ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

Published : Oct 12, 2023, 11:35 AM IST

ಆ ಭಾಗದ ರೈತರೂ ವಿಪರೀತ ಬರದಿಂದ ತತ್ತರಿಸಿ ಹೋಗಿದ್ದಾರೆ.ಸಾಲಸೋಲ ಮಾಡಿ ಹಾಕಿರೋ ಬೆಳೆಗಳಿಗೆ ರೋಗ ಆವರಿಸಿ ಗಾಯದ ಮೇಲೆ ಬರೆ ಎಳೆದಂತಾಗ್ತಿದೆ.ಇದರ ನಡುವೆ ತರಕಾರಿಗಳ ಸಹವಾಸವೇ ಬೇಡ ಎಂದು ಹೂ ಬೆಳೆದ ಹಾಕಿದ ತಪ್ಪಿದೆ,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
 

ಹೆಚ್ಚಾಗಿ ತರಕಾರಿಯನ್ನೇ ಬೆಳೆಯುವ ಕೋಲಾರ(Kolar) ರೈತರು (Farmers)ಕಳೆದ ಎರಡು ಮೂರು ವರ್ಷಗಳಿಂದ ಬಂಡವಾಳ ಬಾರದೇ ರೋಸಿ ಹೋಗಿದ್ದಾರೆ. ಹಾಕಿದ ಬಂಡವಾಳ ಆದ್ರೂ ಬರಲಿ ಎಂದು ಕಡಿಮೆ ಬಂಡವಾಳದಲ್ಲಿ ಉತ್ತಮ ಲಾಭಕ್ಕಾಗಿ ಸುಮಾರು 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೇವಂತಿಗೆ, ಚೆಂಡು ಸೇರಿದಂತೆ ವಿವಿಧ ಬೆಳೆ ಬೆಳೆದಿದ್ದಾರೆ. ಆದ್ರೆ, ಬೆಲೆ ಕೇಳಿ ರೈತರು ತಮ್ಮ ತೋಟದಲ್ಲೇ ಬೆಳೆ ಬುಡ ಸಮೇತ ಕಿತ್ತು ಹಾಕಿದ್ದಾರೆ. ಹಬ್ಬದ ಸಂದರ್ಭದಲ್ಲಿ ಕೊಂಚ ಬೆಲೆ ಬಂದ್ರೆ ಈಗ ಪಿತೃ ಪಕ್ಷ ಆಗಿರೋದ್ರಿಂದ ಯಾವುದೇ ಸಭೆ, ಸಮಾರಂಭಗಳಿಲ್ಲದೆ ಹೂ ವ್ಯಾಪಾರ ಆಗುತ್ತಿಲ್ಲ. ಹೂಗಳಿಗೂ(Flowers) ಡಿಮ್ಯಾಂಡ್‌ ಕಡಿಮೆ ಆಗಿದೆ. ವ್ಯಾಪಾರವಿಲ್ಲದೇ ಹೂಗಳು ಒಣಗಿ ಹೋಗ್ತಿರೋದ್ರಿಂದ ರೈತರ ಬಳಿ ಖರೀದಿ ಮಾಡೋದಕ್ಕೆ ವ್ಯಾಪಾರಸ್ಥರು ಧೈರ್ಯ ಮಾಡ್ತಿಲ್ಲ.ಕೆಲ ದಿನಗಳ ಹಿಂದೆ ಇದ್ದ ಬೆಲೆಯಲ್ಲಿ ಶೇ.90 ರಷ್ಟೂ ಬೆಲೆ ಕುಸಿತವಾಗಿದೆ. ಗುಲಾಬಿ ಹೂ ಕೆಜಿ 10 ರುಪಾಯಿ, ಸೇವಂತಿಗೆ ಕೆಜಿ 10 ರುಪಾಯಿ, ಚಂಡು ಹೂ ಕೆಜಿ 4 ರುಪಾಯಿಗೆ ಮಾರಾಟವಾಗ್ತಿದ್ದು, ಹಾಕಿರುವ ಬಂಡವಾಳವೂ ಬಾರದೇ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ಹಳೇ ವೈಷಮ್ಯಕ್ಕೆ ಬಲಿಯಾದ ಚಿನ್ನದಂತ ಫಸಲು: ಬೆಳೆದ ಬೆಳೆ ಕೈಸೇರಲಿಲ್ಲ ಎಂದು ಅನ್ನದಾತ ಅಳಲು..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more