ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

Published : Nov 08, 2023, 02:03 PM IST

ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದ್ದು, ಎಲ್ಲ ರೋಗಗಳಿಗೆ ನೋವು ನಿವಾರಕ ಹೈಡೋಸ್‌ ಔಷಧಿ ನೀಡುತ್ತಾ ಜನರ ಜೀವದೊಂದಿಗೆ  ಚೆಲ್ಲಾಟವಾಡುತ್ತಿದ್ದಾರೆ.

ಬೀದರ್ (ನ.08): ರಾಜ್ಯದ ಗಡಿಭಾಗ ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಎಲ್ಲ ರೋಗಗಳಿಗೆ ನೋವು ನಿವಾರಕ ಔಷಧಿ ಹಾಗೂ ಮಾತ್ರೆಗಳನ್ನೂ ನೀಡುತ್ತಾ ಜನರ ಜೀವದ ಜೊತೆಗೆ ಆಟವಾಡುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಜನರು ಕಿಡ್ನಿ ಹಾಗೀ ಇತರೆ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತಿದ್ದರೆ, ಇನ್ನು ಮಕ್ಕಳು ಜೀವಕ್ಕೆ ಬಲಿಯಾಗುತ್ತಿದ್ದಾರೆ. ಬೀದರ್‌ನಲ್ಲಿ ಕಲ್ಕತ್ತಾ ಡಾಕ್ಟರ್ ಗಳ ವಿರುದ್ಧ ಬೀದರ್ ಆರೋಗ್ಯ ಇಲಾಖೆ ಈಗ ಸಮರವನ್ನು ಸಾರಿದೆ.  ನಕಲಿ ಕಲ್ಕತ್ತಾ ಡಾಕ್ಟರ್ ಗಳ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್ ಗಳ ಹಾವಳಿ ಕುರಿತು ಕವರ್ ಸ್ಟೋರಿಯಲ್ಲಿ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಬೀದರ್ ಜಿಲ್ಲಾಡಳಿತವು ಮೆಡಿಕಲ್ ಆ್ಯಕ್ಟ್ ಪ್ರಕಾರ ನಕಲಿ ಡಾಕ್ಟರ್ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಯಾವುದೇ ದಾಖಲೆ ಇಲ್ಲದೇ ಪ್ರ್ಯಾಕ್ಟೀಸ್ ಮಾಡುತ್ತಿರುವ ವೈದ್ಯರ ಮೇಲೆ ದಾಳಿ ಮಾಡಿದ್ದು, ಕಲ್ಕತ್ತಾ ಡಾಕ್ಟರ್ಸ್ ವಿರುದ್ಧ ಕ್ರಮಕ್ಕೆ ಡಿಎಚ್ಒಗೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಸೂಚನೆ ನೀಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಗಾಗಿ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಕತ್ತರಿ ಹಾಕಿದ ಸರ್ಕಾರ!

ಕಲ್ಕತ್ತಾ ದಿಂದ ಬಂದು ಯಾವುದೇ ಸರ್ಟಿಫಿಕೇಟ್ ಇಲ್ಲದೇ ಕ್ಲಿನಿಕ್ ಓಪನ್ ಮಾಡಿರುವ ನಕಲಿ ಡಾಕ್ಟರ್ಸ್, ಹಳ್ಳಿ ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜನರ ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ. ಈ ನಕಲಿ ಕಲ್ಕತ್ತಾ ವೈದ್ಯರ ಕರ್ಮಕಾಂಡದ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಲಾಗಿತ್ತು. ಕಲ್ಕತ್ತಾ ‌ನಕಲಿ ಡಾಕ್ಟರ್ ವಿರುದ್ಧ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಸಂಗೋಳಗಿ, ಅಣದೂರು, ಚಿದ್ರಿ ಸೇರಿದಂತೆ ಹಲವೆಡೆ ನಕಲಿ ವೈದ್ಯರ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಸಂಗೋಳಗಿ ಗ್ರಾಮದಲ್ಲಿ ವೈದ್ಯರ ದಾಳಿ ವೇಳೆ ಕೆಲವು ಗೂಂಡಾಗಳಿಂದ ಹಲ್ಲೆ ಮಾಡಿಸಲು ಮುಂದಾಗಿದ್ದಾರೆ. ಜೊತೆಗೆ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಮಾತಿನ ಚಕಮಕಿಯನ್ನು ಮಾಡಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more