ಕೋಲಾರದ ಹಣ್ಣು ತರಕಾರಿಗಳಿಗೆ ಕುಗ್ಗಿದ ಬೇಡಿಕೆ, ಕೆ.ಸಿ.ವ್ಯಾಲಿ ವರವಲ್ಲ ಶಾಪ ಅಂತಿದ್ದಾರೆ ಕೃಷಿಕರು!

ಕೋಲಾರದ ಹಣ್ಣು ತರಕಾರಿಗಳಿಗೆ ಕುಗ್ಗಿದ ಬೇಡಿಕೆ, ಕೆ.ಸಿ.ವ್ಯಾಲಿ ವರವಲ್ಲ ಶಾಪ ಅಂತಿದ್ದಾರೆ ಕೃಷಿಕರು!

Published : Oct 08, 2021, 04:25 PM ISTUpdated : Oct 08, 2021, 05:35 PM IST

- ಕೋಲಾರ ಜಿಲ್ಲೆಯ ತರಕಾರಿಗಳಲ್ಲಿ ಮಾರಕ ರಾಸಾಯನಿಕ ಅಂಶದ ಆತಂಕ!

- ಜಿಲ್ಲೆಯ ಕೆರೆಗಳಲ್ಲಿನ ನೀರಲ್ಲಿ ಮಾರಕ ದ್ರಾವಣಗಳು ಬೆರೆತಿರುವ ಅನುಮಾನ

- 3ನೆ ಹಂತದ ಶುದ್ದೀಕರಣದ ನಂತರ ಕೆ.ಸಿ. ವ್ಯಾಲಿ ನೀರು ಹರಿಸಲು ಒತ್ತಾಯ

ಕೋಲಾರ (ಅ. 08): ಇಲ್ಲಿನ  ಕೃಷಿಕರಲ್ಲಿ ಆತಂಕ ಶುರುವಾಗಿದೆ. ಜಿಲ್ಲೆಯಲ್ಲಿ ಬೆಳೆದ ಹಣ್ಣು-ತರಕಾರಿಗಳಿಗೆ ಹೊರ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ. ಇಲ್ಲಿನ ಹಣ್ಣು-ತರಕಾರಿಗಳಲ್ಲಿ ಮಾರಕವಾದ ರಾಸಾಯನಿಕಗಳು ಬೆರೆತಿರುವ ಅನುಮಾನವೇ ಇದಕ್ಕೆ ಕಾರಣವಾಗಿದೆ. ಬೆಂಗಳೂರಿನ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯಲ್ಲಿ ಬೇಸಾಯಕ್ಕೆ ಬಳಸುತ್ತಿರುವುದೇ ಇದಕ್ಕೆ ಮೂಲವಾಗಿದೆ. 

ಕೆಸಿ ವ್ಯಾಲಿಯ ನೀರನ್ನು ಉಪಯೋಗಿಸಿಕೊಂಡು ತೆಗೆಯುತ್ತಿರುವ ಬೆಳೆಗಳು ಆಹಾರದಲ್ಲಿ ಬಳಸಲು ಯೋಗ್ಯವಲ್ಲ ಎಂದು ಸಣ್ಣದಾಗಿ ಪ್ರಚಾರ ಆರಂಭವಾಗಿದೆ. ಇದರಿಂದಾಗಿ ಜಿಲ್ಲೆಯ ಕೃಷಿ ಉತ್ಪನ್ನಗಳನ್ನು ಖರೀದಿಸಲು ಹೊರ ರಾಜ್ಯಗಳ ವ್ಯಾಪಾರಸ್ಥರು ಆಸಕ್ತಿಯನ್ನು ತೋರಿಸುತ್ತಿಲ್ಲ. ಬೆಂಗಳೂರಿನ ಒಳಚರಂಡಿ ನೀರು ಮತ್ತು ಕೈಗಾರಿಕೆಗಳಿಂದ ಹೊರ ಬರುವ ನೀರಿನಲ್ಲಿ ಮಾರಕ ರಾಸಾಯನಿಕಗಳು ಬೆರೆತಿರುತ್ತದೆ. ಇಂಥಹ ತ್ಯಾಜ್ಯ ನೀರನ್ನು ಮೂರು ಸಲ ಸಂಸ್ಕರಣೆ ಮಾಡಿದಲ್ಲಿ ಮಾತ್ರ ಶುದ್ದವಾಗುತ್ತದೆ. ಈ ಬಗ್ಗೆ ಸರ್ಕಾರವು ಗಮನ ಹರಿಸಿದರೆ ಕೃಷಿ ಉತ್ಪನ್ನಗಳಿಗೂ ಮೊದಲಿನ ಬೇಡಿಕೆ ಸಿಗುತ್ತದ ಅಂತಾರೆ ಕೃಷಿಕರು. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!