ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

Published : Nov 08, 2023, 02:03 PM IST

ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದ್ದು, ಎಲ್ಲ ರೋಗಗಳಿಗೆ ನೋವು ನಿವಾರಕ ಹೈಡೋಸ್‌ ಔಷಧಿ ನೀಡುತ್ತಾ ಜನರ ಜೀವದೊಂದಿಗೆ  ಚೆಲ್ಲಾಟವಾಡುತ್ತಿದ್ದಾರೆ.

ಬೀದರ್ (ನ.08): ರಾಜ್ಯದ ಗಡಿಭಾಗ ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಎಲ್ಲ ರೋಗಗಳಿಗೆ ನೋವು ನಿವಾರಕ ಔಷಧಿ ಹಾಗೂ ಮಾತ್ರೆಗಳನ್ನೂ ನೀಡುತ್ತಾ ಜನರ ಜೀವದ ಜೊತೆಗೆ ಆಟವಾಡುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಜನರು ಕಿಡ್ನಿ ಹಾಗೀ ಇತರೆ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತಿದ್ದರೆ, ಇನ್ನು ಮಕ್ಕಳು ಜೀವಕ್ಕೆ ಬಲಿಯಾಗುತ್ತಿದ್ದಾರೆ. ಬೀದರ್‌ನಲ್ಲಿ ಕಲ್ಕತ್ತಾ ಡಾಕ್ಟರ್ ಗಳ ವಿರುದ್ಧ ಬೀದರ್ ಆರೋಗ್ಯ ಇಲಾಖೆ ಈಗ ಸಮರವನ್ನು ಸಾರಿದೆ.  ನಕಲಿ ಕಲ್ಕತ್ತಾ ಡಾಕ್ಟರ್ ಗಳ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್ ಗಳ ಹಾವಳಿ ಕುರಿತು ಕವರ್ ಸ್ಟೋರಿಯಲ್ಲಿ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಬೀದರ್ ಜಿಲ್ಲಾಡಳಿತವು ಮೆಡಿಕಲ್ ಆ್ಯಕ್ಟ್ ಪ್ರಕಾರ ನಕಲಿ ಡಾಕ್ಟರ್ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಯಾವುದೇ ದಾಖಲೆ ಇಲ್ಲದೇ ಪ್ರ್ಯಾಕ್ಟೀಸ್ ಮಾಡುತ್ತಿರುವ ವೈದ್ಯರ ಮೇಲೆ ದಾಳಿ ಮಾಡಿದ್ದು, ಕಲ್ಕತ್ತಾ ಡಾಕ್ಟರ್ಸ್ ವಿರುದ್ಧ ಕ್ರಮಕ್ಕೆ ಡಿಎಚ್ಒಗೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಸೂಚನೆ ನೀಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಗಾಗಿ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಕತ್ತರಿ ಹಾಕಿದ ಸರ್ಕಾರ!

ಕಲ್ಕತ್ತಾ ದಿಂದ ಬಂದು ಯಾವುದೇ ಸರ್ಟಿಫಿಕೇಟ್ ಇಲ್ಲದೇ ಕ್ಲಿನಿಕ್ ಓಪನ್ ಮಾಡಿರುವ ನಕಲಿ ಡಾಕ್ಟರ್ಸ್, ಹಳ್ಳಿ ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜನರ ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ. ಈ ನಕಲಿ ಕಲ್ಕತ್ತಾ ವೈದ್ಯರ ಕರ್ಮಕಾಂಡದ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಲಾಗಿತ್ತು. ಕಲ್ಕತ್ತಾ ‌ನಕಲಿ ಡಾಕ್ಟರ್ ವಿರುದ್ಧ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಸಂಗೋಳಗಿ, ಅಣದೂರು, ಚಿದ್ರಿ ಸೇರಿದಂತೆ ಹಲವೆಡೆ ನಕಲಿ ವೈದ್ಯರ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಸಂಗೋಳಗಿ ಗ್ರಾಮದಲ್ಲಿ ವೈದ್ಯರ ದಾಳಿ ವೇಳೆ ಕೆಲವು ಗೂಂಡಾಗಳಿಂದ ಹಲ್ಲೆ ಮಾಡಿಸಲು ಮುಂದಾಗಿದ್ದಾರೆ. ಜೊತೆಗೆ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಮಾತಿನ ಚಕಮಕಿಯನ್ನು ಮಾಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more