ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

Published : Aug 19, 2023, 10:23 AM IST

ರೈತರಿಂದ ಭೂಸ್ವಾಧೀನ ಮಾಡಿಕೊಂಡ ಜಮೀನನ್ನು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಬೇರೆಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ಮಂಜುನಾಥ್‌ ರೈತರಾಗಿದ್ದಾರೆ. ಸುಮಾರು ದಶಕದ ಹಿಂದೆ ದೇವನಹಳ್ಳಿಯ(Devanahalli) ಹರಳೂರು ಗ್ರಾಮ ಸರ್ವೆ ನಂ 57 ರಲ್ಲಿ ಈತನ ಎರಡು ಎಕರೆ 14 ಕುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದ್ರೆ ಪರಿಹಾರದ ಹಣ(Money) ಬಿಡುಗಡೆ ಆದ್ರೂ ಈ ರೈತನ ಕೈ ಸೇರಿಲ್ಲ. ಕರ್ನಾಟಕ ಕೈಗಾರಿಕಾ ಪ್ರದೇಶ(Karnataka Industrial Area) ಅಭಿವೃದ್ಧಿಗೆ ಇವರ ಜಮೀನು ‌ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದ್ರೆ ನಕಲಿ ದಾಖಲೆ ಸೃಷ್ಠಿಸಿ ಬ್ರೋಕರ್ ಪ್ರಭಾಕರ್ ಹಾಗೂ ಕೆಲ ಅಧಿಕಾರಿಗಳು ಮೂರು ಕೋಟಿ ಏಳೂವರೆ ಲಕ್ಷ ಹಣವನ್ನ ಬೇರೆಯವರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋದು ಮಂಜುನಾಥ್ ಆರೋಪವಾಗಿದೆ. ಪಿಳ್ಳಮುನಿಶಾಮಪ್ಪ, ‌ಸಿಪಿ ರಾಮಕೃಷ್ಣಪ್ಪ ಭೂಸ್ವಾಧೀನ ಆಗಿರುವ ಜಮೀನಿನ ಮೂಲ ಮಾಲೀಕರು. ಇವರ ಮಗನೇ ಮಂಜುನಾಥ್. ಆದ್ರೆ, ಭೂಸ್ವಾಧೀನ ಅಧಿಕಾರಿ ಹಾಗೂ ದಲ್ಲಾಳಿ ಪ್ರಭಾಕರ್ ಶಾಮೀಲು ಆಗಿ ನಕಲಿ ರೈತನ ಅಕೌಂಟಿಗೆ ಹಣ ವರ್ಗಾವಣೆ ಮಾಡಿಸಿ, ನುಂಗಿ ಹಾಕಿದ್ದಾರೆ ಎನ್ನಲಾಗ್ತಿದೆ. ನಕಲಿ ರೈತನಿಂದ ಹಣ ರಿಕವರಿ ಮಾಡಿಕೊಡುವಂತೆ ಡಿಸಿ ಕೋರ್ಟ್ ಆದೇಶ ನೀಡಿದೆ. ಅದ್ರೆ ಅಧಿಕಾರಿಗಳು ಇದೀಗ ಬೇರೆ ಆಟ ಶುರುವಿಟ್ಟುಕೊಂಡಿದ್ದಾರೆ. ಭೂಸ್ವಾಧೀನ ಅಧಿಕಾರಿ ಬಾಳಪ್ಪ ನಾನಾ ಕಾರಣಗಳನ್ನು ಕೊಟ್ಟು ರೈತನ ಹಣ ರಿಕವರಿ ಮಾಡಲು ವಿಳಂಭ ಮಾಡುತ್ತಿದ್ದಾರಂತೆ. ಆದ್ರೆ ಅಧಿಕಾರಿ ಬಾಳಪ್ಪ ಮಾತ್ರ ಹೇಳೋದೇ ಬೇರೆ.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more