ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

Published : Aug 19, 2023, 10:23 AM IST

ರೈತರಿಂದ ಭೂಸ್ವಾಧೀನ ಮಾಡಿಕೊಂಡ ಜಮೀನನ್ನು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಬೇರೆಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಮಂಜುನಾಥ್‌ ರೈತರಾಗಿದ್ದಾರೆ. ಸುಮಾರು ದಶಕದ ಹಿಂದೆ ದೇವನಹಳ್ಳಿಯ(Devanahalli) ಹರಳೂರು ಗ್ರಾಮ ಸರ್ವೆ ನಂ 57 ರಲ್ಲಿ ಈತನ ಎರಡು ಎಕರೆ 14 ಕುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದ್ರೆ ಪರಿಹಾರದ ಹಣ(Money) ಬಿಡುಗಡೆ ಆದ್ರೂ ಈ ರೈತನ ಕೈ ಸೇರಿಲ್ಲ. ಕರ್ನಾಟಕ ಕೈಗಾರಿಕಾ ಪ್ರದೇಶ(Karnataka Industrial Area) ಅಭಿವೃದ್ಧಿಗೆ ಇವರ ಜಮೀನು ‌ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದ್ರೆ ನಕಲಿ ದಾಖಲೆ ಸೃಷ್ಠಿಸಿ ಬ್ರೋಕರ್ ಪ್ರಭಾಕರ್ ಹಾಗೂ ಕೆಲ ಅಧಿಕಾರಿಗಳು ಮೂರು ಕೋಟಿ ಏಳೂವರೆ ಲಕ್ಷ ಹಣವನ್ನ ಬೇರೆಯವರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋದು ಮಂಜುನಾಥ್ ಆರೋಪವಾಗಿದೆ. ಪಿಳ್ಳಮುನಿಶಾಮಪ್ಪ, ‌ಸಿಪಿ ರಾಮಕೃಷ್ಣಪ್ಪ ಭೂಸ್ವಾಧೀನ ಆಗಿರುವ ಜಮೀನಿನ ಮೂಲ ಮಾಲೀಕರು. ಇವರ ಮಗನೇ ಮಂಜುನಾಥ್. ಆದ್ರೆ, ಭೂಸ್ವಾಧೀನ ಅಧಿಕಾರಿ ಹಾಗೂ ದಲ್ಲಾಳಿ ಪ್ರಭಾಕರ್ ಶಾಮೀಲು ಆಗಿ ನಕಲಿ ರೈತನ ಅಕೌಂಟಿಗೆ ಹಣ ವರ್ಗಾವಣೆ ಮಾಡಿಸಿ, ನುಂಗಿ ಹಾಕಿದ್ದಾರೆ ಎನ್ನಲಾಗ್ತಿದೆ. ನಕಲಿ ರೈತನಿಂದ ಹಣ ರಿಕವರಿ ಮಾಡಿಕೊಡುವಂತೆ ಡಿಸಿ ಕೋರ್ಟ್ ಆದೇಶ ನೀಡಿದೆ. ಅದ್ರೆ ಅಧಿಕಾರಿಗಳು ಇದೀಗ ಬೇರೆ ಆಟ ಶುರುವಿಟ್ಟುಕೊಂಡಿದ್ದಾರೆ. ಭೂಸ್ವಾಧೀನ ಅಧಿಕಾರಿ ಬಾಳಪ್ಪ ನಾನಾ ಕಾರಣಗಳನ್ನು ಕೊಟ್ಟು ರೈತನ ಹಣ ರಿಕವರಿ ಮಾಡಲು ವಿಳಂಭ ಮಾಡುತ್ತಿದ್ದಾರಂತೆ. ಆದ್ರೆ ಅಧಿಕಾರಿ ಬಾಳಪ್ಪ ಮಾತ್ರ ಹೇಳೋದೇ ಬೇರೆ.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more