ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

ರಾಜ್ಯದಲ್ಲಿ ಕೊಲ್ಕತ್ತಾ ಡ್ಲೂಪಿಕೇಟ್ ಡಾಕ್ಟರ್ಸ್ ಹಾವಳಿ..! ಕವರ್ ಸ್ಟೋರಿಯಲ್ಲಿ ನಕಲಿ ವೈದ್ಯರ ಬಣ್ಣಬಯಲು..!

Published : Nov 10, 2023, 10:52 AM IST

ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ಕಲ್ಕತ್ತಾ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ನಕಲಿ ಡಾಕ್ಟರ್‌ಗಳ ಕರ್ಮಕಾಂಡದ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಕಲ್ಕತ್ತಾ ಡಾಕ್ಟರ್ಗಳ ವಿರುದ್ಧ ಸಮರ ಸಾರಿದೆ.
 

ವೈದ್ಯೋ ನಾರಾಯಣ್ ಹರಿ ಅಂತಾರೆ. ವೈದ್ಯರನ್ನು ನಾರಾಯಣನಿಗೆ ಹೋಲಿಕೆ ಮಾಡ್ತಾರೆ. ಆದ್ರೆ ಅದೇ ವೈದ್ಯ ವೃತ್ತಿಗೆ ಕಳಂಕ ಎಂಬಂತೆ, ರಾಜ್ಯದಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಗಳ(Kolkata fake doctors) ಹಾವಳಿ ಹೆಚ್ಚಾಗಿದೆ. ಗಡಿ ಜಿಲ್ಲೆ ಬೀದರ್‌ನ(Bidar) ಗ್ರಾಮೀಣ ಭಾಗದ  ಕೋಲ್ಕತ್ತಾ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ, ಪಶ್ಚಿಮ ಬಂಗಾಳದ ನೂರಾರು ನಕಲಿ ಡಾಕ್ಟರ್‌ಗಳು  ಹಳ್ಳಿಗಳಲ್ಲಿ ಠಿಕಾಣಿ ಹೂಡಿ ಕ್ಲಿನಿಕ್‌ಗಳು ಓಪನ್ ಮಾಡಿಕೊಂಡಿದ್ದಾರೆ. ಮುಗ್ಧ ಜನರನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡೋಕೆ ಇಳಿದ ಇವರು,  ಜನರಿಗೆ ಹೈಡೋಸ್ ಔಷಧಿ ಕೊಟ್ಟು ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ. ಬಡ ಜನರ ಜೀವಗಳ ಜತೆ ಚೆಲ್ಲಾಟವಾಡ್ತಿರುವ ಕೋಲ್ಕತ್ತಾ ನಕಲಿ ಡಾಕ್ಟರ್ಗಳ ಹಾವಳಿ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ಬಿತ್ತರವಾಗಿತ್ತು.. ನಮ್ಮ ವರದಿಗೆ ಬೀದರ್ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲ್ಕತ್ತಾ ನಕಲಿ ವೈದ್ಯರ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ. ನೌಟಂಕಿ ನಕಲಿ ವೈದ್ಯರ ಹಾವಳಿ ತಡೆಯಲು, ಬೀದರ್ ಜಿಲ್ಲಾ ಆರೋಗ್ಯ ಅಧಿಕಾರಿಗಳು ಫಿಲ್ಡಿಗೆ ಇಳಿದಿದ್ದಾರೆ. ಜಿಲ್ಲೆಯ ಸಂಗೋಳಗಿ, ಅಣದೂರ, ಚಿದ್ರಿ ಸೇರಿದಂತೆ ಹಲವಡೆ ದಾಳಿ(Raid) ನಡೆಸಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕ್ಲಿನಿಕ್ ಬಂದ್ ಮಾಡುವಂತೆ ತಾಕೀತು ಮಾಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿ ವರದಿಗೆ ಹಿರಿಯ ವೈದ್ಯ ಡಾ.ವಿವಿ ನಾಗರಾಜ್ ಧನ್ಯವಾದ ಸಲ್ಲಿಸಿದ್ರು. ಕವರ್ ಸ್ಟೋರಿ ಸಾಮಾಜಿಕ ಕಾಳಜಿಗೆ aಭಿನಂದಿಸಿದ್ರು.

ಇದನ್ನೂ ವೀಕ್ಷಿಸಿ:  ಬೀದರ್‌ನಲ್ಲಿ ಕೋಲ್ಕತ್ತಾ ನಕಲಿ ಡಾಕ್ಟರ್ಸ್‌ ಹಾವಳಿ: ಮುಗ್ದ ಜನರ ಜೀವದೊಂದಿಗೆ ಚೆಲ್ಲಾಟ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more