ವಿಶೇಷವಾಗಿರುತ್ತೆ ಲಂಬಾಣಿ ತಾಂಡದ ಬೆಳಕಿನ ಹಬ್ಬ! ದೀಪಾವಳಿಯಲ್ಲಿ ಬಂಜಾರ ಯುವತಿಯರದ್ದೇ ಮೇಲುಗೈ!

ವಿಶೇಷವಾಗಿರುತ್ತೆ ಲಂಬಾಣಿ ತಾಂಡದ ಬೆಳಕಿನ ಹಬ್ಬ! ದೀಪಾವಳಿಯಲ್ಲಿ ಬಂಜಾರ ಯುವತಿಯರದ್ದೇ ಮೇಲುಗೈ!

Published : Nov 13, 2023, 10:49 AM IST

ದೇಶಾದ್ಯಂತ ದೀಪಾವಳಿ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತೆ. ಹಿಂದೂ ಸಂಪ್ರಾಯದಲ್ಲಿ ಬೆಳಕಿನ ಹಬ್ಬ ತನ್ನದೇ ಆದ ವೈಶಿಷ್ಟತೆಯಿಂದ ಕೂಡಿರುತ್ತದೆ. ಉತ್ತರ ಕರ್ನಾಟಕದಲ್ಲಿರುವ  ಲಂಬಾಣಿ ಸಮುದಾಯ ಮಾತ್ರ ಭಿನ್ನ ವಿಭಿನ್ನವಾಗಿರುತ್ತದೆ..
 


ಬಂಜಾರ ಸಮುದಾಯದಲ್ಲಿ ದೀಪಾವಳಿ ಯುವತಿಯರ ಹಬ್ಬವಾಗಿದೆ. ಮದುವೆಯಾಗದ ಕನ್ಯೆಯರು ತಾಂಡಾದ ಎಲ್ಲರ ಮನೆಗಳಿಗೆ ತೆರಳಿ ಅಲ್ಲಿ ದೀಪಗಳನ್ನು(Deepavali) ಬೆಳಗಿಸುವುದು ಪದ್ಧತಿಯಾಗಿದೆ. ಮಣ್ಣಿನ ದೀಪದ ಆರತಿ ಹಿಡಿದುಕೊಂಡು ಮನೆ ಮನೆಗೆ ಹೋಗಿ ಹಾಡು ಹಾಡುತ್ತಾರೆ. ಆ ಮನೆಯವರು ಕನ್ಯೆಯರನ್ನ ಸ್ವಾಗತಿಸಿ ದೀಪದ ತಟ್ಟೆಗೆ  ಹಣ ಹಾಕುತ್ತಾರೆ. ತಾಂಡಾದ ಮುಖ್ಯ ಸ್ಥಳ ಸೇವಾಲಾಲ್ ದೇವಾಲಯದ(Sevalal temple) ಎದುರು ಕನ್ನೆಯರು, ಮಹಿಳೆಯರು ತಮ್ಮ ಸಂಪ್ರದಾಯ ಬದ್ಧ ಹಾಡು ಹೇಳುತ್ತಾ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಅಷ್ಟೆ ಅಲ್ಲದೇ ಮದುವೆ ಫಿಕ್ಸ್ ಆಗಿರುವ  ಯುವತಿಯರನ್ನ ತಬ್ಬಿಕೊಂಡು ಅಳುವುದು  ರೂಡಿಯಲ್ಲಿದೆ. ದೀಪಾವಳಿಯ ಪಾಡ್ಯದ ದಿನ  ತಾಂಡ  ಮಹಿಳೆಯರು(Women) ಹಸುವಿನ ಸಗಣಿಯಿಂದ ಪಂಚ ಪಾಂಡವರ ಮೂರ್ತಿಗಳನ್ನ ತಯಾರಿಸುತ್ತಾರೆ. ಮನೆಯ ಅಂಗಳದಲ್ಲಿ ರಂಗೋಲಿ ಹಾಕಿ‌, ಫಸಲಿನ ಹೂವುಗಳನ್ನ ತಂದು ಅಲಂಕರಿಸಿ ಪೂಜಿಸಲಾಗುತ್ತದೆ. ಹೀಗೆ ಸಗಣಿಯಿಂದ‌ ಮಾಡಿದ ಪಾಂಡವರಿಗೆ  ಮೊಸರು ಹಾಕಿ ನೈವೇದ್ಯ ಅರ್ಪಿಸುತ್ತಾರೆ. ದೀಪದ ಆರತಿ‌ ಮೂಲಕ ಇಡೀ ಲಂಬಾಣಿ(Lambni) ಜನಾಂಗವು ಸ್ವಾಗತಿಸುವುದು ಹಬ್ಬದ ಆಚರಣೆಗಳಲ್ಲಿ ಮತ್ತೊಂದು ವೈಶಿಷ್ಟ್ಯ. 15 ದಿನಗಳ‌ ಹಿಂದಿನಿಂದಲೆ ದೀಪಾವಳಿ ಹಬ್ಬಕ್ಕೆ ತಯಾರಿ ಶುರುವಾಗುತ್ತೆ. ಪ್ರತಿನಿತ್ಯ ಸಂಜೆ ಲಂಬಾಣಿ‌ ಸಮುದಾಯದ ಹೆಂಗಳೆಯರೆಲ್ಲ ಸೇವಲಾಲ್ ದೇವಸ್ಥಾನದಲ್ಲಿ ಜಮಾಯಿಸ್ತಾರೆ. ತಾಂಡಗಳಲ್ಲಿನ ಮನೆತನದ ನವ ಯುವತಿಯರಿಗೆ ತಮ್ಮ ಪಾರಂಪರಿಕ ನೃತ್ಯ, ಹಾಡು, ಬಟ್ಟೆಯ ಮೇಲೆ ಕಸೂತಿ ಕಲಿಸುತ್ತಾರೆ. 15 ದಿನಗಳ ಬಳಿಕ ಹಬ್ಬದ ದಿನ ದೇವಸ್ಥಾನದಲ್ಲಿ ಕಸೂತಿ ಮಾಡಿದ್ದ ಬಟ್ಟೆಯನ್ನೇ ಧರಿಸುತ್ತಾರೆ.

ಇದನ್ನೂ ವೀಕ್ಷಿಸಿ:   ಈ ದೀಪಾವಳಿಗೆ ಗ್ರಹಗಳಿಂದಲೇ ಸಿಗಲಿದೆ ಭರ್ಜರಿ ಗಿಫ್ಟ್‌! ಯಾವ ರಾಶಿಗೆ ದೊರೆಯಲಿದೆ ಚಕ್ರವರ್ತಿ ಯೋಗ ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!