ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

Published : Nov 08, 2023, 02:03 PM IST

ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದ್ದು, ಎಲ್ಲ ರೋಗಗಳಿಗೆ ನೋವು ನಿವಾರಕ ಹೈಡೋಸ್‌ ಔಷಧಿ ನೀಡುತ್ತಾ ಜನರ ಜೀವದೊಂದಿಗೆ  ಚೆಲ್ಲಾಟವಾಡುತ್ತಿದ್ದಾರೆ.

ಬೀದರ್ (ನ.08): ರಾಜ್ಯದ ಗಡಿಭಾಗ ಬೀದರ್‌ ಜಿಲ್ಲೆಯಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಎಲ್ಲ ರೋಗಗಳಿಗೆ ನೋವು ನಿವಾರಕ ಔಷಧಿ ಹಾಗೂ ಮಾತ್ರೆಗಳನ್ನೂ ನೀಡುತ್ತಾ ಜನರ ಜೀವದ ಜೊತೆಗೆ ಆಟವಾಡುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಜನರು ಕಿಡ್ನಿ ಹಾಗೀ ಇತರೆ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತಿದ್ದರೆ, ಇನ್ನು ಮಕ್ಕಳು ಜೀವಕ್ಕೆ ಬಲಿಯಾಗುತ್ತಿದ್ದಾರೆ. ಬೀದರ್‌ನಲ್ಲಿ ಕಲ್ಕತ್ತಾ ಡಾಕ್ಟರ್ ಗಳ ವಿರುದ್ಧ ಬೀದರ್ ಆರೋಗ್ಯ ಇಲಾಖೆ ಈಗ ಸಮರವನ್ನು ಸಾರಿದೆ.  ನಕಲಿ ಕಲ್ಕತ್ತಾ ಡಾಕ್ಟರ್ ಗಳ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್ ಗಳ ಹಾವಳಿ ಕುರಿತು ಕವರ್ ಸ್ಟೋರಿಯಲ್ಲಿ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಬೀದರ್ ಜಿಲ್ಲಾಡಳಿತವು ಮೆಡಿಕಲ್ ಆ್ಯಕ್ಟ್ ಪ್ರಕಾರ ನಕಲಿ ಡಾಕ್ಟರ್ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಯಾವುದೇ ದಾಖಲೆ ಇಲ್ಲದೇ ಪ್ರ್ಯಾಕ್ಟೀಸ್ ಮಾಡುತ್ತಿರುವ ವೈದ್ಯರ ಮೇಲೆ ದಾಳಿ ಮಾಡಿದ್ದು, ಕಲ್ಕತ್ತಾ ಡಾಕ್ಟರ್ಸ್ ವಿರುದ್ಧ ಕ್ರಮಕ್ಕೆ ಡಿಎಚ್ಒಗೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಸೂಚನೆ ನೀಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಗಾಗಿ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಕತ್ತರಿ ಹಾಕಿದ ಸರ್ಕಾರ!

ಕಲ್ಕತ್ತಾ ದಿಂದ ಬಂದು ಯಾವುದೇ ಸರ್ಟಿಫಿಕೇಟ್ ಇಲ್ಲದೇ ಕ್ಲಿನಿಕ್ ಓಪನ್ ಮಾಡಿರುವ ನಕಲಿ ಡಾಕ್ಟರ್ಸ್, ಹಳ್ಳಿ ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜನರ ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ. ಈ ನಕಲಿ ಕಲ್ಕತ್ತಾ ವೈದ್ಯರ ಕರ್ಮಕಾಂಡದ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಲಾಗಿತ್ತು. ಕಲ್ಕತ್ತಾ ‌ನಕಲಿ ಡಾಕ್ಟರ್ ವಿರುದ್ಧ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಸಂಗೋಳಗಿ, ಅಣದೂರು, ಚಿದ್ರಿ ಸೇರಿದಂತೆ ಹಲವೆಡೆ ನಕಲಿ ವೈದ್ಯರ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಸಂಗೋಳಗಿ ಗ್ರಾಮದಲ್ಲಿ ವೈದ್ಯರ ದಾಳಿ ವೇಳೆ ಕೆಲವು ಗೂಂಡಾಗಳಿಂದ ಹಲ್ಲೆ ಮಾಡಿಸಲು ಮುಂದಾಗಿದ್ದಾರೆ. ಜೊತೆಗೆ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಮಾತಿನ ಚಕಮಕಿಯನ್ನು ಮಾಡಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more