ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!

ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!

Published : Mar 14, 2025, 12:19 PM ISTUpdated : Mar 14, 2025, 12:56 PM IST

ಮಂಡ್ಯದಲ್ಲಿ ಪ್ರೀತಿ, ಮೋಸದಿಂದ ಮನನೊಂದು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಕರನಿಂದ ಮೋಸ ಹೋದ ಮಗಳು ಆತ್ಮಹತ್ಯೆ ಮಾಡಿಕೊಂಡರೆ, ಆಕೆಯ ಸಾವಿಗೆ ನ್ಯಾಯ ಸಿಗದ ಕಾರಣ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಕ್ಕರೆನಾಡು ಮಂಡ್ಯದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಲವ್,ಸೆಕ್ಸ್,ದೋಖಾಗೆ ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. 20 ದಿನಗಳ ಹಿಂದೆ ಸೂಸೈಡ್ ಮಾಡಿಕೊಂಡಿದ್ದ ವಿಜಯಲಕ್ಷ್ಮಿ(21) ಪುತ್ರಿ ಸಾವಿನ ಬೆನ್ನಲ್ಲೇ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 
ಪಕ್ಕದ ಮಾರಸಿಂಗನಹಳ್ಳಿಯ ಹರಿಕೃಷ್ಣ ಎಂಬಾತನಿಂದ ಮೋಸದ ಆರೋಪ ಕೇಳಿಬಂದಿದ್ದು, ವಿಜಯಲಕ್ಷ್ಮೀ-ಹರಿಕೃಷ್ಣ ನಡುವೆ ಪರಸ್ಪರ ಪ್ರೀತಿಯಾಗಿದೆ. ಪ್ರೀತಿಸುವ ನೆಪದಲ್ಲಿ ಕಳೆದ ಒಂದೂವರೆ ವರ್ಷದಿಂದ ಇಬ್ಬರ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಇತ್ತೀಚೆಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಸಂಪರ್ಕದಲ್ಲಿದ್ದ. ಈ ಬಗ್ಗೆ ಪ್ರಶ್ನಿಸಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಳು. ಆದರೆ ಮದುವೆಗೆ ನಿರಾಕರಿಸಿ ಹರಿಕೃಷ್ಣ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಸಿದ್ದ. ಇದರಿಂದ  ಮನನೊಂದು ವಿಜಯಲಕ್ಷ್ಮಿ ಸೂಸೈಡ್  ಮಾಡಿಕೊಂಡಿದ್ದಳು.

ಇದು ಮಂಡ್ಯ ಪೊಲೀಸರೇ ಮಾಡಿದ ಕೊಲೆ; ಮಗಳ 'ಸೂಸೈಡ್‌' ಕೇಸ್‌ಗೆ ಸಿಗದ ನ್ಯಾಯ, ತಾಯಿಯ ಆತ್ಮಹತ್ಯೆ!

ವಿಜಯಲಕ್ಷ್ಮಿ ಸಾವಿಗೆ ನ್ಯಾಯಕ್ಕಾಗಿ ಮಂಡ್ಯ ಗ್ರಾಮಾಂತರ ಠಾಣೆಗೆ ತಂದೆ ನಂಜುಂಡೇಗೌಡ ದೂರು ನೀಡಿದ್ದರು. ದೂರು ಕೊಟ್ಟು ನ್ಯಾಯ ಕೋರಲು ಹೋದವರ ಮೇಲೆಯೇ ಪೊಲೀಸರು  FIR ದಾಖಲಿಸಿದ್ದರು. ಇತ್ತ ಮಗಳ ಸಾವಿಗೆ ನ್ಯಾಯವೂ ಇಲ್ಲ, ನಮ್ಮ ಪರ ಬಂದವರಿಗೆ ನೆಮ್ಮದಿಯೂ ಇಲ್ಲ ಎಂದು ನೊಂದಿದ್ದ ತಾಯಿ  ಲಕ್ಷ್ಮಿ ನಿನ್ನೆ ಸಂಜೆ ಮನೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ನಟಿ ರನ್ಯಾ ಚಿನ್ನ ಪ್ರಕರಣ: ಬಂಧಿತ ಆಪ್ತ ಸ್ನೇಹಿತ ತರುಣ್‌ ತೆಲುಗು ನಟ, ಅಲ್ಲಿ ಹೆಸರು ಬೇರೆ!
  
ಇದೀಗ ಗ್ರಾಮಸ್ಥರ ಆಕ್ರೋಶದ ಬೆನ್ನಲ್ಲೇ ಕೊನೆಗೂ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದೀಗ ಹರಿಕೃಷ್ಣ ಸೇರಿ 19 ಮಂದಿ ವಿರುದ್ಧ  189, 191, 64, 108, 54, 118, ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್‌  ದಾಖಲು ಮಾಡಿದ್ದರು.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more