ವಿಶೇಷವಾಗಿರುತ್ತೆ ಲಂಬಾಣಿ ತಾಂಡದ ಬೆಳಕಿನ ಹಬ್ಬ! ದೀಪಾವಳಿಯಲ್ಲಿ ಬಂಜಾರ ಯುವತಿಯರದ್ದೇ ಮೇಲುಗೈ!

ವಿಶೇಷವಾಗಿರುತ್ತೆ ಲಂಬಾಣಿ ತಾಂಡದ ಬೆಳಕಿನ ಹಬ್ಬ! ದೀಪಾವಳಿಯಲ್ಲಿ ಬಂಜಾರ ಯುವತಿಯರದ್ದೇ ಮೇಲುಗೈ!

Published : Nov 13, 2023, 10:49 AM IST

ದೇಶಾದ್ಯಂತ ದೀಪಾವಳಿ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತೆ. ಹಿಂದೂ ಸಂಪ್ರಾಯದಲ್ಲಿ ಬೆಳಕಿನ ಹಬ್ಬ ತನ್ನದೇ ಆದ ವೈಶಿಷ್ಟತೆಯಿಂದ ಕೂಡಿರುತ್ತದೆ. ಉತ್ತರ ಕರ್ನಾಟಕದಲ್ಲಿರುವ  ಲಂಬಾಣಿ ಸಮುದಾಯ ಮಾತ್ರ ಭಿನ್ನ ವಿಭಿನ್ನವಾಗಿರುತ್ತದೆ..
 


ಬಂಜಾರ ಸಮುದಾಯದಲ್ಲಿ ದೀಪಾವಳಿ ಯುವತಿಯರ ಹಬ್ಬವಾಗಿದೆ. ಮದುವೆಯಾಗದ ಕನ್ಯೆಯರು ತಾಂಡಾದ ಎಲ್ಲರ ಮನೆಗಳಿಗೆ ತೆರಳಿ ಅಲ್ಲಿ ದೀಪಗಳನ್ನು(Deepavali) ಬೆಳಗಿಸುವುದು ಪದ್ಧತಿಯಾಗಿದೆ. ಮಣ್ಣಿನ ದೀಪದ ಆರತಿ ಹಿಡಿದುಕೊಂಡು ಮನೆ ಮನೆಗೆ ಹೋಗಿ ಹಾಡು ಹಾಡುತ್ತಾರೆ. ಆ ಮನೆಯವರು ಕನ್ಯೆಯರನ್ನ ಸ್ವಾಗತಿಸಿ ದೀಪದ ತಟ್ಟೆಗೆ  ಹಣ ಹಾಕುತ್ತಾರೆ. ತಾಂಡಾದ ಮುಖ್ಯ ಸ್ಥಳ ಸೇವಾಲಾಲ್ ದೇವಾಲಯದ(Sevalal temple) ಎದುರು ಕನ್ನೆಯರು, ಮಹಿಳೆಯರು ತಮ್ಮ ಸಂಪ್ರದಾಯ ಬದ್ಧ ಹಾಡು ಹೇಳುತ್ತಾ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಅಷ್ಟೆ ಅಲ್ಲದೇ ಮದುವೆ ಫಿಕ್ಸ್ ಆಗಿರುವ  ಯುವತಿಯರನ್ನ ತಬ್ಬಿಕೊಂಡು ಅಳುವುದು  ರೂಡಿಯಲ್ಲಿದೆ. ದೀಪಾವಳಿಯ ಪಾಡ್ಯದ ದಿನ  ತಾಂಡ  ಮಹಿಳೆಯರು(Women) ಹಸುವಿನ ಸಗಣಿಯಿಂದ ಪಂಚ ಪಾಂಡವರ ಮೂರ್ತಿಗಳನ್ನ ತಯಾರಿಸುತ್ತಾರೆ. ಮನೆಯ ಅಂಗಳದಲ್ಲಿ ರಂಗೋಲಿ ಹಾಕಿ‌, ಫಸಲಿನ ಹೂವುಗಳನ್ನ ತಂದು ಅಲಂಕರಿಸಿ ಪೂಜಿಸಲಾಗುತ್ತದೆ. ಹೀಗೆ ಸಗಣಿಯಿಂದ‌ ಮಾಡಿದ ಪಾಂಡವರಿಗೆ  ಮೊಸರು ಹಾಕಿ ನೈವೇದ್ಯ ಅರ್ಪಿಸುತ್ತಾರೆ. ದೀಪದ ಆರತಿ‌ ಮೂಲಕ ಇಡೀ ಲಂಬಾಣಿ(Lambni) ಜನಾಂಗವು ಸ್ವಾಗತಿಸುವುದು ಹಬ್ಬದ ಆಚರಣೆಗಳಲ್ಲಿ ಮತ್ತೊಂದು ವೈಶಿಷ್ಟ್ಯ. 15 ದಿನಗಳ‌ ಹಿಂದಿನಿಂದಲೆ ದೀಪಾವಳಿ ಹಬ್ಬಕ್ಕೆ ತಯಾರಿ ಶುರುವಾಗುತ್ತೆ. ಪ್ರತಿನಿತ್ಯ ಸಂಜೆ ಲಂಬಾಣಿ‌ ಸಮುದಾಯದ ಹೆಂಗಳೆಯರೆಲ್ಲ ಸೇವಲಾಲ್ ದೇವಸ್ಥಾನದಲ್ಲಿ ಜಮಾಯಿಸ್ತಾರೆ. ತಾಂಡಗಳಲ್ಲಿನ ಮನೆತನದ ನವ ಯುವತಿಯರಿಗೆ ತಮ್ಮ ಪಾರಂಪರಿಕ ನೃತ್ಯ, ಹಾಡು, ಬಟ್ಟೆಯ ಮೇಲೆ ಕಸೂತಿ ಕಲಿಸುತ್ತಾರೆ. 15 ದಿನಗಳ ಬಳಿಕ ಹಬ್ಬದ ದಿನ ದೇವಸ್ಥಾನದಲ್ಲಿ ಕಸೂತಿ ಮಾಡಿದ್ದ ಬಟ್ಟೆಯನ್ನೇ ಧರಿಸುತ್ತಾರೆ.

ಇದನ್ನೂ ವೀಕ್ಷಿಸಿ:   ಈ ದೀಪಾವಳಿಗೆ ಗ್ರಹಗಳಿಂದಲೇ ಸಿಗಲಿದೆ ಭರ್ಜರಿ ಗಿಫ್ಟ್‌! ಯಾವ ರಾಶಿಗೆ ದೊರೆಯಲಿದೆ ಚಕ್ರವರ್ತಿ ಯೋಗ ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!