ಕೆರೆಗಳ ಒಡಲಿಗೆ ಕನ್ನಹಾಕಿದ ಮಾಫಿಯಾ ಗ್ಯಾಂಗ್..! ಧನದಾಹಿಗಳಿಂದ ರೈತರ ಜೀವನಾಡಿ ಕಗ್ಗೊಲೆ !

ಕೆರೆಗಳ ಒಡಲಿಗೆ ಕನ್ನಹಾಕಿದ ಮಾಫಿಯಾ ಗ್ಯಾಂಗ್..! ಧನದಾಹಿಗಳಿಂದ ರೈತರ ಜೀವನಾಡಿ ಕಗ್ಗೊಲೆ !

Published : Nov 28, 2023, 10:26 AM IST

ಅದು ಕೆರೆಗಳ ನಾಡು ಅಂತಾನೆ ಪ್ರಖ್ಯಾತಿ ಪಡೆದಿರುವ ಜಿಲ್ಲೆ. ಮಳೆ ಇಲ್ಲದೇ ಬತ್ತಿ ಹೋಗುತ್ತಿರುವ ಆ ಕೆರೆಗಳ ಮಣ್ಣಿಗೆ ಹೊರ ರಾಜ್ಯಗಳಲ್ಲೂ ಡಿಮ್ಯಾಂಡ್‌ ಹೆಚ್ಚಿಗೆ.ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಿಡಿಗೇಡಿಗಳು ಕೆರೆಗಳ ಕೊಲೆ ಮಾಡ್ತಿದ್ದಾರೆ. ಸಕಾ೯ರಕ್ಕೆ ರಾಜಧನವನ್ನು ಪಾವತಿಸದೇ ತಿಂಗಳಿಗೆ ಲಕ್ಷ ಲಕ್ಷ ಸಂಪಾದನೆ ಮಾಡ್ತಿದ್ದಾರೆ.
 

ಕೋಲಾರ ಜಿಲ್ಲೆ ಕೆರೆಗಳ ನಾಡು ಅಂತಾನೆ ಪ್ರಖ್ಯಾತಿ. ಮಳೆ ಬಂದಾಗಲೆಲ್ಲ ತುಬಿಕೊಳ್ಲುವ ಕೆರೆಗಳು(Ponds) ಬೇಸಿಗೆಯಲ್ಲಿ ನೀರಿನ ದಾಹ ತಣಿಸುತ್ತವೆ. ರೈತರ(Farmers) ಜೀವನಾಡಿ ಈ ಕೆರೆಗಳು. ಆದ್ರೆ, ಇತ್ತಿಚಿನ ವರ್ಷಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಿಲ್ಲದೇ ಕೆರೆಗಳು ತುಂಬಿಕೊಳ್ತಿಲ್ಲ. ಬತ್ತಿಹೋಗಿರೋ ಈ ಕೆರೆಗಳು ಈಗ ಮಣ್ಣು ಮಾರಾಟ(Soil Sale) ದಂಧೆಕೋರರ ಖಜಾನೆ ತುಂಬಿಸುತ್ತಿವೆ. ಇಲ್ನೋಡಿ ಕೆರೆಯ ಆಕಾರವನ್ನೇ ಕೆಡಿಸಿಬಿಟ್ಟಿದ್ದಾರೆ. ಕೋಲಾರ(Kolar) ತಾಲೂಕಿನ ತೊಟ್ಲಿ ಗ್ರಾಮದ ಶೆಟ್ಟಿ ಕೆರೆ ಇದು. ಕೆರೆಗಳ್ಳರು ಹಗಲು,ರಾತ್ರಿ ಅಂತ ಲೆಕ್ಕಿಸದೇ ಜೆಸಿಬಿ, ಟ್ರಾಕ್ಟರ್‌ ಬಳಸಿಕೊಂಡು ಮಣ್ಣನ್ನು ಅಕ್ರಮವಾಗಿ ಅಗೆದು ಮಾರಾಟ ಮಾಡುತ್ತಿದ್ದಾರೆ. ಸುಮಾರು 30 ಅಡಿ ಆಳದವರೆಗೂ ಕೆರೆಯ ಮಣ್ಣು ತೆಗೆದು ಮಾರಾಟ ಮಾಡಿದ್ದಾರೆ. ಇಷ್ಟಾದರೂ ಯಾರೊಬ್ಬರು ಹೇಳೋರಿಲ್ಲ ಕೇಳೋರಿಲ್ಲ.ಕೆರೆ ಮಣ್ಣು ತೆಗೆಯಬೇಕಾದ್ರೆ ಸ್ಥಳೀಯ ಗ್ರಾಮ ಪಂಚಾಯ್ತಿ ಹಾಗೂ ಗಣಿ ಇಲಾಖೆ ಅನುಮತಿ ಕಡ್ಡಾಯ. ಆದ್ರೆ, ತೊಟ್ಟಿ ಕೆರೆಯಲ್ಲಿ ಯಾರ ಅನುಮತಿಯನ್ನು ಪಡೆಯದೇ ಎಗ್ಗಿಲ್ಲದೇ ಬೇರೆ ಬೇರೆ ರಾಜ್ಯಗಳಿಗೆ ಮಣ್ಣು ಸಾಗಿಸುತ್ತಿದ್ದಾರೆ. ಸಕಾ೯ರಕ್ಕೂ ರಾಜಧಾನವನ್ನು ಪಾವತಿಸದೇ ರಾಜಾರೋಷವಾಗಿ ಕೆರೆ ಒಡಲಿಗೆ ಕನ್ನಹಾಕುತ್ತಿದ್ದಾರೆ. ಇನ್ನು ತೊಟ್ಲಿ ಗ್ರಾಮ ಪಂಚಾಯ್ತಿಯ ಕೆಲ ಸದಸ್ಯರು ಹಾಗೂ ಜಲಗಾರರೇ ಮಣ್ಣು ಸಾಗಾಣೆಯಲ್ಲಿ ತೊಡಗಿರುವ ಆರೋಪ ಕೇಳಿ ಬಂದಿದೆ.ಕೆರೆ ಮಣ್ಣು ತೆಗೆಯಲು ಅನುಮತಿ ಪಡೆದರು ಕೂಡ ಅದಕ್ಕೊಂದು ನಿಧಿ೯ಷ್ಟ ಸಮಯ ನಿಡಲಾಗುತ್ತೆ.. ಎಷ್ಟು ಆಳ ಹಾಗೂ ಅಗಲ ಅಗೆಯಬೇಕು ಅನ್ನೋ ಸೂಚನೆ ನೀಡಲಾಗುತ್ತೆ.. ಹೀಗೆ ತೆಗೆದ ಕೆರೆ ಮಣ್ಣುನ್ನು ಕೇವಲ ಕೃಷಿ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು ಅಂತ ಸಕಾ೯ರದ ಆದೇಶವಿದೆ. ಆದ್ರಿಲ್ಲಿ ಎಲ್ಲಾ ನಿಯಮ ಗಾಳಿಗೆ ತೂರಿ ಮನೆಗಳ ಪಾಯದ ಕೆಲಸಕ್ಕೆ, ಇಟ್ಟಿಗೆ ಕಾಖಾ೯ನೆ ಹಾಗೂ ಇನ್ನಿತರ ಖಾಸಗಿ ಕೆಲಸಗಳಿಗೆ ಕೆರೆ ಮಣ್ಣು ಮಾರಾಟಮಾಡಿ ಹಣ ಮಾಡುತ್ತಿದ್ದಾರೆ. ಆಂಧ್ರ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಂದ ವಿವಿಧ ಕೆಲಸಗಳಿಗೆ ಈ ಮಣ್ಣಿಗೆ ಭಾರೀ ಬೇಡಿಕೆ ಇದೆ.

ಇದನ್ನೂ ವೀಕ್ಷಿಸಿ:  ಸರ್ಕಾರಿ ಶಾಲೆ ಮೇಲೆ ಬಿತ್ತು ಭೂ ಬಕಾಸುರರ ಕಣ್ಣು..? ಶಾಲೆ ಭೂಮಿ ಕಬಳಿಸಿ ಬಡಾವಣೆ ನಿರ್ಮಾಣಕ್ಕೆ ಪ್ಲಾನ್!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more