಸ್‌ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!

Kolar: ಕೊರೋನಾ ವಾರಿಯರ್ಸ್‌ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!

Published : Feb 24, 2022, 03:25 PM ISTUpdated : Feb 24, 2022, 04:02 PM IST

*ಸಂಕಟ ಬಂದಾಗ ಇವರು ಬೇಕು,  ಸಂಬಳ ಕೊಡಲು ಸತಾಯಿಸ್ತಾರೆ!
*ಗುತ್ತಿಗೆ ಆಧಾರ ನೌಕರರ ಗೋಳು ಕೇಳೋರಿಲ್ಲ, ಸಂಬಳ ಕೊಡೋರಿಲ್ಲ!
*ಕೋವಿಡ್‌ ವೇಳೆ ಪುಗಸಟ್ಟೆ ಕೆಲಸ ಮಾಡಿಸಿದ ಅಧಿಕಾರಿಗಳು!
*6 ತಿಂಗಳಿನಿಂದ ಸಂಬಳ ಸಿಗದೇ ಸಂಕಷ್ಟದಲ್ಲಿರುವ ನೌಕರರು
*ಸಂಬಳಕ್ಕಾಗಿ ಗೋಗರೆಯುತ್ತಿರುವ ಗುತ್ತಿಗೆ ಆಧಾರ ನೌಕರರು 

ಕೋಲಾರ (ಫೆ. 24): ಒಂದು ಕಡೆ ಪಿಪಿಇ ಕಿಟ್ ಧರಿಸಿ ಕೆಲಸ ಮಾಡ್ತಿರುವ ನೌಕರರು. ಪ್ರಾಣವನ್ನು ಲೆಕ್ಕಿಸದೆ ಕೆಲಸ ಮಾಡಿದಕ್ಕೆ ಕೈಗೆ ಚಿಪ್ಪು ಕೊಟ್ಟಿರುವ ಅಧಿಕಾರಿಗಳು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ನೌಕರರು. ಅಂದಹಾಗೆ ಇವೆಲ್ಲಾ ದೃಶ್ಯಗಳು ನಮಗೆ ಕಂಡು ಬಂದಿದ್ದು ಕೋಲಾರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಓ ಕಚೇರಿಯ ಮುಂದೆ. ಈಗ ಸಂಬಳಕ್ಕಾಗಿ ಗೋಗರೆಯುತ್ತಿರುವ ಇವರೆಲ್ಲಾ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಿರುವ ನೌಕರರು. 

ರಾಜ್ಯದಲ್ಲಿ ಕೋವಿಡ್ ನ ತುರ್ತು ಪರಿಸ್ಥಿತಿ ಎದುರಾದಾಗ, ಖುದ್ದು ಸೋಂಕಿತರ ಕುಟುಂಬಸ್ಥರೇ ದೂರ ಉಳಿದ ವೇಳೆ ಇವರೆಲ್ಲಾ ಪ್ರಾಣದ ಹಂಗು ತೊರೆದು, ಅದೆಷ್ಟೋ ಬಾರಿ ಇವರಿಗೆ ಪಾಸಿಟಿವ್ ಬಂದರೂ ಸಹ ಕೆಲಸ ಮಾಡಿದ್ದಾರೆ. ಕೆಲವರು ದಿನದ 24  ಗಂಟೆಗೂ ಪಿಪಿಇ ಕಿಟ್ ಧರಿಸಿ ಕೆಲಸ ಮಾಡಿದ್ರೆ ,ಇನ್ನು ಕೆಲವರು ಸ್ವಚ್ಚತೆ ಕಾರ್ಯದಲ್ಲಿ ಕೆಲಸ ಮಾಡಿದ್ದಾರೆ. 

ಇದನ್ನೂ ಓದಿKolar: 5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೊರತೆ ಉಂಟಾದಾಗ ಗುತ್ತಿಗೆ ಆಧಾರದಲ್ಲಿ ನೇಮವಾಗಿರುವ ಇವರಿಗೆ ತಿಂಗಳಿಗೆ 20 ಸಾವಿರ ಸಂಬಳ ನಿಗದಿ ಸಹ ಮಾಡಿದ್ರು, ಆರಂಭದ 6 ತಿಂಗಳು ಸರಿಯಾಗಿ ಸಂಬಳ ಏನೋ ಬಂದಿದೆ.  ಆದ್ರೆ ಬಳಿಕ ಮನಸ್ಸಿಗೆ ಬಂದಾಗ ಸಂಬಳ ನೀಡಿದ್ದಾರೆ. ಹೇಗೋ ತಡವಾದ್ರೂ ಸಂಬಳ ಕೊಡ್ತಾರಲ್ಲ ಬಿಡು ಅಂತ ಇದ್ರೆ ಇದೀಗ ಕಳೆದ 6 ತಿಂಗಳಿನಿಂದ ಸಂಬಳ ಕೊಡೋದನ್ನೇ ನಿಲ್ಲಿಸಿದ್ದಾರೆ. ಈಗಾಗಿ ಇವರೆಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ತಿದ್ದಾರೆ. ಇಲ್ಲಿದೆ ಈ ಕುರಿತ ಒಂದು ವರದಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more