ಸಿಲಿಕಾನ್‌ ಸಿಟಿಯಲ್ಲಿ 'ಕೃಷಿ ಲೋಕ'ದ ಅನಾವರಣ: ಜಿಕೆವಿಕೆಯಲ್ಲಿ ನೂರಾರು ಕೃಷಿ ಸಾಧಕರಿಗೆ ಸನ್ಮಾನ

ಸಿಲಿಕಾನ್‌ ಸಿಟಿಯಲ್ಲಿ 'ಕೃಷಿ ಲೋಕ'ದ ಅನಾವರಣ: ಜಿಕೆವಿಕೆಯಲ್ಲಿ ನೂರಾರು ಕೃಷಿ ಸಾಧಕರಿಗೆ ಸನ್ಮಾನ

Published : Nov 19, 2023, 08:40 AM IST

ಸಿಲಿಕಾನ್ ಸಿಟಿಯ ಬ್ಯುಸಿ ಲೈಫ್, ವೇಗವಾಗಿ ಓಡ್ತಿರೋ ಜಗತ್ತಿನ ಮಧ್ಯೆ ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳನ್ನ ಮುಂದಿನ ತಲೆಮಾರಿಗೆ ತಲುಪಿಸೋ ಕೆಲಸವನ್ನ ಕೃಷಿ ವಿಶ್ವವಿದ್ಯಾಲಯ ಮಾಡ್ತಿದೆ. ಅದರ ಭಾಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಕೃಷಿಮೇಳಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.
 

ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಾಲ್ಕು ದಿನಗಳ ಕಾಲ ಕೃಷಿ ಮೇಳ(Krishi mela) ಆಯೋಸಲಾಗಿದೆ. ಆಹಾರ,ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯ ಅನ್ನೋ ಘೋಷಣೆ ಜತೆಗೆ ಈ ವರ್ಷದ ಕೃಷಿಮೇಳ ನಡೆಸಲಾಗ್ತಿದ್ದು, ಕೃಷಿಮೇಳಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(D.K.Shivakumar) ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಸೇರಿ ಹಲವರು ಚಾಲನೆ ನೀಡಿದ್ರು. ಜೊತೆಗೆ  ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ಹೊಸ ತಳಿಗಳ ಪ್ರಾತ್ಯಕ್ಷಿಕೆಗಳಿಗೆ ಭೇಟಿ ನೀಡಿ ವೀಕ್ಷಿಸಿದ್ರು. ಈ ಭಾರಿ ಕೃಷಿಮೇಳದಲ್ಲಿ ವಿವಿಧ ಭಾಗಗಳ ರೈತ ಸಾಧಕರಿಗೆ ಸನ್ಮಾನ ಮಾಡೋ ಜೊತೆಗೆ ರೈತರ ಜಮೀನುಗಳ ಮಣ್ಣು ಪರೀಕ್ಷೆಗೆ ಅಭಿವೃದ್ಧಿಪಡಿಸಿರೋ ಧರ್ತಿಮಿತ್ರ ಆಪ್ ಕೂಡ ಅನಾವರಣ ಮಾಡಲಾಯ್ತು. ಈ ಭಾರಿ ಕೃಷಿ ಮೇಳದಲ್ಲಿ ಸುಮಾರು 625 ಮಳಿಗೆಗಳನ್ನ ತೆರೆಯಲಾಗಿದ್ದು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ಸಾಧ್ಯತೆ ಇದೆ. ಈ ಮೇಳದಲ್ಲಿ ರೈತರಿಗೆ ಕ್ಷೇತ್ರ ಸಂದರ್ಶನ, ಕೃಷಿ ವಿಜ್ಞಾನಿ, ತಜ್ಞರೊಂದಿಗೆ ಸಮಾಲೋಚನೆ, ಮಾರ್ಗದರ್ಶನ, ಪ್ರಾತ್ಯಕ್ಷಿಕೆ, ಹೊಸ ತಳಿಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತಿದೆ. ಇನ್ನು ಜಿಕೆವಿಕೆ ಸಂಶೋಧನಾ ವಿಭಾಗ ರಾಗಿ,ಸೂರ್ಯಕಾಂತಿ,ನವಣೆ, ಹಲಸು ಸೇರಿದಂತೆ ಕೆಲ ಸಿರಿಧಾನ್ಯಗಳ ತಳಿಗಳನ್ನ ಅಭಿವೃದ್ಧಿಪಡಿಸಿದ್ದು , ಸಿಎಂ ಸಿದ್ದರಾಮಯ್ಯ ಹೊಸ ತಳಿಗಳನ್ನ ಅನಾವರಣ ಮಾಡಿದ್ರು. ಇದರ ಜೊತೆಗೆ ಹೈನುಗಾರಿಕೆ ವಿಭಾಗದಲ್ಲಿ ವಿವಿಧ ಬಗೆಯ ಕೋಳಿಗಳು, ಕಲರ್ ಫುಲ್ ಮೀನುಗಳು, ಹಳ್ಳಿಕಾರ್ ಹೋರಿ ಗಮನಸೆಳೆದ್ರೆ, ಬಾಟಲ್ ಬದನೆ, ಚೆರ್ರಿ ಟೋಮ್ಯಾಟೋ ಹೀಗೆ ಹತ್ತು ಹಲವು ವೈಶಿಷ್ಟಗಳನ್ನ ಜನ ಕಣ್ತುಂಬಿಕೊಂಡ್ರು.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯಗೆ ಸಂಕಷ್ಟ ತಂದ ಹಲೋ ಅಪ್ಪಾಜಿ ವಿಡಿಯೋ, ಆರೋಪ-ಪ್ರತ್ಯಾರೋಪದ ಸುರಿಮಳೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more