ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!

ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!

Published : Mar 14, 2025, 12:19 PM ISTUpdated : Mar 14, 2025, 12:56 PM IST

ಮಂಡ್ಯದಲ್ಲಿ ಪ್ರೀತಿ, ಮೋಸದಿಂದ ಮನನೊಂದು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಕರನಿಂದ ಮೋಸ ಹೋದ ಮಗಳು ಆತ್ಮಹತ್ಯೆ ಮಾಡಿಕೊಂಡರೆ, ಆಕೆಯ ಸಾವಿಗೆ ನ್ಯಾಯ ಸಿಗದ ಕಾರಣ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಕ್ಕರೆನಾಡು ಮಂಡ್ಯದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಲವ್,ಸೆಕ್ಸ್,ದೋಖಾಗೆ ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. 20 ದಿನಗಳ ಹಿಂದೆ ಸೂಸೈಡ್ ಮಾಡಿಕೊಂಡಿದ್ದ ವಿಜಯಲಕ್ಷ್ಮಿ(21) ಪುತ್ರಿ ಸಾವಿನ ಬೆನ್ನಲ್ಲೇ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 
ಪಕ್ಕದ ಮಾರಸಿಂಗನಹಳ್ಳಿಯ ಹರಿಕೃಷ್ಣ ಎಂಬಾತನಿಂದ ಮೋಸದ ಆರೋಪ ಕೇಳಿಬಂದಿದ್ದು, ವಿಜಯಲಕ್ಷ್ಮೀ-ಹರಿಕೃಷ್ಣ ನಡುವೆ ಪರಸ್ಪರ ಪ್ರೀತಿಯಾಗಿದೆ. ಪ್ರೀತಿಸುವ ನೆಪದಲ್ಲಿ ಕಳೆದ ಒಂದೂವರೆ ವರ್ಷದಿಂದ ಇಬ್ಬರ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಇತ್ತೀಚೆಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಸಂಪರ್ಕದಲ್ಲಿದ್ದ. ಈ ಬಗ್ಗೆ ಪ್ರಶ್ನಿಸಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಳು. ಆದರೆ ಮದುವೆಗೆ ನಿರಾಕರಿಸಿ ಹರಿಕೃಷ್ಣ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಸಿದ್ದ. ಇದರಿಂದ  ಮನನೊಂದು ವಿಜಯಲಕ್ಷ್ಮಿ ಸೂಸೈಡ್  ಮಾಡಿಕೊಂಡಿದ್ದಳು.

ಇದು ಮಂಡ್ಯ ಪೊಲೀಸರೇ ಮಾಡಿದ ಕೊಲೆ; ಮಗಳ 'ಸೂಸೈಡ್‌' ಕೇಸ್‌ಗೆ ಸಿಗದ ನ್ಯಾಯ, ತಾಯಿಯ ಆತ್ಮಹತ್ಯೆ!

ವಿಜಯಲಕ್ಷ್ಮಿ ಸಾವಿಗೆ ನ್ಯಾಯಕ್ಕಾಗಿ ಮಂಡ್ಯ ಗ್ರಾಮಾಂತರ ಠಾಣೆಗೆ ತಂದೆ ನಂಜುಂಡೇಗೌಡ ದೂರು ನೀಡಿದ್ದರು. ದೂರು ಕೊಟ್ಟು ನ್ಯಾಯ ಕೋರಲು ಹೋದವರ ಮೇಲೆಯೇ ಪೊಲೀಸರು  FIR ದಾಖಲಿಸಿದ್ದರು. ಇತ್ತ ಮಗಳ ಸಾವಿಗೆ ನ್ಯಾಯವೂ ಇಲ್ಲ, ನಮ್ಮ ಪರ ಬಂದವರಿಗೆ ನೆಮ್ಮದಿಯೂ ಇಲ್ಲ ಎಂದು ನೊಂದಿದ್ದ ತಾಯಿ  ಲಕ್ಷ್ಮಿ ನಿನ್ನೆ ಸಂಜೆ ಮನೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ನಟಿ ರನ್ಯಾ ಚಿನ್ನ ಪ್ರಕರಣ: ಬಂಧಿತ ಆಪ್ತ ಸ್ನೇಹಿತ ತರುಣ್‌ ತೆಲುಗು ನಟ, ಅಲ್ಲಿ ಹೆಸರು ಬೇರೆ!
  
ಇದೀಗ ಗ್ರಾಮಸ್ಥರ ಆಕ್ರೋಶದ ಬೆನ್ನಲ್ಲೇ ಕೊನೆಗೂ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದೀಗ ಹರಿಕೃಷ್ಣ ಸೇರಿ 19 ಮಂದಿ ವಿರುದ್ಧ  189, 191, 64, 108, 54, 118, ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್‌  ದಾಖಲು ಮಾಡಿದ್ದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more