ಬೆಂಗಳೂರಿನಲ್ಲಿ ಗೀತೋತ್ಸವ ಕಾರ್ಯಕ್ರಮ ಸಂಪನ್ನ: ಜಾತಿ, ಭೇದವಿಲ್ಲದೇ ಭಗವದ್ಗೀತೆ ಬರೆದ ಕೋಟ್ಯಂತರ ಜನ

ಬೆಂಗಳೂರಿನಲ್ಲಿ ಗೀತೋತ್ಸವ ಕಾರ್ಯಕ್ರಮ ಸಂಪನ್ನ: ಜಾತಿ, ಭೇದವಿಲ್ಲದೇ ಭಗವದ್ಗೀತೆ ಬರೆದ ಕೋಟ್ಯಂತರ ಜನ

Published : Dec 25, 2023, 11:48 AM IST

ಕೋಟಿ ಗೀತಾ ಲೇಖನ ಯಜ್ಞದ ಅಂಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅದ್ದೂರಿ ಗೀತೋತ್ಸವ ಕಾರ್ಯಕ್ರಮ ನಡೆಯಿತು. ಎರಡು ದಿನಗಳ ಕಾಲ ನಡೆದ ಗೀತೋತ್ಸವ ಕಾರ್ಯಕ್ರಮದಲ್ಲಿ ಭಗವದ್ಗೀತೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಡೆದಿದ್ದು ಅದ್ದೂರಿಯಾಗಿ ಯಶಸ್ವಿಯಾಗಿದೆ. 

ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆಯ ಉಭಯ ಪೀಠಾಧಿಪತಿಗಳ 4ನೇ ಪರ್ಯಾಯದ ಅಂಗವಾಗಿ ಯೋಜನೆಗೊಳ್ಳುತ್ತಿರುವ ಕೋಟಿ ಗೀತಾ ಯಜ್ಞಕ್ಕೆ ಭರ್ಜರಿ ಚಾಲನೆ ಸಿಕ್ಕಿತ್ತು. ಬೆಂಗಳೂರಿನ(Bengaluru) ನ್ಯಾಷನಲ್ ಕಾಲೇಜು ಆಟದ ಮೈದಾನದಲ್ಲಿ ಎರಡು ದಿನ ಗೀತೋತ್ಸವ(Geethotsava) ಕಾರ್ಯಕ್ರಮ ನಡೀತು. ಪುತ್ತಿಗೆ ಮಠದ ಉಭಯ ಪೀಠಾಧಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಸುಶೀಂದ್ರ ತೀರ್ಥರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ತಿಗೊಂಡಿದೆ. ಈ ಮೂಲಕ ಒಂದು ಕೋಟಿಗೂ ಅಧಿಕ ಜನ ಭಗವದ್ಗೀತೆಯನ್ನು ಬರೆಯುವ ಮಹತ್ಕಾರ್ಯಕ್ಕೆ ಚಾಲನೆ ಸಿಕ್ಕಂತಾಗಿದೆ. ಮೊದಲನೇ ದಿನ ಭಗವದ್ಗೀತೆಯ 18 ಅಧ್ಯಾಯವನ್ನೊಳಗೊಂಡ ಗ್ರಂಥವನ್ನು ಬೆಳ್ಳಿಯ ರಥದಲ್ಲಿ ಇರಿಸಿ ತರಲಾಗಿತ್ತು. ಸಾವಿರಾರು ಜನರ ಸಮ್ಮುಖದಲ್ಲಿ ಭಗವದ್ಗೀತೆಯ ಪಠಣವೂ ಮೊಳಗಿತು. ಸಭಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಟ ಜಗ್ಗೇಶ್, ನಟಿ ರಾಧಿಕಾ ನಾರಾಯಣ್, ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ರು. 2ನೇ ದಿನ ಅರಳು ಮಲ್ಲಿಗೆ ಪಾರ್ಥ ಸಾರಥಿ ನೇತೃತ್ವದಲ್ಲಿ ಉಭಯ ಮಠಾಧೀಶರ ಸಮ್ಮುಖದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಿತು. ಸಮಾರೋಪ ಸಮಾರಂಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್, ಹೆಚ್.ಎಸ್ ಪ್ರೇಮಾ, ಸಚ್ಚಿದಾನಂದ ಮೂರ್ತಿ ಸೇರಿದಂತೆ ಹಲವು ಗಣ್ಯರು ಭಾಗಿಯಾದರು. ಇದೇ ವೇಳೆ ಗೀತೋತ್ಸವದ ಅಂಗವಾಗಿ ಭಗವದ್ಗೀತೆಯ(Bhagavad Gita) ಕುರಿತಾಗಿ ನಡೆಸಲಾದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಪುತ್ತಿಗೆ ಶ್ರೀಗಳ ಪರ್ಯಾಯದ ಅವಧಿಯಲ್ಲಿ ಜಗತ್ತಿನಾದ್ಯಂತ ಒಂದು ಕೋಟಿಗೂ ಅಧಿಕ ಜನ ಭಗವದ್ಗೀತೆಯನ್ನು ಬರೆದು ಸಮರ್ಪಿಸಲಿದ್ದಾರೆ. ಈ ಮಹಾತ್ಕಾರ್ಯದಲ್ಲಿ ಭಾಗಿಯಾಗಲು 2 ವರ್ಷ ಅವಕಾಶ ಇದೆ. ದೇಶ ವಿದೇಶಗಳಿಂದ ಕೋಟ್ಯಾಂತರ ಜನ ಜಾತಿ ಭೇದ ಮರೆತು ಈ ಸಂಕಲ್ಪದಲ್ಲಿ ಜೊತೆಯಾಗಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಡ್ರೆಸ್ ಓಕೆ.. ಮೇಕಪ್ ಈ ಪಾಟಿ ಯಾಕೆ ? ಊರ್ವಶಿ ರೌಟೇಲಾ ಟ್ರೋಲ್ ಆಗಿದ್ದು ಇದಕ್ಕೆ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more