ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

Published : Nov 06, 2023, 10:37 AM IST

ಸಿಲಿಕಾನ್ ಸಿಟಿಗೂ ಚಿರತೆಗೂ ನಂಟು ಸದ್ಯಕ್ಕೆ ಕೊನೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಇದೀಗ ಮತ್ತೊಂದು ಚಿರತೆ ರಾಜಧಾನಿಗೆ ಪಾದಾರ್ಪಣೆ ಮಾಡಿದೆ
 

ಅರಣ್ಯ ಗಡಿಭಾಗದ ಗ್ರಾಮಗಳಿಗೆ ಲಗ್ಗೆ ಇಡ್ತಿದ್ದ ಚಿರತೆಗಳು, ಐಟಿ ಸಿಟಿ ಬೆಂಗಳೂರಿನಲ್ಲೂ(Bengaluru) ಪ್ರತ್ಯಕ್ಷವಾಗ್ತಿವೆ. ಕಳೆದ ವಾರವಷ್ಟೇ ಕೂಡ್ಲುಗೇಟ್ನಲ್ಲಿ ಚಿರತೆ(Leopard) ಕಾಣಿಸಿಕೊಂಡಿತ್ತು. ಅಪಾರ್ಟ್ಮೆಂಟ್ಗಳಲ್ಲಿ ಓಡಾಡಿ ಜನರನ್ನು ಬೆಚ್ಚಿ ಬೀಳಿಸಿತ್ತು. ಕೊನೆಗೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ವೈಫಲ್ಯದಿಂದ ಚಿರತೆ ಮೃತಪಟ್ಟಿತ್ತು. ಇದೀಗ ಮತ್ತೆ ಎಲೆಕ್ಟ್ರಾನಿಕ್ ಸಿಟಿ(Electronic City) ವ್ಯಾಪ್ತಿಯಲ್ಲಿ ಪ್ರತ್ಯಕ್ಷವಾಗಿದೆ. ಕೂಡ್ಲುಗೇಟ್ನಿಂದ ಕೇವಲ ಐದಾರು ಕಿಲೋಮೀಟರ್ ದೂರದಲ್ಲಿರೋ ಎಲೆಕ್ಟ್ರಾನಿಕ್ ಸಿಟಿಯ ಕೂಗಳತೆಯ ಚಿಕ್ಕತೋಗೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ.. ಚಿರತೆ ಓಡಾಟದ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಚಿರತೆ ಹೆಜ್ಜೆ ಗುರುತನ್ನು ಪರಿಶೀಲಿಸಿದ್ರು. ಚಿರತೆಯನ್ನು ಕಣ್ಣಾರೆ ಕಂಡ ಸ್ಥಳೀಯರಿಂದ ಮಾಹಿತಿ ಪಡೆದ್ರು. ನಿನ್ನೆ ಸಂಜೆ 6 ಗಂಟೆಯಲ್ಲಿ ಜನರು ಚಿರತೆಯನ್ನು ನೋಡಿ ಭಯಭೀತರಾಗಿದ್ದಾರೆ.. ಚಿಕ್ಕತೋಗೂರು ಗ್ರಾಮದ ಮನೆಯೊಂದರ ಕಾಂಪೌಂಡ್ ಒಳಗಿದ್ದ ನಾಯಿಯ ಮೇಲೆ ಆಟ್ಯಾಕ್ ಮಾಡಲು ಚಿರತೆ ಬಂದಿದ್ದನ್ನ ಮನೆಯಲ್ಲಿದ್ದ ಬಾಲಕ ನೋಡಿ ಗಾಬರಿಗೊಂಡಿದ್ದಾನೆ. ಇನ್ನೂ ಇದೇ ಗ್ರಾಮದ ಸಾಕಷ್ಟು ಭಾಗದಲ್ಲಿ ತೋಟ, ಹೊಲಗಳಿವೆ.. ಹೀಗಾಗಿ ಜನರು ಭಯದಲ್ಲೇ ಕಾಲ ಕಳೆಯುವಂತಾಗಿದೆ. ಅರಣ್ಯ ಸಿಬ್ಬಂದಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.. ಒಬ್ಬಂಟಿಯಾಗಿ ಯಾರು ಓಡಾಟ ಮಾಡಬೇಡಿ, ರಾತ್ರಿ ವೇಳೆ ಎಚ್ಚರಿಕೆಯಿಂದ ಇರಿ ಎಂದು ಅನೌನ್ಸ್ ಮಾಡಿದ್ರು..‌ ಇಂದು ರಾತ್ರಿಯೂ ಅರಣ್ಯ ಸಿಬ್ಬಂದಿ ಗಸ್ತು ತಿರುಗಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಉಗ್ರರಿಗೆ ಸಾವಿನ ಭಯ ಹುಟ್ಟಿಸಿದ ‘ಟೆಡ್ಡಿಬೇರ್’..! ಇಸ್ರೇಲ್‌ಗೆ ಆಪತ್ತು ಬಂದಾಗೆಲ್ಲ ರಕ್ಷಕನಾಗೋ ಡಿ9ಆರ್ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more