ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

Published : Sep 12, 2023, 10:42 AM IST

ಅದು ಬರೋಬ್ಬರಿ 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ.. ಕ್ರೀಡಾಂಗಣ ಉದ್ಘಾಟನೆ ನಡೆದು ಐದಾರು ತಿಂಗಳು ಕಳೆದರು ಕ್ರೀಡಾಪಟುಗಳ ಬಳಕೆಗೆ ಸಿಗದೇ ಮೂಲೆ ಗುಂಪಾಗಿದೆ.
 

ಬರೋಬ್ಬರಿ 66 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಮಹಾತ್ಮ ಗಾಂಧಿ ಕ್ರೀಡಾಂಗಣ(Mahatma Gandhi Stadium) ರೆಡಿಯಿದೆ. 6 ತಿಂಗಳ ಹಿಂದೆಯೇ ಉದ್ಘಾಟನೆ ಕೂಡ ಆಗಿದೆ. ಅದ್ರೂ ಅಧಿಕಾರಿಗಳ ಹಗ್ಗಜಗ್ಗಾಟದಿಂದ ಕ್ರೀಡಾಪಟುಗಳಿಗೆ(sportsmen) ಮಾತ್ರ ಇದುವರೆಗೂ ಬಳಕೆಗೆ ಸಿಕ್ಕಿಲ್ಲ. 2018 ರಲ್ಲಿ ತುಮಕೂರು(Tumkur) ಜಿಲ್ಲೆಯ ಕ್ರೀಡಾಪಟುಗಳ ಅನುಕೂಲಕ್ಕೆಂದು ಸ್ಮಾರ್ಟ್ ಸಿಟಿ(Smart city) ಅನುದಾನದಡಿ 66 ಕೋಟಿ ವೆಚ್ಚದಲ್ಲಿ ಈ ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಈ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಿದ್ದಾರೆ. ಇದಾದ ಬಳಿಕ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳನ್ನು ಪೂರ್ನ ಗೊಳಿಸಿ ಕಳೆದ ಮಾರ್ಚ್ನಲ್ಲೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಯುವ ಸಬಲಿಕರಣ ಇಲಾಖೆಗೆ ಗ್ರೌಂಡ್ ಸುಪರ್ದಿಗೆ ಪಡೆಯುವಂತೆ ಸೂಚಿಸಿದ್ದಾರೆ. ಯುವ ಸಬಲಿಕರಣ ಇಲಾಖೆ ಆಯುಕ್ತರು ಸಹ ತುಮಕೂರು ಜಿಲ್ಲಾ ಸಬಲಿಕರಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇಷ್ಟಾದ್ರೂ ಕ್ರೀಡಾಪಟುಗಳಿಗೆ ಗ್ರೌಂಡ್ ಗೇಟ್ ತೆರೆದಿಲ್ಲ. ತುಮಕೂರು ಜಿಲ್ಲಾಡಳಿತ ಹಾಗೂ ಯುವ ಸಬಲಿಕರಣ ಇಲಾಖೆ ಗ್ರೌಂಡನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮೀನಾ ಮೇಷಾ ಮಾಡ್ತಿದ್ದಾರೆ. ಕ್ರೀಡಾಪಟುಗಳು ಪ್ರಶ್ನೆ ಮಾಡಿದ್ರೆ ಟೆಕ್ನಿಕಲ್ ಪ್ರಾಬ್ಲಂ ಇದೆ ಅಂತ ಸಬೂಬಹ ಹೇಳ್ತಿದ್ದಾರೆ. ಜಿಲ್ಲೆಯಲ್ಲಿ ಹೈಟೆಕ್ ಮಾದರಿಯ ಕ್ರೀಡಾಂಗಣ ಇದ್ರೂ ನಮಗೆ ಸಿಗ್ತಿಲ್ಲ.. ಪ್ರಾಕ್ಟಿಸ್ ಇಲ್ಲದೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗಿಯಾಗಲು ಕ್ರೀಡಾಪಟುಗಳಿಗೆ ಸಾಧ್ಯವಾಗ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮಕ್ಕಳು ಶಾಲೆಗೆ ಹೋಗಿದ್ದಾರಾ.. ಪೋಷಕರೇ ಎಚ್ಚರ ! ಅಪಹರಣಕಾರರ ಪತ್ತೆ ಹಚ್ಚದ ಖಾಕಿ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!