ವಿಶೇಷವಾಗಿರುತ್ತೆ ಲಂಬಾಣಿ ತಾಂಡದ ಬೆಳಕಿನ ಹಬ್ಬ! ದೀಪಾವಳಿಯಲ್ಲಿ ಬಂಜಾರ ಯುವತಿಯರದ್ದೇ ಮೇಲುಗೈ!

ವಿಶೇಷವಾಗಿರುತ್ತೆ ಲಂಬಾಣಿ ತಾಂಡದ ಬೆಳಕಿನ ಹಬ್ಬ! ದೀಪಾವಳಿಯಲ್ಲಿ ಬಂಜಾರ ಯುವತಿಯರದ್ದೇ ಮೇಲುಗೈ!

Published : Nov 13, 2023, 10:49 AM IST

ದೇಶಾದ್ಯಂತ ದೀಪಾವಳಿ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತೆ. ಹಿಂದೂ ಸಂಪ್ರಾಯದಲ್ಲಿ ಬೆಳಕಿನ ಹಬ್ಬ ತನ್ನದೇ ಆದ ವೈಶಿಷ್ಟತೆಯಿಂದ ಕೂಡಿರುತ್ತದೆ. ಉತ್ತರ ಕರ್ನಾಟಕದಲ್ಲಿರುವ  ಲಂಬಾಣಿ ಸಮುದಾಯ ಮಾತ್ರ ಭಿನ್ನ ವಿಭಿನ್ನವಾಗಿರುತ್ತದೆ..
 


ಬಂಜಾರ ಸಮುದಾಯದಲ್ಲಿ ದೀಪಾವಳಿ ಯುವತಿಯರ ಹಬ್ಬವಾಗಿದೆ. ಮದುವೆಯಾಗದ ಕನ್ಯೆಯರು ತಾಂಡಾದ ಎಲ್ಲರ ಮನೆಗಳಿಗೆ ತೆರಳಿ ಅಲ್ಲಿ ದೀಪಗಳನ್ನು(Deepavali) ಬೆಳಗಿಸುವುದು ಪದ್ಧತಿಯಾಗಿದೆ. ಮಣ್ಣಿನ ದೀಪದ ಆರತಿ ಹಿಡಿದುಕೊಂಡು ಮನೆ ಮನೆಗೆ ಹೋಗಿ ಹಾಡು ಹಾಡುತ್ತಾರೆ. ಆ ಮನೆಯವರು ಕನ್ಯೆಯರನ್ನ ಸ್ವಾಗತಿಸಿ ದೀಪದ ತಟ್ಟೆಗೆ  ಹಣ ಹಾಕುತ್ತಾರೆ. ತಾಂಡಾದ ಮುಖ್ಯ ಸ್ಥಳ ಸೇವಾಲಾಲ್ ದೇವಾಲಯದ(Sevalal temple) ಎದುರು ಕನ್ನೆಯರು, ಮಹಿಳೆಯರು ತಮ್ಮ ಸಂಪ್ರದಾಯ ಬದ್ಧ ಹಾಡು ಹೇಳುತ್ತಾ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಅಷ್ಟೆ ಅಲ್ಲದೇ ಮದುವೆ ಫಿಕ್ಸ್ ಆಗಿರುವ  ಯುವತಿಯರನ್ನ ತಬ್ಬಿಕೊಂಡು ಅಳುವುದು  ರೂಡಿಯಲ್ಲಿದೆ. ದೀಪಾವಳಿಯ ಪಾಡ್ಯದ ದಿನ  ತಾಂಡ  ಮಹಿಳೆಯರು(Women) ಹಸುವಿನ ಸಗಣಿಯಿಂದ ಪಂಚ ಪಾಂಡವರ ಮೂರ್ತಿಗಳನ್ನ ತಯಾರಿಸುತ್ತಾರೆ. ಮನೆಯ ಅಂಗಳದಲ್ಲಿ ರಂಗೋಲಿ ಹಾಕಿ‌, ಫಸಲಿನ ಹೂವುಗಳನ್ನ ತಂದು ಅಲಂಕರಿಸಿ ಪೂಜಿಸಲಾಗುತ್ತದೆ. ಹೀಗೆ ಸಗಣಿಯಿಂದ‌ ಮಾಡಿದ ಪಾಂಡವರಿಗೆ  ಮೊಸರು ಹಾಕಿ ನೈವೇದ್ಯ ಅರ್ಪಿಸುತ್ತಾರೆ. ದೀಪದ ಆರತಿ‌ ಮೂಲಕ ಇಡೀ ಲಂಬಾಣಿ(Lambni) ಜನಾಂಗವು ಸ್ವಾಗತಿಸುವುದು ಹಬ್ಬದ ಆಚರಣೆಗಳಲ್ಲಿ ಮತ್ತೊಂದು ವೈಶಿಷ್ಟ್ಯ. 15 ದಿನಗಳ‌ ಹಿಂದಿನಿಂದಲೆ ದೀಪಾವಳಿ ಹಬ್ಬಕ್ಕೆ ತಯಾರಿ ಶುರುವಾಗುತ್ತೆ. ಪ್ರತಿನಿತ್ಯ ಸಂಜೆ ಲಂಬಾಣಿ‌ ಸಮುದಾಯದ ಹೆಂಗಳೆಯರೆಲ್ಲ ಸೇವಲಾಲ್ ದೇವಸ್ಥಾನದಲ್ಲಿ ಜಮಾಯಿಸ್ತಾರೆ. ತಾಂಡಗಳಲ್ಲಿನ ಮನೆತನದ ನವ ಯುವತಿಯರಿಗೆ ತಮ್ಮ ಪಾರಂಪರಿಕ ನೃತ್ಯ, ಹಾಡು, ಬಟ್ಟೆಯ ಮೇಲೆ ಕಸೂತಿ ಕಲಿಸುತ್ತಾರೆ. 15 ದಿನಗಳ ಬಳಿಕ ಹಬ್ಬದ ದಿನ ದೇವಸ್ಥಾನದಲ್ಲಿ ಕಸೂತಿ ಮಾಡಿದ್ದ ಬಟ್ಟೆಯನ್ನೇ ಧರಿಸುತ್ತಾರೆ.

ಇದನ್ನೂ ವೀಕ್ಷಿಸಿ:   ಈ ದೀಪಾವಳಿಗೆ ಗ್ರಹಗಳಿಂದಲೇ ಸಿಗಲಿದೆ ಭರ್ಜರಿ ಗಿಫ್ಟ್‌! ಯಾವ ರಾಶಿಗೆ ದೊರೆಯಲಿದೆ ಚಕ್ರವರ್ತಿ ಯೋಗ ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!