ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

Published : Sep 12, 2023, 10:42 AM IST

ಅದು ಬರೋಬ್ಬರಿ 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ.. ಕ್ರೀಡಾಂಗಣ ಉದ್ಘಾಟನೆ ನಡೆದು ಐದಾರು ತಿಂಗಳು ಕಳೆದರು ಕ್ರೀಡಾಪಟುಗಳ ಬಳಕೆಗೆ ಸಿಗದೇ ಮೂಲೆ ಗುಂಪಾಗಿದೆ.
 

ಬರೋಬ್ಬರಿ 66 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಮಹಾತ್ಮ ಗಾಂಧಿ ಕ್ರೀಡಾಂಗಣ(Mahatma Gandhi Stadium) ರೆಡಿಯಿದೆ. 6 ತಿಂಗಳ ಹಿಂದೆಯೇ ಉದ್ಘಾಟನೆ ಕೂಡ ಆಗಿದೆ. ಅದ್ರೂ ಅಧಿಕಾರಿಗಳ ಹಗ್ಗಜಗ್ಗಾಟದಿಂದ ಕ್ರೀಡಾಪಟುಗಳಿಗೆ(sportsmen) ಮಾತ್ರ ಇದುವರೆಗೂ ಬಳಕೆಗೆ ಸಿಕ್ಕಿಲ್ಲ. 2018 ರಲ್ಲಿ ತುಮಕೂರು(Tumkur) ಜಿಲ್ಲೆಯ ಕ್ರೀಡಾಪಟುಗಳ ಅನುಕೂಲಕ್ಕೆಂದು ಸ್ಮಾರ್ಟ್ ಸಿಟಿ(Smart city) ಅನುದಾನದಡಿ 66 ಕೋಟಿ ವೆಚ್ಚದಲ್ಲಿ ಈ ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಈ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಿದ್ದಾರೆ. ಇದಾದ ಬಳಿಕ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳನ್ನು ಪೂರ್ನ ಗೊಳಿಸಿ ಕಳೆದ ಮಾರ್ಚ್ನಲ್ಲೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಯುವ ಸಬಲಿಕರಣ ಇಲಾಖೆಗೆ ಗ್ರೌಂಡ್ ಸುಪರ್ದಿಗೆ ಪಡೆಯುವಂತೆ ಸೂಚಿಸಿದ್ದಾರೆ. ಯುವ ಸಬಲಿಕರಣ ಇಲಾಖೆ ಆಯುಕ್ತರು ಸಹ ತುಮಕೂರು ಜಿಲ್ಲಾ ಸಬಲಿಕರಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇಷ್ಟಾದ್ರೂ ಕ್ರೀಡಾಪಟುಗಳಿಗೆ ಗ್ರೌಂಡ್ ಗೇಟ್ ತೆರೆದಿಲ್ಲ. ತುಮಕೂರು ಜಿಲ್ಲಾಡಳಿತ ಹಾಗೂ ಯುವ ಸಬಲಿಕರಣ ಇಲಾಖೆ ಗ್ರೌಂಡನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮೀನಾ ಮೇಷಾ ಮಾಡ್ತಿದ್ದಾರೆ. ಕ್ರೀಡಾಪಟುಗಳು ಪ್ರಶ್ನೆ ಮಾಡಿದ್ರೆ ಟೆಕ್ನಿಕಲ್ ಪ್ರಾಬ್ಲಂ ಇದೆ ಅಂತ ಸಬೂಬಹ ಹೇಳ್ತಿದ್ದಾರೆ. ಜಿಲ್ಲೆಯಲ್ಲಿ ಹೈಟೆಕ್ ಮಾದರಿಯ ಕ್ರೀಡಾಂಗಣ ಇದ್ರೂ ನಮಗೆ ಸಿಗ್ತಿಲ್ಲ.. ಪ್ರಾಕ್ಟಿಸ್ ಇಲ್ಲದೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗಿಯಾಗಲು ಕ್ರೀಡಾಪಟುಗಳಿಗೆ ಸಾಧ್ಯವಾಗ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮಕ್ಕಳು ಶಾಲೆಗೆ ಹೋಗಿದ್ದಾರಾ.. ಪೋಷಕರೇ ಎಚ್ಚರ ! ಅಪಹರಣಕಾರರ ಪತ್ತೆ ಹಚ್ಚದ ಖಾಕಿ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!