ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

Published : Aug 19, 2023, 10:23 AM IST

ರೈತರಿಂದ ಭೂಸ್ವಾಧೀನ ಮಾಡಿಕೊಂಡ ಜಮೀನನ್ನು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಬೇರೆಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಮಂಜುನಾಥ್‌ ರೈತರಾಗಿದ್ದಾರೆ. ಸುಮಾರು ದಶಕದ ಹಿಂದೆ ದೇವನಹಳ್ಳಿಯ(Devanahalli) ಹರಳೂರು ಗ್ರಾಮ ಸರ್ವೆ ನಂ 57 ರಲ್ಲಿ ಈತನ ಎರಡು ಎಕರೆ 14 ಕುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದ್ರೆ ಪರಿಹಾರದ ಹಣ(Money) ಬಿಡುಗಡೆ ಆದ್ರೂ ಈ ರೈತನ ಕೈ ಸೇರಿಲ್ಲ. ಕರ್ನಾಟಕ ಕೈಗಾರಿಕಾ ಪ್ರದೇಶ(Karnataka Industrial Area) ಅಭಿವೃದ್ಧಿಗೆ ಇವರ ಜಮೀನು ‌ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದ್ರೆ ನಕಲಿ ದಾಖಲೆ ಸೃಷ್ಠಿಸಿ ಬ್ರೋಕರ್ ಪ್ರಭಾಕರ್ ಹಾಗೂ ಕೆಲ ಅಧಿಕಾರಿಗಳು ಮೂರು ಕೋಟಿ ಏಳೂವರೆ ಲಕ್ಷ ಹಣವನ್ನ ಬೇರೆಯವರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋದು ಮಂಜುನಾಥ್ ಆರೋಪವಾಗಿದೆ. ಪಿಳ್ಳಮುನಿಶಾಮಪ್ಪ, ‌ಸಿಪಿ ರಾಮಕೃಷ್ಣಪ್ಪ ಭೂಸ್ವಾಧೀನ ಆಗಿರುವ ಜಮೀನಿನ ಮೂಲ ಮಾಲೀಕರು. ಇವರ ಮಗನೇ ಮಂಜುನಾಥ್. ಆದ್ರೆ, ಭೂಸ್ವಾಧೀನ ಅಧಿಕಾರಿ ಹಾಗೂ ದಲ್ಲಾಳಿ ಪ್ರಭಾಕರ್ ಶಾಮೀಲು ಆಗಿ ನಕಲಿ ರೈತನ ಅಕೌಂಟಿಗೆ ಹಣ ವರ್ಗಾವಣೆ ಮಾಡಿಸಿ, ನುಂಗಿ ಹಾಕಿದ್ದಾರೆ ಎನ್ನಲಾಗ್ತಿದೆ. ನಕಲಿ ರೈತನಿಂದ ಹಣ ರಿಕವರಿ ಮಾಡಿಕೊಡುವಂತೆ ಡಿಸಿ ಕೋರ್ಟ್ ಆದೇಶ ನೀಡಿದೆ. ಅದ್ರೆ ಅಧಿಕಾರಿಗಳು ಇದೀಗ ಬೇರೆ ಆಟ ಶುರುವಿಟ್ಟುಕೊಂಡಿದ್ದಾರೆ. ಭೂಸ್ವಾಧೀನ ಅಧಿಕಾರಿ ಬಾಳಪ್ಪ ನಾನಾ ಕಾರಣಗಳನ್ನು ಕೊಟ್ಟು ರೈತನ ಹಣ ರಿಕವರಿ ಮಾಡಲು ವಿಳಂಭ ಮಾಡುತ್ತಿದ್ದಾರಂತೆ. ಆದ್ರೆ ಅಧಿಕಾರಿ ಬಾಳಪ್ಪ ಮಾತ್ರ ಹೇಳೋದೇ ಬೇರೆ.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more