ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

Published : Aug 19, 2023, 10:23 AM IST

ರೈತರಿಂದ ಭೂಸ್ವಾಧೀನ ಮಾಡಿಕೊಂಡ ಜಮೀನನ್ನು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಬೇರೆಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಮಂಜುನಾಥ್‌ ರೈತರಾಗಿದ್ದಾರೆ. ಸುಮಾರು ದಶಕದ ಹಿಂದೆ ದೇವನಹಳ್ಳಿಯ(Devanahalli) ಹರಳೂರು ಗ್ರಾಮ ಸರ್ವೆ ನಂ 57 ರಲ್ಲಿ ಈತನ ಎರಡು ಎಕರೆ 14 ಕುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದ್ರೆ ಪರಿಹಾರದ ಹಣ(Money) ಬಿಡುಗಡೆ ಆದ್ರೂ ಈ ರೈತನ ಕೈ ಸೇರಿಲ್ಲ. ಕರ್ನಾಟಕ ಕೈಗಾರಿಕಾ ಪ್ರದೇಶ(Karnataka Industrial Area) ಅಭಿವೃದ್ಧಿಗೆ ಇವರ ಜಮೀನು ‌ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದ್ರೆ ನಕಲಿ ದಾಖಲೆ ಸೃಷ್ಠಿಸಿ ಬ್ರೋಕರ್ ಪ್ರಭಾಕರ್ ಹಾಗೂ ಕೆಲ ಅಧಿಕಾರಿಗಳು ಮೂರು ಕೋಟಿ ಏಳೂವರೆ ಲಕ್ಷ ಹಣವನ್ನ ಬೇರೆಯವರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋದು ಮಂಜುನಾಥ್ ಆರೋಪವಾಗಿದೆ. ಪಿಳ್ಳಮುನಿಶಾಮಪ್ಪ, ‌ಸಿಪಿ ರಾಮಕೃಷ್ಣಪ್ಪ ಭೂಸ್ವಾಧೀನ ಆಗಿರುವ ಜಮೀನಿನ ಮೂಲ ಮಾಲೀಕರು. ಇವರ ಮಗನೇ ಮಂಜುನಾಥ್. ಆದ್ರೆ, ಭೂಸ್ವಾಧೀನ ಅಧಿಕಾರಿ ಹಾಗೂ ದಲ್ಲಾಳಿ ಪ್ರಭಾಕರ್ ಶಾಮೀಲು ಆಗಿ ನಕಲಿ ರೈತನ ಅಕೌಂಟಿಗೆ ಹಣ ವರ್ಗಾವಣೆ ಮಾಡಿಸಿ, ನುಂಗಿ ಹಾಕಿದ್ದಾರೆ ಎನ್ನಲಾಗ್ತಿದೆ. ನಕಲಿ ರೈತನಿಂದ ಹಣ ರಿಕವರಿ ಮಾಡಿಕೊಡುವಂತೆ ಡಿಸಿ ಕೋರ್ಟ್ ಆದೇಶ ನೀಡಿದೆ. ಅದ್ರೆ ಅಧಿಕಾರಿಗಳು ಇದೀಗ ಬೇರೆ ಆಟ ಶುರುವಿಟ್ಟುಕೊಂಡಿದ್ದಾರೆ. ಭೂಸ್ವಾಧೀನ ಅಧಿಕಾರಿ ಬಾಳಪ್ಪ ನಾನಾ ಕಾರಣಗಳನ್ನು ಕೊಟ್ಟು ರೈತನ ಹಣ ರಿಕವರಿ ಮಾಡಲು ವಿಳಂಭ ಮಾಡುತ್ತಿದ್ದಾರಂತೆ. ಆದ್ರೆ ಅಧಿಕಾರಿ ಬಾಳಪ್ಪ ಮಾತ್ರ ಹೇಳೋದೇ ಬೇರೆ.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more