ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

Published : Nov 06, 2023, 10:37 AM IST

ಸಿಲಿಕಾನ್ ಸಿಟಿಗೂ ಚಿರತೆಗೂ ನಂಟು ಸದ್ಯಕ್ಕೆ ಕೊನೆಯಾಗುವ ಲಕ್ಷಣಗಳೇ ಕಾಣ್ತಿಲ್ಲ. ಇದೀಗ ಮತ್ತೊಂದು ಚಿರತೆ ರಾಜಧಾನಿಗೆ ಪಾದಾರ್ಪಣೆ ಮಾಡಿದೆ
 

ಅರಣ್ಯ ಗಡಿಭಾಗದ ಗ್ರಾಮಗಳಿಗೆ ಲಗ್ಗೆ ಇಡ್ತಿದ್ದ ಚಿರತೆಗಳು, ಐಟಿ ಸಿಟಿ ಬೆಂಗಳೂರಿನಲ್ಲೂ(Bengaluru) ಪ್ರತ್ಯಕ್ಷವಾಗ್ತಿವೆ. ಕಳೆದ ವಾರವಷ್ಟೇ ಕೂಡ್ಲುಗೇಟ್ನಲ್ಲಿ ಚಿರತೆ(Leopard) ಕಾಣಿಸಿಕೊಂಡಿತ್ತು. ಅಪಾರ್ಟ್ಮೆಂಟ್ಗಳಲ್ಲಿ ಓಡಾಡಿ ಜನರನ್ನು ಬೆಚ್ಚಿ ಬೀಳಿಸಿತ್ತು. ಕೊನೆಗೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ವೈಫಲ್ಯದಿಂದ ಚಿರತೆ ಮೃತಪಟ್ಟಿತ್ತು. ಇದೀಗ ಮತ್ತೆ ಎಲೆಕ್ಟ್ರಾನಿಕ್ ಸಿಟಿ(Electronic City) ವ್ಯಾಪ್ತಿಯಲ್ಲಿ ಪ್ರತ್ಯಕ್ಷವಾಗಿದೆ. ಕೂಡ್ಲುಗೇಟ್ನಿಂದ ಕೇವಲ ಐದಾರು ಕಿಲೋಮೀಟರ್ ದೂರದಲ್ಲಿರೋ ಎಲೆಕ್ಟ್ರಾನಿಕ್ ಸಿಟಿಯ ಕೂಗಳತೆಯ ಚಿಕ್ಕತೋಗೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ.. ಚಿರತೆ ಓಡಾಟದ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಚಿರತೆ ಹೆಜ್ಜೆ ಗುರುತನ್ನು ಪರಿಶೀಲಿಸಿದ್ರು. ಚಿರತೆಯನ್ನು ಕಣ್ಣಾರೆ ಕಂಡ ಸ್ಥಳೀಯರಿಂದ ಮಾಹಿತಿ ಪಡೆದ್ರು. ನಿನ್ನೆ ಸಂಜೆ 6 ಗಂಟೆಯಲ್ಲಿ ಜನರು ಚಿರತೆಯನ್ನು ನೋಡಿ ಭಯಭೀತರಾಗಿದ್ದಾರೆ.. ಚಿಕ್ಕತೋಗೂರು ಗ್ರಾಮದ ಮನೆಯೊಂದರ ಕಾಂಪೌಂಡ್ ಒಳಗಿದ್ದ ನಾಯಿಯ ಮೇಲೆ ಆಟ್ಯಾಕ್ ಮಾಡಲು ಚಿರತೆ ಬಂದಿದ್ದನ್ನ ಮನೆಯಲ್ಲಿದ್ದ ಬಾಲಕ ನೋಡಿ ಗಾಬರಿಗೊಂಡಿದ್ದಾನೆ. ಇನ್ನೂ ಇದೇ ಗ್ರಾಮದ ಸಾಕಷ್ಟು ಭಾಗದಲ್ಲಿ ತೋಟ, ಹೊಲಗಳಿವೆ.. ಹೀಗಾಗಿ ಜನರು ಭಯದಲ್ಲೇ ಕಾಲ ಕಳೆಯುವಂತಾಗಿದೆ. ಅರಣ್ಯ ಸಿಬ್ಬಂದಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.. ಒಬ್ಬಂಟಿಯಾಗಿ ಯಾರು ಓಡಾಟ ಮಾಡಬೇಡಿ, ರಾತ್ರಿ ವೇಳೆ ಎಚ್ಚರಿಕೆಯಿಂದ ಇರಿ ಎಂದು ಅನೌನ್ಸ್ ಮಾಡಿದ್ರು..‌ ಇಂದು ರಾತ್ರಿಯೂ ಅರಣ್ಯ ಸಿಬ್ಬಂದಿ ಗಸ್ತು ತಿರುಗಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಉಗ್ರರಿಗೆ ಸಾವಿನ ಭಯ ಹುಟ್ಟಿಸಿದ ‘ಟೆಡ್ಡಿಬೇರ್’..! ಇಸ್ರೇಲ್‌ಗೆ ಆಪತ್ತು ಬಂದಾಗೆಲ್ಲ ರಕ್ಷಕನಾಗೋ ಡಿ9ಆರ್ !

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more