Jul 13, 2020, 5:33 PM IST
ಬೆಂಗಳೂರು, (ಜು.13): ಕೊರೋನಾ ಕಾಟದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಾರದ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಹೆಚ್ಚುವರಿ ಬಸ್ಗಳ ವ್ಯವಸ್ಥೆಯನ್ನು ಮಾಡಿದೆ.
ಬೆಂಗಳೂರು ಬಿಡ್ತಿದ್ದಾರೆ ಜನ; ಊರಿನ ಕಡೆ ಮಹಾ ವಲಸೆ ಶುರು
ಮಂಗಳವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳು ಜನರಿಗೆ ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್ ಕಲ್ಪಿಸಿದೆ.