ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

Published : Aug 19, 2023, 10:23 AM IST

ರೈತರಿಂದ ಭೂಸ್ವಾಧೀನ ಮಾಡಿಕೊಂಡ ಜಮೀನನ್ನು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಬೇರೆಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಮಂಜುನಾಥ್‌ ರೈತರಾಗಿದ್ದಾರೆ. ಸುಮಾರು ದಶಕದ ಹಿಂದೆ ದೇವನಹಳ್ಳಿಯ(Devanahalli) ಹರಳೂರು ಗ್ರಾಮ ಸರ್ವೆ ನಂ 57 ರಲ್ಲಿ ಈತನ ಎರಡು ಎಕರೆ 14 ಕುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದ್ರೆ ಪರಿಹಾರದ ಹಣ(Money) ಬಿಡುಗಡೆ ಆದ್ರೂ ಈ ರೈತನ ಕೈ ಸೇರಿಲ್ಲ. ಕರ್ನಾಟಕ ಕೈಗಾರಿಕಾ ಪ್ರದೇಶ(Karnataka Industrial Area) ಅಭಿವೃದ್ಧಿಗೆ ಇವರ ಜಮೀನು ‌ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದ್ರೆ ನಕಲಿ ದಾಖಲೆ ಸೃಷ್ಠಿಸಿ ಬ್ರೋಕರ್ ಪ್ರಭಾಕರ್ ಹಾಗೂ ಕೆಲ ಅಧಿಕಾರಿಗಳು ಮೂರು ಕೋಟಿ ಏಳೂವರೆ ಲಕ್ಷ ಹಣವನ್ನ ಬೇರೆಯವರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋದು ಮಂಜುನಾಥ್ ಆರೋಪವಾಗಿದೆ. ಪಿಳ್ಳಮುನಿಶಾಮಪ್ಪ, ‌ಸಿಪಿ ರಾಮಕೃಷ್ಣಪ್ಪ ಭೂಸ್ವಾಧೀನ ಆಗಿರುವ ಜಮೀನಿನ ಮೂಲ ಮಾಲೀಕರು. ಇವರ ಮಗನೇ ಮಂಜುನಾಥ್. ಆದ್ರೆ, ಭೂಸ್ವಾಧೀನ ಅಧಿಕಾರಿ ಹಾಗೂ ದಲ್ಲಾಳಿ ಪ್ರಭಾಕರ್ ಶಾಮೀಲು ಆಗಿ ನಕಲಿ ರೈತನ ಅಕೌಂಟಿಗೆ ಹಣ ವರ್ಗಾವಣೆ ಮಾಡಿಸಿ, ನುಂಗಿ ಹಾಕಿದ್ದಾರೆ ಎನ್ನಲಾಗ್ತಿದೆ. ನಕಲಿ ರೈತನಿಂದ ಹಣ ರಿಕವರಿ ಮಾಡಿಕೊಡುವಂತೆ ಡಿಸಿ ಕೋರ್ಟ್ ಆದೇಶ ನೀಡಿದೆ. ಅದ್ರೆ ಅಧಿಕಾರಿಗಳು ಇದೀಗ ಬೇರೆ ಆಟ ಶುರುವಿಟ್ಟುಕೊಂಡಿದ್ದಾರೆ. ಭೂಸ್ವಾಧೀನ ಅಧಿಕಾರಿ ಬಾಳಪ್ಪ ನಾನಾ ಕಾರಣಗಳನ್ನು ಕೊಟ್ಟು ರೈತನ ಹಣ ರಿಕವರಿ ಮಾಡಲು ವಿಳಂಭ ಮಾಡುತ್ತಿದ್ದಾರಂತೆ. ಆದ್ರೆ ಅಧಿಕಾರಿ ಬಾಳಪ್ಪ ಮಾತ್ರ ಹೇಳೋದೇ ಬೇರೆ.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more