Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

Published : Mar 08, 2022, 11:13 AM IST

*   ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆ
*   ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಜಾತ್ರೆ
*   ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ಳುವ ಭಕ್ತರು 

ವಿಜಯಪುರ(ಮಾ.08): ವಿಜಯಪುರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾನ ಜಾತ್ರೆಯ ವಿಶೇಷ ಅಂದ್ರೆ ಜಾತ್ರೆಯಲ್ಲಿ ಭಕ್ತರು ಸಾರಾಯಿಯನ್ನೇ ನೈವೇದ್ಯವಾಗಿ ಅರ್ಪಿಸೋದು. ಹೌದು, ಪ್ರತಿ ವರ್ಷ ಬಬಲಾದಿ ಗ್ರಾಮದಲ್ಲಿ ಸಿದ್ದಿ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರ ಜಾತ್ರೆಯನ್ನ ವಿಜೃಂಭನೆಯಿಂದ ಆಚರಿಸಿಕೊಂಡು ಬರಲಾಗ್ತಿದೆ. ಶಿವರಾತ್ರಿಯ ನಂತರ 5 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಸಾರಾಯಿಯನ್ನ ಸದಾಶಿವ ಮುತ್ಯಾನಿಗೆ ಅರ್ಪಿಸೋದು ವಾಡಿಕೆ. 

ಹೀಗಾಗಿಯೇ ಜಾತ್ರೆಗೆ ಬರುವ ಸಾವಿರಾರು ಭಕ್ತರು ತೆಂಗಿನಕಾಯಿ, ಹೂವಿನ ಜೊತೆಗೆ ಕಾಸ್ಟ್ಲಿ ವಿಸ್ಕಿ, ರಮ್, ಸ್ಕಾಚ್‌ಗಳನ್ನ ತಂದಿರ್ತಾರೆ. ಸರತಿ ಸಾಲಿನಲ್ಲಿ ನಿಂತು ತಮ್ಮ ಕೈಯಲ್ಲಿನ ಸಾರಾಯಿ ಬಾಟಲಿಗಳಿಂದ ಒಂದಿಷ್ಟು ಮದ್ಯವನ್ನು ಸದಾಶಿವ ಮುತ್ಯಾ, ಹಾಗೂ ಶಕ್ತಿ ದೇವತೆ ಚಂದ್ರವ್ವ ತಾಯಿ ಗದ್ದುಗೆಯ ಎದುರಿಗಿಟ್ಟಿರುವ ಹಿತ್ತಾಳೆ ಪಾತ್ರೆಗೆ ಸುರಿಯುತ್ತಾರೆ. ಅಲ್ಲದೆ ಸಾರಾಯಿಯನ್ನೇ ಪ್ರಸಾದದ ರೂಪದಲ್ಲಿ ಹೊಟ್ಟೆಗಿಳಿಸಿಕೊಳ್ತಾರೆ. ಬಡವರು ಕಡಿಮೆ ದರದ ಸಾರಾಯಿಯನ್ನ ಅರ್ಪಿಸಿದರೆ, ಶ್ರೀಮಂತ ಭಕ್ತರು ಸಾವಿರಾರು ರು. ಮೌಲ್ಯದ ವಿಸ್ಕಿ, ಸ್ಕಾಚ್, ವೈನ್, ಬೀಯರ್ ಗಳನ್ನ ಸಮರ್ಪಿಸಿ ಮುತ್ಯಾನ ಕೃಪೆಗೆ ಪಾತ್ರರಾಗ್ತಿದ್ದಾರೆ.. ಈ ಮೂಲಕ ತಮ್ಮ ಭಕ್ತಿಯನ್ನ ಸಲ್ಲಿಸುತ್ತಾರೆ.

Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

ಇನ್ನು ಇಲ್ಲಿ ಬರುವ ಭಕ್ತರು ಹೀಗೆ ಸಾರಾಯಿಯನ್ನ ಪವಾಡ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರಿಗೆ ನೈವೇಧ್ಯವಾಗಿ ಅರ್ಪಿಸೋದರ ಹಿಂದೆ ವಿಶಿಷ್ಠ ಹಿನ್ನಲೆ ಅಡಗಿದೆ. ಅದೇನಂದ್ರೆ ನೂರಾರು ವರ್ಷಗಳ ಹಿಂದೆ ಆಧ್ಯಾತ್ಮ ಸಾಧಕರಾಗಿದ್ದ ಸದಾಶಿವ ಮುತ್ಯಾ ಬಬಲಾದಿ ಗ್ರಾಮಕ್ಕೆ ಕಾಲಿಟ್ಟಾಗ ಗ್ರಾಮಸ್ಥರು ಮುತ್ಯಾನ ವಾಸಕ್ಕೆ ಅಡ್ಡಿ ಪಡೆಸಿದ್ದರು. ಈ ವೇಳೆ ಸದಾಶಿವ ಮುತ್ಯನವರು ತಮ್ಮ ಬಳಿಯ ಅಗಾದ ಶಕ್ತಿಯಿಂದ ಗ್ರಾಮದ ಪಕ್ಕದಲ್ಲಿ ಹರಿಯುತ್ತಿದ್ದ ಕೃಷ್ಣಾ ನದಿಯ ನೀರನ್ನೆಲ್ಲ ಸಾರಾಯಿಯನ್ನಾಗಿ ಪರಿವರ್ತಿಸಿ ಪವಾಡ ಸೃಷ್ಠಿಸಿದ್ದಂತೆ. ಮುತ್ಯಾನ ಪವಾಡ ಕಂಡಿದ್ದ ಗ್ರಾಮಸ್ಥರು ಅಂದಿನಿಂದ ಸದಾಶಿವ ಮುತ್ಯಾನನ್ನ ಪೂಜಿಸಲು ಆರಂಭಿಸಿದ್ದರಂತೆ. ತಮ್ಮ ಆಧ್ಯಾತ್ಮಿಕ ಶಕ್ತಿಯಿಂದಲೆ ಸದಾಶಿವ ಮುತ್ಯಾ ಇದೇ ಗ್ರಾಮದಲ್ಲಿ ಸಜೀವ ಸಮಾಧಿಯಾದರು ಎನ್ನುವ ಐತಿಹ್ಯವೂ ಇದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more