ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

Published : Aug 19, 2023, 10:23 AM IST

ರೈತರಿಂದ ಭೂಸ್ವಾಧೀನ ಮಾಡಿಕೊಂಡ ಜಮೀನನ್ನು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಬೇರೆಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಮಂಜುನಾಥ್‌ ರೈತರಾಗಿದ್ದಾರೆ. ಸುಮಾರು ದಶಕದ ಹಿಂದೆ ದೇವನಹಳ್ಳಿಯ(Devanahalli) ಹರಳೂರು ಗ್ರಾಮ ಸರ್ವೆ ನಂ 57 ರಲ್ಲಿ ಈತನ ಎರಡು ಎಕರೆ 14 ಕುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದ್ರೆ ಪರಿಹಾರದ ಹಣ(Money) ಬಿಡುಗಡೆ ಆದ್ರೂ ಈ ರೈತನ ಕೈ ಸೇರಿಲ್ಲ. ಕರ್ನಾಟಕ ಕೈಗಾರಿಕಾ ಪ್ರದೇಶ(Karnataka Industrial Area) ಅಭಿವೃದ್ಧಿಗೆ ಇವರ ಜಮೀನು ‌ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದ್ರೆ ನಕಲಿ ದಾಖಲೆ ಸೃಷ್ಠಿಸಿ ಬ್ರೋಕರ್ ಪ್ರಭಾಕರ್ ಹಾಗೂ ಕೆಲ ಅಧಿಕಾರಿಗಳು ಮೂರು ಕೋಟಿ ಏಳೂವರೆ ಲಕ್ಷ ಹಣವನ್ನ ಬೇರೆಯವರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋದು ಮಂಜುನಾಥ್ ಆರೋಪವಾಗಿದೆ. ಪಿಳ್ಳಮುನಿಶಾಮಪ್ಪ, ‌ಸಿಪಿ ರಾಮಕೃಷ್ಣಪ್ಪ ಭೂಸ್ವಾಧೀನ ಆಗಿರುವ ಜಮೀನಿನ ಮೂಲ ಮಾಲೀಕರು. ಇವರ ಮಗನೇ ಮಂಜುನಾಥ್. ಆದ್ರೆ, ಭೂಸ್ವಾಧೀನ ಅಧಿಕಾರಿ ಹಾಗೂ ದಲ್ಲಾಳಿ ಪ್ರಭಾಕರ್ ಶಾಮೀಲು ಆಗಿ ನಕಲಿ ರೈತನ ಅಕೌಂಟಿಗೆ ಹಣ ವರ್ಗಾವಣೆ ಮಾಡಿಸಿ, ನುಂಗಿ ಹಾಕಿದ್ದಾರೆ ಎನ್ನಲಾಗ್ತಿದೆ. ನಕಲಿ ರೈತನಿಂದ ಹಣ ರಿಕವರಿ ಮಾಡಿಕೊಡುವಂತೆ ಡಿಸಿ ಕೋರ್ಟ್ ಆದೇಶ ನೀಡಿದೆ. ಅದ್ರೆ ಅಧಿಕಾರಿಗಳು ಇದೀಗ ಬೇರೆ ಆಟ ಶುರುವಿಟ್ಟುಕೊಂಡಿದ್ದಾರೆ. ಭೂಸ್ವಾಧೀನ ಅಧಿಕಾರಿ ಬಾಳಪ್ಪ ನಾನಾ ಕಾರಣಗಳನ್ನು ಕೊಟ್ಟು ರೈತನ ಹಣ ರಿಕವರಿ ಮಾಡಲು ವಿಳಂಭ ಮಾಡುತ್ತಿದ್ದಾರಂತೆ. ಆದ್ರೆ ಅಧಿಕಾರಿ ಬಾಳಪ್ಪ ಮಾತ್ರ ಹೇಳೋದೇ ಬೇರೆ.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more