ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

Published : Nov 10, 2023, 10:52 AM IST

ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ನಕಲಿ ಡಾಕ್ಟರ್‌ಗಳ ಕರ್ಮಕಾಂಡದ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಕಲ್ಕತ್ತಾ ಡಾಕ್ಟರ್ಗಳ ವಿರುದ್ಧ ಸಮರ ಸಾರಿದೆ.
 

ವೈದ್ಯೋ ನಾರಾಯಣ್ ಹರಿ ಅಂತಾರೆ. ವೈದ್ಯರನ್ನು ನಾರಾಯಣನಿಗೆ ಹೋಲಿಕೆ ಮಾಡ್ತಾರೆ. ಆದ್ರೆ ಅದೇ ವೈದ್ಯ ವೃತ್ತಿಗೆ ಕಳಂಕ ಎಂಬಂತೆ, ರಾಜ್ಯದಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಗಳ(Kolkata fake doctors) ಹಾವಳಿ ಹೆಚ್ಚಾಗಿದೆ. ಗಡಿ ಜಿಲ್ಲೆ ಬೀದರ್‌ನ(Bidar) ಗ್ರಾಮೀಣ ಭಾಗದ  ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ, ಪಶ್ಚಿಮ ಬಂಗಾಳದ ನೂರಾರು ನಕಲಿ ಡಾಕ್ಟರ್‌ಗಳು  ಹಳ್ಳಿಗಳಲ್ಲಿ ಠಿಕಾಣಿ ಹೂಡಿ ಕ್ಲಿನಿಕ್‌ಗಳು ಓಪನ್ ಮಾಡಿಕೊಂಡಿದ್ದಾರೆ. ಮುಗ್ಧ ಜನರನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡೋಕೆ ಇಳಿದ ಇವರು,  ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ. ಬಡ ಜನರ ಜೀವಗಳ ಜತೆ ಚೆಲ್ಲಾಟವಾಡ್ತಿರುವ ಕೋಲ್ಕತ್ತಾ ನಕಲಿ ಡಾಕ್ಟರ್ಗಳ ಹಾವಳಿ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ಬಿತ್ತರವಾಗಿತ್ತು.. ನಮ್ಮ ವರದಿಗೆ ಬೀದರ್ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲ್ಕತ್ತಾ ನಕಲಿ ವೈದ್ಯರ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ. ನೌಟಂಕಿ ನಕಲಿ ವೈದ್ಯರ ಹಾವಳಿ ತಡೆಯಲು, ಬೀದರ್ ಜಿಲ್ಲಾ ಆರೋಗ್ಯ ಅಧಿಕಾರಿಗಳು ಫಿಲ್ಡಿಗೆ ಇಳಿದಿದ್ದಾರೆ. ಜಿಲ್ಲೆಯ ಸಂಗೋಳಗಿ, ಅಣದೂರ, ಚಿದ್ರಿ ಸೇರಿದಂತೆ ಹಲವಡೆ ದಾಳಿ(Raid) ನಡೆಸಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕ್ಲಿನಿಕ್ ಬಂದ್ ಮಾಡುವಂತೆ ತಾಕೀತು ಮಾಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿ ವರದಿಗೆ ಹಿರಿಯ ವೈದ್ಯ ಡಾ.ವಿವಿ ನಾಗರಾಜ್ ಧನ್ಯವಾದ ಸಲ್ಲಿಸಿದ್ರು. ಕವರ್ ಸ್ಟೋರಿ ಸಾಮಾಜಿಕ ಕಾಳಜಿಗೆ aಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more