Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Published : Mar 08, 2022, 11:13 AM IST

*   ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆ
*   ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಜಾತ್ರೆ
*   ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ಳುವ ಭಕ್ತರು 

ವಿಜಯಪುರ(ಮಾ.08): ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆಯ ವಿಶೇಷ ಅಂದ್ರೆ ಜಾತ್ರೆಯಲ್ಲಿ ಭಕ್ತರು ಸಾರಾಯಿಯನ್ನೇ ನೈವೇದ್ಯವಾಗಿ ಅರ್ಪಿಸೋದು. ಹೌದು, ಪ್ರತಿ ವರ್ಷ ಬಬಲಾದಿ ಗ್ರಾಮದಲ್ಲಿ ಸಿದ್ದಿ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರ ಜಾತ್ರೆಯನ್ನ ವಿಜೃಂಭನೆಯಿಂದ ಆಚರಿಸಿಕೊಂಡು ಬರಲಾಗ್ತಿದೆ. ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಸಾರಾಯಿಯನ್ನ ಸದಾಶಿವ ಮುತ್ಯಾನಿಗೆ ಅರ್ಪಿಸೋದು ವಾಡಿಕೆ. 

ಹೀಗಾಗಿಯೇ ಜಾತ್ರೆಗೆ ಬರುವ ಸಾವಿರಾರು ಭಕ್ತರು ತೆಂಗಿನಕಾಯಿ, ಹೂವಿನ ಜೊತೆಗೆ ಕಾಸ್ಟ್ಲಿ ವಿಸ್ಕಿ, ರಮ್, ಸ್ಕಾಚ್‌ಗಳನ್ನ ತಂದಿರ್ತಾರೆ. ಸರತಿ ಸಾಲಿನಲ್ಲಿ ನಿಂತು ತಮ್ಮ ಕೈಯಲ್ಲಿನ ಸಾರಾಯಿ ಬಾಟಲಿಗಳಿಂದ ಒಂದಿಷ್ಟು ಮದ್ಯವನ್ನು ಸದಾಶಿವ ಮುತ್ಯಾ, ಹಾಗೂ ಶಕ್ತಿ ದೇವತೆ ಚಂದ್ರವ್ವ ತಾಯಿ ಗದ್ದುಗೆಯ ಎದುರಿಗಿಟ್ಟಿರುವ ಹಿತ್ತಾಳೆ ಪಾತ್ರೆಗೆ ಸುರಿಯುತ್ತಾರೆ. ಅಲ್ಲದೆ ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ತಾರೆ. ಬಡವರು ಕಡಿಮೆ ದರದ ಸಾರಾಯಿಯನ್ನ ಅರ್ಪಿಸಿದರೆ, ಶ್ರೀಮಂತ ಭಕ್ತರು ಸಾವಿರಾರು ರು. ಮೌಲ್ಯದ ವಿಸ್ಕಿ, ಸ್ಕಾಚ್, ವೈನ್, ಬೀಯರ್ ಗಳನ್ನ ಸಮರ್ಪಿಸಿ ಮುತ್ಯಾನ ಕೃಪೆಗೆ ಪಾತ್ರರಾಗ್ತಿದ್ದಾರೆ.. ಈ ಮೂಲಕ ತಮ್ಮ ಭಕ್ತಿಯನ್ನ ಸಲ್ಲಿಸುತ್ತಾರೆ.

Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

ಇನ್ನು ಇಲ್ಲಿ ಬರುವ ಭಕ್ತರು ಹೀಗೆ ಸಾರಾಯಿಯನ್ನ ಪವಾಡ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರಿಗೆ ನೈವೇಧ್ಯವಾಗಿ ಅರ್ಪಿಸೋದರ ಹಿಂದೆ ವಿಶಿಷ್ಠ ಹಿನ್ನಲೆ ಅಡಗಿದೆ. ಅದೇನಂದ್ರೆ ನೂರಾರು ವರ್ಷಗಳ ಹಿಂದೆ ಆಧ್ಯಾತ್ಮ ಸಾಧಕರಾಗಿದ್ದ ಸದಾಶಿವ ಮುತ್ಯಾ ಬಬಲಾದಿ ಗ್ರಾಮಕ್ಕೆ ಕಾಲಿಟ್ಟಾಗ ಗ್ರಾಮಸ್ಥರು ಮುತ್ಯಾನ ವಾಸಕ್ಕೆ ಅಡ್ಡಿ ಪಡೆಸಿದ್ದರು. ಈ ವೇಳೆ ಸದಾಶಿವ ಮುತ್ಯನವರು ತಮ್ಮ ಬಳಿಯ ಅಗಾದ ಶಕ್ತಿಯಿಂದ ಗ್ರಾಮದ ಪಕ್ಕದಲ್ಲಿ ಹರಿಯುತ್ತಿದ್ದ ಕೃಷ್ಣಾ ನದಿಯ ನೀರನ್ನೆಲ್ಲ ಸಾರಾಯಿಯನ್ನಾಗಿ ಪರಿವರ್ತಿಸಿ ಪವಾಡ ಸೃಷ್ಠಿಸಿದ್ದಂತೆ. ಮುತ್ಯಾನ ಪವಾಡ ಕಂಡಿದ್ದ ಗ್ರಾಮಸ್ಥರು ಅಂದಿನಿಂದ ಸದಾಶಿವ ಮುತ್ಯಾನನ್ನ ಪೂಜಿಸಲು ಆರಂಭಿಸಿದ್ದರಂತೆ. ತಮ್ಮ ಆಧ್ಯಾತ್ಮಿಕ ಶಕ್ತಿಯಿಂದಲೆ ಸದಾಶಿವ ಮುತ್ಯಾ ಇದೇ ಗ್ರಾಮದಲ್ಲಿ ಸಜೀವ ಸಮಾಧಿಯಾದರು ಎನ್ನುವ ಐತಿಹ್ಯವೂ ಇದೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more