ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

ಬರದ ನಡುವೆ ಅನ್ನದಾತನಿಗೆ ಬರ ಸಿಡಿಲು: 3 ವರ್ಷದಿಂದ ಬಂಡವಾಳ ಬಾರದೇ ರೋಸಿ ಹೋದ ರೈತ

Published : Oct 12, 2023, 11:35 AM IST

ಆ ಭಾಗದ ರೈತರೂ ವಿಪರೀತ ಬರದಿಂದ ತತ್ತರಿಸಿ ಹೋಗಿದ್ದಾರೆ.ಸಾಲಸೋಲ ಮಾಡಿ ಹಾಕಿರೋ ಬೆಳೆಗಳಿಗೆ ರೋಗ ಆವರಿಸಿ ಗಾಯದ ಮೇಲೆ ಬರೆ ಎಳೆದಂತಾಗ್ತಿದೆ.ಇದರ ನಡುವೆ ತರಕಾರಿಗಳ ಸಹವಾಸವೇ ಬೇಡ ಎಂದು ಹೂ ಬೆಳೆದ ಹಾಕಿದ ತಪ್ಪಿದೆ,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
 

ಹೆಚ್ಚಾಗಿ ತರಕಾರಿಯನ್ನೇ ಬೆಳೆಯುವ ಕೋಲಾರ(Kolar) ರೈತರು (Farmers)ಕಳೆದ ಎರಡು ಮೂರು ವರ್ಷಗಳಿಂದ ಬಂಡವಾಳ ಬಾರದೇ ರೋಸಿ ಹೋಗಿದ್ದಾರೆ. ಹಾಕಿದ ಬಂಡವಾಳ ಆದ್ರೂ ಬರಲಿ ಎಂದು ಕಡಿಮೆ ಬಂಡವಾಳದಲ್ಲಿ ಉತ್ತಮ ಲಾಭಕ್ಕಾಗಿ ಸುಮಾರು 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೇವಂತಿಗೆ, ಚೆಂಡು ಸೇರಿದಂತೆ ವಿವಿಧ ಬೆಳೆ ಬೆಳೆದಿದ್ದಾರೆ. ಆದ್ರೆ, ಬೆಲೆ ಕೇಳಿ ರೈತರು ತಮ್ಮ ತೋಟದಲ್ಲೇ ಬೆಳೆ ಬುಡ ಸಮೇತ ಕಿತ್ತು ಹಾಕಿದ್ದಾರೆ. ಹಬ್ಬದ ಸಂದರ್ಭದಲ್ಲಿ ಕೊಂಚ ಬೆಲೆ ಬಂದ್ರೆ ಈಗ ಪಿತೃ ಪಕ್ಷ ಆಗಿರೋದ್ರಿಂದ ಯಾವುದೇ ಸಭೆ, ಸಮಾರಂಭಗಳಿಲ್ಲದೆ ಹೂ ವ್ಯಾಪಾರ ಆಗುತ್ತಿಲ್ಲ. ಹೂಗಳಿಗೂ(Flowers) ಡಿಮ್ಯಾಂಡ್‌ ಕಡಿಮೆ ಆಗಿದೆ. ವ್ಯಾಪಾರವಿಲ್ಲದೇ ಹೂಗಳು ಒಣಗಿ ಹೋಗ್ತಿರೋದ್ರಿಂದ ರೈತರ ಬಳಿ ಖರೀದಿ ಮಾಡೋದಕ್ಕೆ ವ್ಯಾಪಾರಸ್ಥರು ಧೈರ್ಯ ಮಾಡ್ತಿಲ್ಲ.ಕೆಲ ದಿನಗಳ ಹಿಂದೆ ಇದ್ದ ಬೆಲೆಯಲ್ಲಿ ಶೇ.90 ರಷ್ಟೂ ಬೆಲೆ ಕುಸಿತವಾಗಿದೆ. ಗುಲಾಬಿ ಹೂ ಕೆಜಿ 10 ರುಪಾಯಿ, ಸೇವಂತಿಗೆ ಕೆಜಿ 10 ರುಪಾಯಿ, ಚಂಡು ಹೂ ಕೆಜಿ 4 ರುಪಾಯಿಗೆ ಮಾರಾಟವಾಗ್ತಿದ್ದು, ಹಾಕಿರುವ ಬಂಡವಾಳವೂ ಬಾರದೇ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ಹಳೇ ವೈಷಮ್ಯಕ್ಕೆ ಬಲಿಯಾದ ಚಿನ್ನದಂತ ಫಸಲು: ಬೆಳೆದ ಬೆಳೆ ಕೈಸೇರಲಿಲ್ಲ ಎಂದು ಅನ್ನದಾತ ಅಳಲು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more