ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

Published : Nov 10, 2023, 10:52 AM IST

ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ನಕಲಿ ಡಾಕ್ಟರ್‌ಗಳ ಕರ್ಮಕಾಂಡದ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಕಲ್ಕತ್ತಾ ಡಾಕ್ಟರ್ಗಳ ವಿರುದ್ಧ ಸಮರ ಸಾರಿದೆ.
 

ವೈದ್ಯೋ ನಾರಾಯಣ್ ಹರಿ ಅಂತಾರೆ. ವೈದ್ಯರನ್ನು ನಾರಾಯಣನಿಗೆ ಹೋಲಿಕೆ ಮಾಡ್ತಾರೆ. ಆದ್ರೆ ಅದೇ ವೈದ್ಯ ವೃತ್ತಿಗೆ ಕಳಂಕ ಎಂಬಂತೆ, ರಾಜ್ಯದಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಗಳ(Kolkata fake doctors) ಹಾವಳಿ ಹೆಚ್ಚಾಗಿದೆ. ಗಡಿ ಜಿಲ್ಲೆ ಬೀದರ್‌ನ(Bidar) ಗ್ರಾಮೀಣ ಭಾಗದ  ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ, ಪಶ್ಚಿಮ ಬಂಗಾಳದ ನೂರಾರು ನಕಲಿ ಡಾಕ್ಟರ್‌ಗಳು  ಹಳ್ಳಿಗಳಲ್ಲಿ ಠಿಕಾಣಿ ಹೂಡಿ ಕ್ಲಿನಿಕ್‌ಗಳು ಓಪನ್ ಮಾಡಿಕೊಂಡಿದ್ದಾರೆ. ಮುಗ್ಧ ಜನರನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡೋಕೆ ಇಳಿದ ಇವರು,  ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ. ಬಡ ಜನರ ಜೀವಗಳ ಜತೆ ಚೆಲ್ಲಾಟವಾಡ್ತಿರುವ ಕೋಲ್ಕತ್ತಾ ನಕಲಿ ಡಾಕ್ಟರ್ಗಳ ಹಾವಳಿ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ಬಿತ್ತರವಾಗಿತ್ತು.. ನಮ್ಮ ವರದಿಗೆ ಬೀದರ್ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲ್ಕತ್ತಾ ನಕಲಿ ವೈದ್ಯರ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ. ನೌಟಂಕಿ ನಕಲಿ ವೈದ್ಯರ ಹಾವಳಿ ತಡೆಯಲು, ಬೀದರ್ ಜಿಲ್ಲಾ ಆರೋಗ್ಯ ಅಧಿಕಾರಿಗಳು ಫಿಲ್ಡಿಗೆ ಇಳಿದಿದ್ದಾರೆ. ಜಿಲ್ಲೆಯ ಸಂಗೋಳಗಿ, ಅಣದೂರ, ಚಿದ್ರಿ ಸೇರಿದಂತೆ ಹಲವಡೆ ದಾಳಿ(Raid) ನಡೆಸಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕ್ಲಿನಿಕ್ ಬಂದ್ ಮಾಡುವಂತೆ ತಾಕೀತು ಮಾಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿ ವರದಿಗೆ ಹಿರಿಯ ವೈದ್ಯ ಡಾ.ವಿವಿ ನಾಗರಾಜ್ ಧನ್ಯವಾದ ಸಲ್ಲಿಸಿದ್ರು. ಕವರ್ ಸ್ಟೋರಿ ಸಾಮಾಜಿಕ ಕಾಳಜಿಗೆ aಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more