ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

ಕೋಲಾರದಲ್ಲಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ: ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ

Published : Apr 09, 2022, 12:04 PM IST

ಕೋಲಾರ ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

ಕೋಲಾರ (ಏ. 09): ನಗರದಲ್ಲಿ ನಡೆದ ಶ್ರೀರಾಮ ಶೋಭಾಯಾತ್ರೆ ಪಲ್ಲಕ್ಕಿಯಲ್ಲಿನ 16 ಅಡಿಗಳ ಶ್ರೀರಾಮ ದೇವರ ವಿಗ್ರಹಕ್ಕೆ ಕೆಲ ಕಿಡಿಗೇಡಿಗಳು ಸೋಮೇಶ್ವರ ಪಾಳ್ಳದ ಬಳಿ ಶ್ರೀನಿವಾಸಪುರ ವೃತ್ತದ ಬಳಿ  ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ.

 ಶ್ರೀರಾಮ ಶೋಭಾಯಾತ್ರೆ ಮೆರವಣಿಗೆ ಪ್ರಾರಂಭವಾಗಿ ಮುತ್ಯಾಲಪೇಟೆ ಮೂಲಕವಾಗಿ ಬಜಾರು ಬೀದಿಯುದ್ದಕ್ಕೂ ಹೊರಟ ಮೆರವಣಿಗೆ ವಿಠಲೇಶ್ವರಪಾಳ್ಳದಿಂದ ಜಹಾಂಗೀರ್‌ ಮೊಹಲ್ಲ ಮುಂಭಾಗದಲ್ಲಿ ಹಾದು ವಿರೂಪಾಕ್ಷಿ ರಸ್ತೆಗೆ ಹೋಗುವ ಸಂದರ್ಭದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಯಿತು. ಆಗ ಕೆಲ ಕಿಡಿಗೇಡಿಗಳು ಶ್ರೀರಾಮ ಪ್ರತಿಮೆಗೆ ಕಲ್ಲುಗಳನ್ನು ತೂರಿದ್ದಾರೆ. ಅನ್ಯ ಕೋಮಿಗೆ ಸೇರಿದ ಕೆಲವು ಯುವಕರು ಕಲ್ಲು ತೂರಾಟ ನಡೆಸಿದ್ದಾಗಿ ಹೇಳಲಾಗುತ್ತಿದೆ. ಕಲ್ಲು ತೂರಾಟ ಆರಂಭವಾಗುತ್ತಿದ್ದಂತೆ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟರಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಎರಡೂ ಸಮುದಾಯದ ಜನರನ್ನು ಚದುರಿಸಿದ ಕಾರಣ ಗಲಭೆ ತಣ್ಣಗಾಯಿತು. ಘಟನೆ ಸಂಬಂಧ ಮೂವರನ್ನು ಬಂಧಿಸಲಾಗಿದೆ. ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more