ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

Published : Nov 10, 2023, 10:52 AM IST

ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ನಕಲಿ ಡಾಕ್ಟರ್‌ಗಳ ಕರ್ಮಕಾಂಡದ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಕಲ್ಕತ್ತಾ ಡಾಕ್ಟರ್ಗಳ ವಿರುದ್ಧ ಸಮರ ಸಾರಿದೆ.
 

ವೈದ್ಯೋ ನಾರಾಯಣ್ ಹರಿ ಅಂತಾರೆ. ವೈದ್ಯರನ್ನು ನಾರಾಯಣನಿಗೆ ಹೋಲಿಕೆ ಮಾಡ್ತಾರೆ. ಆದ್ರೆ ಅದೇ ವೈದ್ಯ ವೃತ್ತಿಗೆ ಕಳಂಕ ಎಂಬಂತೆ, ರಾಜ್ಯದಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಗಳ(Kolkata fake doctors) ಹಾವಳಿ ಹೆಚ್ಚಾಗಿದೆ. ಗಡಿ ಜಿಲ್ಲೆ ಬೀದರ್‌ನ(Bidar) ಗ್ರಾಮೀಣ ಭಾಗದ  ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ, ಪಶ್ಚಿಮ ಬಂಗಾಳದ ನೂರಾರು ನಕಲಿ ಡಾಕ್ಟರ್‌ಗಳು  ಹಳ್ಳಿಗಳಲ್ಲಿ ಠಿಕಾಣಿ ಹೂಡಿ ಕ್ಲಿನಿಕ್‌ಗಳು ಓಪನ್ ಮಾಡಿಕೊಂಡಿದ್ದಾರೆ. ಮುಗ್ಧ ಜನರನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡೋಕೆ ಇಳಿದ ಇವರು,  ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ. ಬಡ ಜನರ ಜೀವಗಳ ಜತೆ ಚೆಲ್ಲಾಟವಾಡ್ತಿರುವ ಕೋಲ್ಕತ್ತಾ ನಕಲಿ ಡಾಕ್ಟರ್ಗಳ ಹಾವಳಿ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ಬಿತ್ತರವಾಗಿತ್ತು.. ನಮ್ಮ ವರದಿಗೆ ಬೀದರ್ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲ್ಕತ್ತಾ ನಕಲಿ ವೈದ್ಯರ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ. ನೌಟಂಕಿ ನಕಲಿ ವೈದ್ಯರ ಹಾವಳಿ ತಡೆಯಲು, ಬೀದರ್ ಜಿಲ್ಲಾ ಆರೋಗ್ಯ ಅಧಿಕಾರಿಗಳು ಫಿಲ್ಡಿಗೆ ಇಳಿದಿದ್ದಾರೆ. ಜಿಲ್ಲೆಯ ಸಂಗೋಳಗಿ, ಅಣದೂರ, ಚಿದ್ರಿ ಸೇರಿದಂತೆ ಹಲವಡೆ ದಾಳಿ(Raid) ನಡೆಸಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕ್ಲಿನಿಕ್ ಬಂದ್ ಮಾಡುವಂತೆ ತಾಕೀತು ಮಾಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿ ವರದಿಗೆ ಹಿರಿಯ ವೈದ್ಯ ಡಾ.ವಿವಿ ನಾಗರಾಜ್ ಧನ್ಯವಾದ ಸಲ್ಲಿಸಿದ್ರು. ಕವರ್ ಸ್ಟೋರಿ ಸಾಮಾಜಿಕ ಕಾಳಜಿಗೆ aಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more