ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

Published : Nov 08, 2023, 02:03 PM IST

ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದ್ದು, ಎಲ್ಲ ರೋಗಗಳಿಗೆ ನೋವು ನಿವಾರಕ ಹೈಡೋಸ್‌ ಔಷಧಿ ನೀಡುತ್ತಾ ಜನರ ಜೀವದೊಂದಿಗೆ  ಚೆಲ್ಲಾಟವಾಡುತ್ತಿದ್ದಾರೆ.

ಬೀದರ್ (ನ.08): ರಾಜ್ಯದ ಗಡಿಭಾಗ ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಎಲ್ಲ ರೋಗಗಳಿಗೆ ನೋವು ನಿವಾರಕ ಔಷಧಿ ಹಾಗೂ ಮಾತ್ರೆಗಳನ್ನೂ ನೀಡುತ್ತಾ ಜನರ ಜೀವದ ಜೊತೆಗೆ ಆಟವಾಡುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಜನರು ಕಿಡ್ನಿ ಹಾಗೀ ಇತರೆ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತಿದ್ದರೆ, ಇನ್ನು ಮಕ್ಕಳು ಜೀವಕ್ಕೆ ಬಲಿಯಾಗುತ್ತಿದ್ದಾರೆ. ಬೀದರ್‌ನಲ್ಲಿ ಕಲ್ಕತ್ತಾ ಡಾಕ್ಟರ್ ಗಳ ವಿರುದ್ಧ ಬೀದರ್ ಆರೋಗ್ಯ ಇಲಾಖೆ ಈಗ ಸಮರವನ್ನು ಸಾರಿದೆ.  ನಕಲಿ ಕಲ್ಕತ್ತಾ ಡಾಕ್ಟರ್ ಗಳ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್ ಗಳ ಹಾವಳಿ ಕುರಿತು ಕವರ್ ಸ್ಟೋರಿಯಲ್ಲಿ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಬೀದರ್ ಜಿಲ್ಲಾಡಳಿತವು ಮೆಡಿಕಲ್ ಆ್ಯಕ್ಟ್ ಪ್ರಕಾರ ನಕಲಿ ಡಾಕ್ಟರ್ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಯಾವುದೇ ದಾಖಲೆ ಇಲ್ಲದೇ ಪ್ರ್ಯಾಕ್ಟೀಸ್ ಮಾಡುತ್ತಿರುವ ವೈದ್ಯರ ಮೇಲೆ ದಾಳಿ ಮಾಡಿದ್ದು, ಕಲ್ಕತ್ತಾ ಡಾಕ್ಟರ್ಸ್ ವಿರುದ್ಧ ಕ್ರಮಕ್ಕೆ ಡಿಎಚ್ಒಗೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಸೂಚನೆ ನೀಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಗಾಗಿ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಕತ್ತರಿ ಹಾಕಿದ ಸರ್ಕಾರ!

ಕಲ್ಕತ್ತಾ ದಿಂದ ಬಂದು ಯಾವುದೇ ಸರ್ಟಿಫಿಕೇಟ್ ಇಲ್ಲದೇ ಕ್ಲಿನಿಕ್ ಓಪನ್ ಮಾಡಿರುವ ನಕಲಿ ಡಾಕ್ಟರ್ಸ್, ಹಳ್ಳಿ ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜನರ ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ. ಈ ನಕಲಿ ಕಲ್ಕತ್ತಾ ವೈದ್ಯರ ಕರ್ಮಕಾಂಡದ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಲಾಗಿತ್ತು. ಕಲ್ಕತ್ತಾ ‌ನಕಲಿ ಡಾಕ್ಟರ್ ವಿರುದ್ಧ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಸಂಗೋಳಗಿ, ಅಣದೂರು, ಚಿದ್ರಿ ಸೇರಿದಂತೆ ಹಲವೆಡೆ ನಕಲಿ ವೈದ್ಯರ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಸಂಗೋಳಗಿ ಗ್ರಾಮದಲ್ಲಿ ವೈದ್ಯರ ದಾಳಿ ವೇಳೆ ಕೆಲವು ಗೂಂಡಾಗಳಿಂದ ಹಲ್ಲೆ ಮಾಡಿಸಲು ಮುಂದಾಗಿದ್ದಾರೆ. ಜೊತೆಗೆ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಮಾತಿನ ಚಕಮಕಿಯನ್ನು ಮಾಡಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more