ಮತ್ತೆ ಹೋರಾಟಕ್ಕಿಳಿದ ಮಹದಾಯಿ ಹೋರಾಟಗಾರರು:ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ

Jan 27, 2020, 1:18 PM IST

ಧಾರವಾಡ(ಜ.27): ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು ಮತ್ತೆ ಹೋರಾಟಕ್ಕಿಳಿದಿದ್ದಾರೆ. ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಮಾಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಹೋರಾಟಗಾರರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ರೈತ ಸೇನಾ ರಾಜ್ಯ ಅಧ್ಯಕ್ಷ ವಿರೇಶ ಸೊಬರದಮಠ ಅವರ ನೇತೃತ್ವದಲ್ಲಿ ಧರಣಿ ಆರಂಭವಾಗಿದೆ. ರಾಜ್ಯ ಸರ್ಕಾರ ಈ ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನ ಆರಂಭಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ. ಜೊತೆಗೆ ಮಹದಾಯಿ ಯೋಜನೆಯನ್ನ ಅನುಷ್ಟಾನಗೊಳಿಸಬೇಕು ಹೋರಾಟಗಾರರು ಆಗ್ರಹಿಸಿದ್ದಾರೆ.