Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Published : Mar 08, 2022, 11:13 AM IST

*   ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆ
*   ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಜಾತ್ರೆ
*   ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ಳುವ ಭಕ್ತರು 

ವಿಜಯಪುರ(ಮಾ.08): ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆಯ ವಿಶೇಷ ಅಂದ್ರೆ ಜಾತ್ರೆಯಲ್ಲಿ ಭಕ್ತರು ಸಾರಾಯಿಯನ್ನೇ ನೈವೇದ್ಯವಾಗಿ ಅರ್ಪಿಸೋದು. ಹೌದು, ಪ್ರತಿ ವರ್ಷ ಬಬಲಾದಿ ಗ್ರಾಮದಲ್ಲಿ ಸಿದ್ದಿ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರ ಜಾತ್ರೆಯನ್ನ ವಿಜೃಂಭನೆಯಿಂದ ಆಚರಿಸಿಕೊಂಡು ಬರಲಾಗ್ತಿದೆ. ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಸಾರಾಯಿಯನ್ನ ಸದಾಶಿವ ಮುತ್ಯಾನಿಗೆ ಅರ್ಪಿಸೋದು ವಾಡಿಕೆ. 

ಹೀಗಾಗಿಯೇ ಜಾತ್ರೆಗೆ ಬರುವ ಸಾವಿರಾರು ಭಕ್ತರು ತೆಂಗಿನಕಾಯಿ, ಹೂವಿನ ಜೊತೆಗೆ ಕಾಸ್ಟ್ಲಿ ವಿಸ್ಕಿ, ರಮ್, ಸ್ಕಾಚ್‌ಗಳನ್ನ ತಂದಿರ್ತಾರೆ. ಸರತಿ ಸಾಲಿನಲ್ಲಿ ನಿಂತು ತಮ್ಮ ಕೈಯಲ್ಲಿನ ಸಾರಾಯಿ ಬಾಟಲಿಗಳಿಂದ ಒಂದಿಷ್ಟು ಮದ್ಯವನ್ನು ಸದಾಶಿವ ಮುತ್ಯಾ, ಹಾಗೂ ಶಕ್ತಿ ದೇವತೆ ಚಂದ್ರವ್ವ ತಾಯಿ ಗದ್ದುಗೆಯ ಎದುರಿಗಿಟ್ಟಿರುವ ಹಿತ್ತಾಳೆ ಪಾತ್ರೆಗೆ ಸುರಿಯುತ್ತಾರೆ. ಅಲ್ಲದೆ ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ತಾರೆ. ಬಡವರು ಕಡಿಮೆ ದರದ ಸಾರಾಯಿಯನ್ನ ಅರ್ಪಿಸಿದರೆ, ಶ್ರೀಮಂತ ಭಕ್ತರು ಸಾವಿರಾರು ರು. ಮೌಲ್ಯದ ವಿಸ್ಕಿ, ಸ್ಕಾಚ್, ವೈನ್, ಬೀಯರ್ ಗಳನ್ನ ಸಮರ್ಪಿಸಿ ಮುತ್ಯಾನ ಕೃಪೆಗೆ ಪಾತ್ರರಾಗ್ತಿದ್ದಾರೆ.. ಈ ಮೂಲಕ ತಮ್ಮ ಭಕ್ತಿಯನ್ನ ಸಲ್ಲಿಸುತ್ತಾರೆ.

Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

ಇನ್ನು ಇಲ್ಲಿ ಬರುವ ಭಕ್ತರು ಹೀಗೆ ಸಾರಾಯಿಯನ್ನ ಪವಾಡ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರಿಗೆ ನೈವೇಧ್ಯವಾಗಿ ಅರ್ಪಿಸೋದರ ಹಿಂದೆ ವಿಶಿಷ್ಠ ಹಿನ್ನಲೆ ಅಡಗಿದೆ. ಅದೇನಂದ್ರೆ ನೂರಾರು ವರ್ಷಗಳ ಹಿಂದೆ ಆಧ್ಯಾತ್ಮ ಸಾಧಕರಾಗಿದ್ದ ಸದಾಶಿವ ಮುತ್ಯಾ ಬಬಲಾದಿ ಗ್ರಾಮಕ್ಕೆ ಕಾಲಿಟ್ಟಾಗ ಗ್ರಾಮಸ್ಥರು ಮುತ್ಯಾನ ವಾಸಕ್ಕೆ ಅಡ್ಡಿ ಪಡೆಸಿದ್ದರು. ಈ ವೇಳೆ ಸದಾಶಿವ ಮುತ್ಯನವರು ತಮ್ಮ ಬಳಿಯ ಅಗಾದ ಶಕ್ತಿಯಿಂದ ಗ್ರಾಮದ ಪಕ್ಕದಲ್ಲಿ ಹರಿಯುತ್ತಿದ್ದ ಕೃಷ್ಣಾ ನದಿಯ ನೀರನ್ನೆಲ್ಲ ಸಾರಾಯಿಯನ್ನಾಗಿ ಪರಿವರ್ತಿಸಿ ಪವಾಡ ಸೃಷ್ಠಿಸಿದ್ದಂತೆ. ಮುತ್ಯಾನ ಪವಾಡ ಕಂಡಿದ್ದ ಗ್ರಾಮಸ್ಥರು ಅಂದಿನಿಂದ ಸದಾಶಿವ ಮುತ್ಯಾನನ್ನ ಪೂಜಿಸಲು ಆರಂಭಿಸಿದ್ದರಂತೆ. ತಮ್ಮ ಆಧ್ಯಾತ್ಮಿಕ ಶಕ್ತಿಯಿಂದಲೆ ಸದಾಶಿವ ಮುತ್ಯಾ ಇದೇ ಗ್ರಾಮದಲ್ಲಿ ಸಜೀವ ಸಮಾಧಿಯಾದರು ಎನ್ನುವ ಐತಿಹ್ಯವೂ ಇದೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more