ಮಲಪ್ರಭಾ, ಘಟಪ್ರಭಾ ನದಿಗಳಿಂದಲೇ ಅಕ್ರಮ ಒತ್ತುವರಿ: ಸರ್ವೇ ಕಾರ್ಯದಲ್ಲಿ ಬಯಲಾಯ್ತು ಅಚ್ಚರಿ ಸತ್ಯ !

ಮಲಪ್ರಭಾ, ಘಟಪ್ರಭಾ ನದಿಗಳಿಂದಲೇ ಅಕ್ರಮ ಒತ್ತುವರಿ: ಸರ್ವೇ ಕಾರ್ಯದಲ್ಲಿ ಬಯಲಾಯ್ತು ಅಚ್ಚರಿ ಸತ್ಯ !

Published : Sep 23, 2023, 10:32 AM IST

ಮಲಪ್ರಭಾ, ಘಟಪ್ರಭಾ ಒಡಲಲ್ಲಿ ಅಕ್ರಮ ಮರಳು ದಂಧೆ ಅನ್ನೋದು ಹಳೇ ಸುದ್ದಿ. ಆದ್ರೆ ಈ ಖತರ್ನಾಕ್ ಕಳ್ಳರು ನದಿಯನ್ನೇ ಕದಿಯುತ್ತಿದ್ದಾರೆ ಅಂದ್ರೆ ನಂಬ್ತೀರಾ. ನದಿಯನ್ನ ಕದಿಯೋದೇಗೆ ಅನ್ನೋ ಅನುಮಾನ ಬಂತಾ.. ಈ ಸ್ಟೋರಿ ನೋಡಿ..
 

ನನ್ನದು ಅಂತ ಆಸ್ತಿ ಇರಬೇಕು ಅನ್ನೋರೇ ಹೆಚ್ಚು.. ಕಷ್ಟ ಪಟ್ಟು ಕೆಲವರು ಆಸ್ತಿ ಸಂಪಾದನೆ ಮಾಡಿದ್ರೆ, ಮತ್ತೆ ಕೆಲವರು ಭೂಮಿ ಆಸೆಗೆ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ತಾರೆ. ಇಂಥ ಎಷ್ಟೋ ಕೇಸ್‌ಗಳನ್ನ ನೋಡಿದ್ದೇವೆ. ಆದ್ರೆ, ಬಾಗಲಕೋಟೆಯಲ್ಲಿ(Bagalkot) ನದಿಗಳೇ ಭೂಮಿ ಒತ್ತುವರಿ(Land encrochment) ಮಾಡ್ಕೊಂಡಿವೆ. ಮಲಪ್ರಭಾ ಹಾಗೂ  ಘಟಪ್ರಭಾ ನದಿಗಳ ಸರ್ವೇ ಕಾರ್ಯದ ವೇಳೆ ಈ ಒತ್ತುವರಿ ರಹಸ್ಯ ಬಯಲಾಗಿದೆ. ಬಾಗಲಕೋಟೆ ಜಿಲ್ಲೆಯ ಜನರ ಜೀವನಾಡಿಯಾದ ನದಿಗಳೆಂದರೆ(Rivers) ಮಲಪ್ರಭಾ ಹಾಗೂ ಘಟಪ್ರಭಾ. ಘಟಪ್ರಭಾ ನದಿ ಬಾಗಲಕೋಟೆಯ ಮುಧೋಳ ಮತ್ತು ರಬಕವಿ ಬನಹಟ್ಟಿ ತಾಲೂಕಿನಲ್ಲಿ ಹರಿಯುತ್ತೆ. ಬಾದಾಮಿ, ಗುಳೇದಗುಡ್ಡ, ಹುನಗುಂದ, ಇಳಕಲ್ ತಾಲೂಕಿನಲ್ಲಿ ಮಲಪ್ರಭಾ ನದಿ ಹರಿಯುತ್ತೆ. ಆದ್ರೆ ನದಿ ತೀರದ 487 ಎಕರೆ ಜಾಗವನ್ನು ರೈತರು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿದ್ದಾರೆ. ಹೀಗಾಗಿ ನದಿಗಳು ತಾವು ಹರಿಯುವ ದಿಕ್ಕನ್ನೇ ಬದಲಿಸಿ, 665 ಎಕರೆ ಜಮೀನು ಒತ್ತುವರಿ ಮಾಡಿಕೊಂಡಿವೆ.2009 & 2019ರಲ್ಲಿ ಪ್ರವಾಹ(Flood) ಉಂಟಾದಾಗ 71 ಗ್ರಾಮಗಳಿಗೆ ಮಲಪ್ರಭಾ ನದಿ ನೀರು ನುಗ್ಗಿತ್ತು. ಘಟಪ್ರಭಾ ನದಿ ನೀರು ನುಗ್ಗಿ 70 ಗ್ರಾಮಗಳಿಗೆ ಅಪಾರ ಹಾನಿಯಾಗಿತ್ತು. ಹೀಗಾಗಿ ನದಿಗಳ ಸರ್ವೇ ಕಾರ್ಯ ಮಾಡುವಂತೆ ಒತ್ತಾಯ ಕೇಳಿಬಂದಿತ್ತು. ಈಗ ಭೂದಾಖಲೆಗಳ ಇಲಾಖೆ ಸರ್ವೇ ಕಾರ್ಯ ನಡೆಸಿದ್ದು, ಈ ವೇಳೆ ನದಿಗಳು ದಿಕ್ಕು ಬದಲಿಸಿ ಜಮೀನು ಒತ್ತುವರಿಮಾಡಿಕೊಂಡಿದ್ದಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ವರದಿ ಸಲ್ಲಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಯುಐ ಟೀಸರ್ ನೋಡಿ ವಿದೇಶಿಗರು ಫಿದಾ ! ಬಾಪ್ ರೇ ಬಾಪ್ ಎಂದ ಪಾಕಿಸ್ತಾನಿ ಯೂಟುಬರ್‌..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more