ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

Published : Nov 06, 2023, 10:37 AM IST

ಸಿಲಿಕಾನ್ ಸಿಟಿಗೂ ಚಿರತೆಗೂ ನಂಟು ಸದ್ಯಕ್ಕೆ ಕೊನೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಇದೀಗ ಮತ್ತೊಂದು ಚಿರತೆ ರಾಜಧಾನಿಗೆ ಪಾದಾರ್ಪಣೆ ಮಾಡಿದೆ
 

ಅರಣ್ಯ ಗಡಿಭಾಗದ ಗ್ರಾಮಗಳಿಗೆ ಲಗ್ಗೆ ಇಡ್ತಿದ್ದ ಚಿರತೆಗಳು, ಐಟಿ ಸಿಟಿ ಬೆಂಗಳೂರಿನಲ್ಲೂ(Bengaluru) ಪ್ರತ್ಯಕ್ಷವಾಗ್ತಿವೆ. ಕಳೆದ ವಾರವಷ್ಟೇ ಕೂಡ್ಲುಗೇಟ್ನಲ್ಲಿ ಚಿರತೆ(Leopard) ಕಾಣಿಸಿಕೊಂಡಿತ್ತು. ಅಪಾರ್ಟ್ಮೆಂಟ್ಗಳಲ್ಲಿ ಓಡಾಡಿ ಜನರನ್ನು ಬೆಚ್ಚಿ ಬೀಳಿಸಿತ್ತು. ಕೊನೆಗೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ವೈಫಲ್ಯದಿಂದ ಚಿರತೆ ಮೃತಪಟ್ಟಿತ್ತು. ಇದೀಗ ಮತ್ತೆ ಎಲೆಕ್ಟ್ರಾನಿಕ್ ಸಿಟಿ(Electronic City) ವ್ಯಾಪ್ತಿಯಲ್ಲಿ ಪ್ರತ್ಯಕ್ಷವಾಗಿದೆ. ಕೂಡ್ಲುಗೇಟ್ನಿಂದ ಕೇವಲ ಐದಾರು ಕಿಲೋಮೀಟರ್ ದೂರದಲ್ಲಿರೋ ಎಲೆಕ್ಟ್ರಾನಿಕ್ ಸಿಟಿಯ ಕೂಗಳತೆಯ ಚಿಕ್ಕತೋಗೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ.. ಚಿರತೆ ಓಡಾಟದ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಚಿರತೆ ಹೆಜ್ಜೆ ಗುರುತನ್ನು ಪರಿಶೀಲಿಸಿದ್ರು. ಚಿರತೆಯನ್ನು ಕಣ್ಣಾರೆ ಕಂಡ ಸ್ಥಳೀಯರಿಂದ ಮಾಹಿತಿ ಪಡೆದ್ರು. ನಿನ್ನೆ ಸಂಜೆ 6 ಗಂಟೆಯಲ್ಲಿ ಜನರು ಚಿರತೆಯನ್ನು ನೋಡಿ ಭಯಭೀತರಾಗಿದ್ದಾರೆ.. ಚಿಕ್ಕತೋಗೂರು ಗ್ರಾಮದ ಮನೆಯೊಂದರ ಕಾಂಪೌಂಡ್ ಒಳಗಿದ್ದ ನಾಯಿಯ ಮೇಲೆ ಆಟ್ಯಾಕ್ ಮಾಡಲು ಚಿರತೆ ಬಂದಿದ್ದನ್ನ ಮನೆಯಲ್ಲಿದ್ದ ಬಾಲಕ ನೋಡಿ ಗಾಬರಿಗೊಂಡಿದ್ದಾನೆ. ಇನ್ನೂ ಇದೇ ಗ್ರಾಮದ ಸಾಕಷ್ಟು ಭಾಗದಲ್ಲಿ ತೋಟ, ಹೊಲಗಳಿವೆ.. ಹೀಗಾಗಿ ಜನರು ಭಯದಲ್ಲೇ ಕಾಲ ಕಳೆಯುವಂತಾಗಿದೆ. ಅರಣ್ಯ ಸಿಬ್ಬಂದಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.. ಒಬ್ಬಂಟಿಯಾಗಿ ಯಾರು ಓಡಾಟ ಮಾಡಬೇಡಿ, ರಾತ್ರಿ ವೇಳೆ ಎಚ್ಚರಿಕೆಯಿಂದ ಇರಿ ಎಂದು ಅನೌನ್ಸ್ ಮಾಡಿದ್ರು..‌ ಇಂದು ರಾತ್ರಿಯೂ ಅರಣ್ಯ ಸಿಬ್ಬಂದಿ ಗಸ್ತು ತಿರುಗಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಉಗ್ರರಿಗೆ ಸಾವಿನ ಭಯ ಹುಟ್ಟಿಸಿದ ‘ಟೆಡ್ಡಿಬೇರ್’..! ಇಸ್ರೇಲ್‌ಗೆ ಆಪತ್ತು ಬಂದಾಗೆಲ್ಲ ರಕ್ಷಕನಾಗೋ ಡಿ9ಆರ್ !

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more