ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!

Aug 8, 2020, 3:06 PM IST

ಮಂಡ್ಯ(ಆ.08): ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿಯಾಗಿದೆ. 124 ಅಡಿ ಗರಿಷ್ಟ ಮಟ್ಟ ಹೊಂದಿರುವ ಡ್ಯಾಂ ಇನ್ನೆರಡು ಸಂಪೂರ್ಣವಾಗಿ ಭರ್ತಿಯಾಗಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. 

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಇನ್ನೆರಡು ದಿನದಲ್ಲಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲಿದೆ.