Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Published : Mar 08, 2022, 11:13 AM IST

*   ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆ
*   ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಜಾತ್ರೆ
*   ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ಳುವ ಭಕ್ತರು 

ವಿಜಯಪುರ(ಮಾ.08): ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆಯ ವಿಶೇಷ ಅಂದ್ರೆ ಜಾತ್ರೆಯಲ್ಲಿ ಭಕ್ತರು ಸಾರಾಯಿಯನ್ನೇ ನೈವೇದ್ಯವಾಗಿ ಅರ್ಪಿಸೋದು. ಹೌದು, ಪ್ರತಿ ವರ್ಷ ಬಬಲಾದಿ ಗ್ರಾಮದಲ್ಲಿ ಸಿದ್ದಿ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರ ಜಾತ್ರೆಯನ್ನ ವಿಜೃಂಭನೆಯಿಂದ ಆಚರಿಸಿಕೊಂಡು ಬರಲಾಗ್ತಿದೆ. ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಸಾರಾಯಿಯನ್ನ ಸದಾಶಿವ ಮುತ್ಯಾನಿಗೆ ಅರ್ಪಿಸೋದು ವಾಡಿಕೆ. 

ಹೀಗಾಗಿಯೇ ಜಾತ್ರೆಗೆ ಬರುವ ಸಾವಿರಾರು ಭಕ್ತರು ತೆಂಗಿನಕಾಯಿ, ಹೂವಿನ ಜೊತೆಗೆ ಕಾಸ್ಟ್ಲಿ ವಿಸ್ಕಿ, ರಮ್, ಸ್ಕಾಚ್‌ಗಳನ್ನ ತಂದಿರ್ತಾರೆ. ಸರತಿ ಸಾಲಿನಲ್ಲಿ ನಿಂತು ತಮ್ಮ ಕೈಯಲ್ಲಿನ ಸಾರಾಯಿ ಬಾಟಲಿಗಳಿಂದ ಒಂದಿಷ್ಟು ಮದ್ಯವನ್ನು ಸದಾಶಿವ ಮುತ್ಯಾ, ಹಾಗೂ ಶಕ್ತಿ ದೇವತೆ ಚಂದ್ರವ್ವ ತಾಯಿ ಗದ್ದುಗೆಯ ಎದುರಿಗಿಟ್ಟಿರುವ ಹಿತ್ತಾಳೆ ಪಾತ್ರೆಗೆ ಸುರಿಯುತ್ತಾರೆ. ಅಲ್ಲದೆ ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ತಾರೆ. ಬಡವರು ಕಡಿಮೆ ದರದ ಸಾರಾಯಿಯನ್ನ ಅರ್ಪಿಸಿದರೆ, ಶ್ರೀಮಂತ ಭಕ್ತರು ಸಾವಿರಾರು ರು. ಮೌಲ್ಯದ ವಿಸ್ಕಿ, ಸ್ಕಾಚ್, ವೈನ್, ಬೀಯರ್ ಗಳನ್ನ ಸಮರ್ಪಿಸಿ ಮುತ್ಯಾನ ಕೃಪೆಗೆ ಪಾತ್ರರಾಗ್ತಿದ್ದಾರೆ.. ಈ ಮೂಲಕ ತಮ್ಮ ಭಕ್ತಿಯನ್ನ ಸಲ್ಲಿಸುತ್ತಾರೆ.

Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

ಇನ್ನು ಇಲ್ಲಿ ಬರುವ ಭಕ್ತರು ಹೀಗೆ ಸಾರಾಯಿಯನ್ನ ಪವಾಡ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರಿಗೆ ನೈವೇಧ್ಯವಾಗಿ ಅರ್ಪಿಸೋದರ ಹಿಂದೆ ವಿಶಿಷ್ಠ ಹಿನ್ನಲೆ ಅಡಗಿದೆ. ಅದೇನಂದ್ರೆ ನೂರಾರು ವರ್ಷಗಳ ಹಿಂದೆ ಆಧ್ಯಾತ್ಮ ಸಾಧಕರಾಗಿದ್ದ ಸದಾಶಿವ ಮುತ್ಯಾ ಬಬಲಾದಿ ಗ್ರಾಮಕ್ಕೆ ಕಾಲಿಟ್ಟಾಗ ಗ್ರಾಮಸ್ಥರು ಮುತ್ಯಾನ ವಾಸಕ್ಕೆ ಅಡ್ಡಿ ಪಡೆಸಿದ್ದರು. ಈ ವೇಳೆ ಸದಾಶಿವ ಮುತ್ಯನವರು ತಮ್ಮ ಬಳಿಯ ಅಗಾದ ಶಕ್ತಿಯಿಂದ ಗ್ರಾಮದ ಪಕ್ಕದಲ್ಲಿ ಹರಿಯುತ್ತಿದ್ದ ಕೃಷ್ಣಾ ನದಿಯ ನೀರನ್ನೆಲ್ಲ ಸಾರಾಯಿಯನ್ನಾಗಿ ಪರಿವರ್ತಿಸಿ ಪವಾಡ ಸೃಷ್ಠಿಸಿದ್ದಂತೆ. ಮುತ್ಯಾನ ಪವಾಡ ಕಂಡಿದ್ದ ಗ್ರಾಮಸ್ಥರು ಅಂದಿನಿಂದ ಸದಾಶಿವ ಮುತ್ಯಾನನ್ನ ಪೂಜಿಸಲು ಆರಂಭಿಸಿದ್ದರಂತೆ. ತಮ್ಮ ಆಧ್ಯಾತ್ಮಿಕ ಶಕ್ತಿಯಿಂದಲೆ ಸದಾಶಿವ ಮುತ್ಯಾ ಇದೇ ಗ್ರಾಮದಲ್ಲಿ ಸಜೀವ ಸಮಾಧಿಯಾದರು ಎನ್ನುವ ಐತಿಹ್ಯವೂ ಇದೆ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more