ಕುರುಗೋಡು ಪುರಸಭೆಯಲ್ಲಿ ದಾಖಲೆಗಳ ಗೋಲ್ಮಾಲ್..? ಪುರಸಭೆ ಸದಸ್ಯರಿಂದಲೇ ಬಯಲಾಯ್ತು ಕರಾಳ ಸತ್ಯ !

ಕುರುಗೋಡು ಪುರಸಭೆಯಲ್ಲಿ ದಾಖಲೆಗಳ ಗೋಲ್ಮಾಲ್..? ಪುರಸಭೆ ಸದಸ್ಯರಿಂದಲೇ ಬಯಲಾಯ್ತು ಕರಾಳ ಸತ್ಯ !

Published : Dec 07, 2023, 10:11 AM IST

ಸರ್ಕಾರಿ ದಾಖಲೆಗಳು ಅಂದ್ರೆ ಸರ್ಕಾರಿ ಕಚೇರಿಯಲ್ಲಿರಬೇಕು. ಏನೇ ವ್ಯವಹಾರ ಇದ್ರೂ ಸರ್ಕಾರಿ ಕಚೇರಿಯಿಂದಲೇ ಆಗಬೇಕು. ಆದ್ರೆ ಕುರುಗೋಡು ಪುರಸಭೆ ದಾಖಲೆಗಳು ಕಂಪ್ಯೂಟರ್ ಸೆಂಟರ್‌ನಲ್ಲಿ ಪತ್ತೆಯಾಗಿದೆ.

ಕಂಪ್ಲಿ ಪಟ್ಟಣದ ಖಾಸಗಿ ಕಂಪ್ಯೂಟರ್ ಸೆಂಟರ್. ಆದ್ರೆ ಇಲ್ಲಿ ಮಾಡ್ತಿರೋದು ಮಾತ್ರ ಕುರುಗೋಡು ಪುರಸಭೆ ದಾಖಲೆ(Municipal documents) ಪತ್ರಗಳ ತಿದ್ದುಪಡಿ ಕೆಲಸ. ಪುರಸಭೆ ಕಾರ್ಯಾಲಯದಲ್ಲಿ ನಡೆಯಬೇಕಾದ ಎಲ್ಲಾ ಕೆಲಸಗಳೂ ಕಂಪ್ಲಿ ಕಂಪ್ಯೂಟರ್ ಸೆಂಟರ್‌ನಲ್ಲಿ(Kampli Computer Center) ಮಾಡಲಾಗ್ತಿದೆ. ಪುರಸಭೆ ಚೀಫ್ ಆಫೀಸರ್ ಲಾಗಿನ್ ಇಲ್ಲದೆ ಯಾವುದೇ ಸಾಫ್ಟ್‌ವೇರ್ ಓಪನ್ ಆಗಲ್ಲ. ಆದ್ರೂ ಕುರುಗೋಡಿನಿಂದ 30 ಕಿಲೋಮೀಟರ್ ದೂರವಿರೋ ಕಂಪ್ಯೂಟರ್ ಸೆಂಟರ್‌ನಲ್ಲಿ ದಾಖಲೆಗಳ ತಿದ್ದುಪಡಿ ಮಾಡಲಾಗ್ತಿದೆ. ಪುರಸಭೆ ಚೀಫ್ ಆಫೀಸರ್ ವಿಜಯಲಕ್ಷ್ಮಿಗೆ ಗೊತ್ತಿಲ್ಲದೇ ಇಷ್ಟೆಲ್ಲಾ ನಡೆಯಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ದಾಖಲೆಗಳ ಗೋಲ್ಮಾಲ್ ಕೆಲಸ ನಡೀತಿದೆ ಅನ್ನೋದು ಪುರಸಭೆ ಸದಸ್ಯರ ಆರೋಪ. ಕಳ್ಳ ವ್ಯವಹಾರ ಇರುವ ಕಾರಣಕ್ಕೆ ದಾಖಲೆಗಳನ್ನು ಹೊರಗೆ ಕಳಿಸಿ ತಿದ್ದುಪಡಿ ಮಾಡಿಸುತ್ತಿದ್ದಾರೆ ಅನ್ನೋದು ಪುರಸಭೆ ಸದಸ್ಯರ ಆರೋಪ. ಆದ್ರೆ, ಪುರಸಭೆಯಲ್ಲಿ ಕಂಪ್ಯೂಟರ್ ಆಪರೇಟರ್ ಇಲ್ಲದ ಕಾರಣ ಹೊರಗೆ ಕಳಿಸಿದ್ದೇವೆ ಅಂತ ಅಧಿಕಾರಿಗಳು ಸಮಜಾಯಿಷಿ ಕೊಡ್ತಿದ್ದಾರೆ. ಅನಿವಾರ್ಯವಿದ್ರೆ ಕುರುಗೋಡು ಕಂಪ್ಯೂಟರ್ ಸೆಂಟರ್ನಲ್ಲೇ ಕಫ್ಯೂಟರ್ ಆಪರೇಟರ್‌ ಕರೆಯಿಸಿ ಮಾಡಿಸಬಹುದಿತ್ತಲ್ವಾ..? ಕಂಪ್ಲಿ ಕಂಪ್ಯೂಟರ್ ಸೆಂಟರ್‌ಗೆ ಕಳಿಸಿದ್ದೇಕೆ ಅಂದ್ರೆ ಅಧಿಕಾರಿಗಳ ಬಳಿ ಉತ್ತರವಿಲ್ಲ. ಇದನ್ನೆಲ್ಲಾ ನೋಡ್ತಿದ್ರೆ ಇಲ್ಲೇನೋ ನಡೀತಿದೆ. ಪುರಸಭೆ ವ್ಯಾಪ್ತಿಯಲ್ಲಿ ಬಾರೀ ಗೋಲ್ಮಾಲ್ ವಾಸನೆ ಹೊಡೀತಿದೆ. ಈ ಬಗ್ಗೆ ತನಿಖೆ ನಡೆಸಿ, ಸತ್ಯ ಹೊರಬರಲಿ ಅನ್ನೋದು ಸಾರ್ವಜನಿಕರ ಒತ್ತಾಯ.

ಇದನ್ನೂ ವೀಕ್ಷಿಸಿ:  ಟಾಲಿವುಡ್‌ನಲ್ಲಿ ಶುರುವಾಯ್ತು ಆಶಿಕಾ ಕ್ರೇಜ್..! ರಶ್ಮಿಕಾರಂತೆ ಮಿಂಚಿದ ಪಟಾಕಿ ಪೋರಿ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more