ಸಿಲಿಕಾನ್‌ ಸಿಟಿಯಲ್ಲಿ 'ಕೃಷಿ ಲೋಕ'ದ ಅನಾವರಣ: ಜಿಕೆವಿಕೆಯಲ್ಲಿ ನೂರಾರು ಕೃಷಿ ಸಾಧಕರಿಗೆ ಸನ್ಮಾನ

ಸಿಲಿಕಾನ್‌ ಸಿಟಿಯಲ್ಲಿ 'ಕೃಷಿ ಲೋಕ'ದ ಅನಾವರಣ: ಜಿಕೆವಿಕೆಯಲ್ಲಿ ನೂರಾರು ಕೃಷಿ ಸಾಧಕರಿಗೆ ಸನ್ಮಾನ

Published : Nov 19, 2023, 08:40 AM IST

ಸಿಲಿಕಾನ್ ಸಿಟಿಯ ಬ್ಯುಸಿ ಲೈಫ್, ವೇಗವಾಗಿ ಓಡ್ತಿರೋ ಜಗತ್ತಿನ ಮಧ್ಯೆ ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳನ್ನ ಮುಂದಿನ ತಲೆಮಾರಿಗೆ ತಲುಪಿಸೋ ಕೆಲಸವನ್ನ ಕೃಷಿ ವಿಶ್ವವಿದ್ಯಾಲಯ ಮಾಡ್ತಿದೆ. ಅದರ ಭಾಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಕೃಷಿಮೇಳಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.
 

ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಾಲ್ಕು ದಿನಗಳ ಕಾಲ ಕೃಷಿ ಮೇಳ(Krishi mela) ಆಯೋಸಲಾಗಿದೆ. ಆಹಾರ,ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯ ಅನ್ನೋ ಘೋಷಣೆ ಜತೆಗೆ ಈ ವರ್ಷದ ಕೃಷಿಮೇಳ ನಡೆಸಲಾಗ್ತಿದ್ದು, ಕೃಷಿಮೇಳಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(D.K.Shivakumar) ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಸೇರಿ ಹಲವರು ಚಾಲನೆ ನೀಡಿದ್ರು. ಜೊತೆಗೆ  ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ಹೊಸ ತಳಿಗಳ ಪ್ರಾತ್ಯಕ್ಷಿಕೆಗಳಿಗೆ ಭೇಟಿ ನೀಡಿ ವೀಕ್ಷಿಸಿದ್ರು. ಈ ಭಾರಿ ಕೃಷಿಮೇಳದಲ್ಲಿ ವಿವಿಧ ಭಾಗಗಳ ರೈತ ಸಾಧಕರಿಗೆ ಸನ್ಮಾನ ಮಾಡೋ ಜೊತೆಗೆ ರೈತರ ಜಮೀನುಗಳ ಮಣ್ಣು ಪರೀಕ್ಷೆಗೆ ಅಭಿವೃದ್ಧಿಪಡಿಸಿರೋ ಧರ್ತಿಮಿತ್ರ ಆಪ್ ಕೂಡ ಅನಾವರಣ ಮಾಡಲಾಯ್ತು. ಈ ಭಾರಿ ಕೃಷಿ ಮೇಳದಲ್ಲಿ ಸುಮಾರು 625 ಮಳಿಗೆಗಳನ್ನ ತೆರೆಯಲಾಗಿದ್ದು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ಸಾಧ್ಯತೆ ಇದೆ. ಈ ಮೇಳದಲ್ಲಿ ರೈತರಿಗೆ ಕ್ಷೇತ್ರ ಸಂದರ್ಶನ, ಕೃಷಿ ವಿಜ್ಞಾನಿ, ತಜ್ಞರೊಂದಿಗೆ ಸಮಾಲೋಚನೆ, ಮಾರ್ಗದರ್ಶನ, ಪ್ರಾತ್ಯಕ್ಷಿಕೆ, ಹೊಸ ತಳಿಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತಿದೆ. ಇನ್ನು ಜಿಕೆವಿಕೆ ಸಂಶೋಧನಾ ವಿಭಾಗ ರಾಗಿ,ಸೂರ್ಯಕಾಂತಿ,ನವಣೆ, ಹಲಸು ಸೇರಿದಂತೆ ಕೆಲ ಸಿರಿಧಾನ್ಯಗಳ ತಳಿಗಳನ್ನ ಅಭಿವೃದ್ಧಿಪಡಿಸಿದ್ದು , ಸಿಎಂ ಸಿದ್ದರಾಮಯ್ಯ ಹೊಸ ತಳಿಗಳನ್ನ ಅನಾವರಣ ಮಾಡಿದ್ರು. ಇದರ ಜೊತೆಗೆ ಹೈನುಗಾರಿಕೆ ವಿಭಾಗದಲ್ಲಿ ವಿವಿಧ ಬಗೆಯ ಕೋಳಿಗಳು, ಕಲರ್ ಫುಲ್ ಮೀನುಗಳು, ಹಳ್ಳಿಕಾರ್ ಹೋರಿ ಗಮನಸೆಳೆದ್ರೆ, ಬಾಟಲ್ ಬದನೆ, ಚೆರ್ರಿ ಟೋಮ್ಯಾಟೋ ಹೀಗೆ ಹತ್ತು ಹಲವು ವೈಶಿಷ್ಟಗಳನ್ನ ಜನ ಕಣ್ತುಂಬಿಕೊಂಡ್ರು.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯಗೆ ಸಂಕಷ್ಟ ತಂದ ಹಲೋ ಅಪ್ಪಾಜಿ ವಿಡಿಯೋ, ಆರೋಪ-ಪ್ರತ್ಯಾರೋಪದ ಸುರಿಮಳೆ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more