ನನ್ನ ರಾಜೀನಾಮೆ ಕೇಳಲು ನೀವು ಯಾರು ? ನಿಮಗೆ ಏನ್ ಯೋಗ್ಯತೆ ಇದೆ ?: ಮಧು ಬಂಗಾರಪ್ಪ

ನನ್ನ ರಾಜೀನಾಮೆ ಕೇಳಲು ನೀವು ಯಾರು ? ನಿಮಗೆ ಏನ್ ಯೋಗ್ಯತೆ ಇದೆ ?: ಮಧು ಬಂಗಾರಪ್ಪ

Published : Jan 02, 2024, 02:18 PM IST

ಕಟೀಲ್ ಸಾವಿನಲ್ಲೂ ರಾಜಕಾರಣ ಮಾಡಿದ್ರು. ಇನ್ನೊಬ್ಬ ವೇಸ್ಟ್ ಫೇಲೋ ರವಿಕುಮಾರ್ ಅಂತಿದ್ದಾನೆ.  ಅವನು ಜೀವನದಲ್ಲಿ ಗ್ರಾಮ ಪಂಚಾಯ್ತಿಯನ್ನೂ ಗೆದ್ದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಸಚಿವ ಮಧು ಬಂಗಾರಪ್ಪ(Madhu Bangarappa) ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ(BJP) ಭ್ರಷ್ಟಾಚಾರಿಗಳು ನನ್ನ ವಿರುದ್ಧ ಟ್ವೀಟ್ ಮಾಡಿದ್ದಾರೆ ಎನ್ನುವ ಮೂಲಕ ಕಿಡಿ ಕಾರಿದ್ದಾರೆ. ಆರ್.ಅಶೋಕ್, ವಿಜಯೇಂದ್ರ, ಕಟೀಲ್ ಟ್ವೀಟ್ ಮಾಡಿದ್ದಾರೆ. ಅಶೋಕ್ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಅವ್ಯವಹಾರ ಹೊರ ತೆಗೆಯುತ್ತೀನಿ, ಸುಮ್ಮನೆ ಬಿಡಲ್ಲ. ಮಾನ ಮರ್ಯಾದೆ ಇದ್ರೆ ರಾಜೀನಾಮೆ(Resignation) ಕೊಡಿ. ಕಟೀಲ್ (Nalin kumar Kateel) ಸಾವಿನಲ್ಲೂ ರಾಜಕಾರಣ ಮಾಡಿದ್ರು. ಇನ್ನೊಬ್ಬ ವೇಸ್ಟ್ ಫೇಲೋ ರವಿಕುಮಾರ್ ಅಂತಿದ್ದಾನೆ.  ಅವನು ಜೀವನದಲ್ಲಿ ಗ್ರಾಮ ಪಂಚಾಯ್ತಿಯನ್ನೂ ಗೆದ್ದಿಲ್ಲ. ಅವನು ನನ್ನ ರಾಜೀನಾಮೆ ಕೇಳ್ತಾನೆ  ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. ನನ್ನ ರಾಜೀನಾಮೆ ಕೇಳಲು ನೀವು ಯಾರು ? ನನ್ನ ರಾಜೀನಾಮೆ ಕೇಳಲು‌ ನಿಮಗೆ ಏನ್ ಯೋಗ್ಯತೆ ಇದೆ ? ಆರ್. ಅಶೋಕ್, ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರೇ, ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ನನ್ನ ತಟ್ಟೆ ಕ್ಲೀನ್ ಇದೆ ಎನ್ನುವ ಮೂಲಕ ಮಧು ಬಂಗಾರಪ್ಪ ತಿರುಗೇಟು ನೀಡಿದರು. ಚೆಕ್ ಬೌನ್ಸ್ ಕೇಸ್ ಬಳಿಕ ವ್ಯಾಲ್ಯು‌ ಹೆಚ್ಚಾಯ್ತು. ಸ್ನೇಹಿತರು ಹಣ ಕೊಡಲು ಬಂದಿದ್ರು, ಕಲೆಕ್ಟ್ ಮಾಡಿದ್ರೆ 100 ಕೋಟಿ ಆಗ್ತಿತ್ತು ಎನ್ನುವ ಮೂಲಕ ಬಿಜೆಪಿ ನಾಯಕರ ವಿರುದ್ಧ  ಮಧು ಬಂಗಾರಪ್ಪ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  2024ರಲ್ಲಿ ಗೆಲ್ಲೋರ್ ಯಾರು..? ಬೀಳೋರ್ ಯಾರು..? ಖಡಕ್ ಚಾಲೆಂಜ್ ಬೆನ್ನತ್ತಿ ಹೊರಟಿದ್ದಾರೆ ತ್ರಿಮೂರ್ತಿಗಳು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more